Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Sarala Maheshawari is no more ರಾಜೀವ್‌ ಗಾಂಧಿ ಸಾವಿನ ಸುದ್ದಿ ತಿಳಿಸಿದ್ದ ಡಿಡಿ ನ್ಯೂಸ್ ಆ್ಯಂಕರ್ ಸರಳಾ ಮಹೇಶ್ವರಿ ಇನ್ನಿಲ್ಲ
ದೇಶಪ್ರಮುಖ

Sarala Maheshawari is no more ರಾಜೀವ್‌ ಗಾಂಧಿ ಸಾವಿನ ಸುದ್ದಿ ತಿಳಿಸಿದ್ದ ಡಿಡಿ ನ್ಯೂಸ್ ಆ್ಯಂಕರ್ ಸರಳಾ ಮಹೇಶ್ವರಿ ಇನ್ನಿಲ್ಲ

Share
2 Min Read
SHARE

https://youtube.com/shorts/PRG7YTSZHd8?si=BMsmmRTf3CzVSrft

Subscribe ನ್ಯೂಸಿಕ್ಸ್ ಕನ್ನಡ

newsics.com

ನವದೆಹಲಿ: ಡಿಡಿ ವಾಹಿನಿಯ ಖ್ಯಾತ ನಿರೂಪಕಿ ಸರಳಾ ಮಹೇಶ್ವರಿ (71) ನಿಧನರಾಗಿದ್ದಾರೆ.

1980ರ ಕಾಲಘಟ್ಟದಲ್ಲಿ ಸರಳಾ ಮಹೇಶ್ವರಿ ಖ್ಯಾತ ನಿರೂಪಕಿಯಾಗಿ ಗುರುತಿಸಿಕೊಂಡಿದ್ದರು. ಹೆಸರಿಗೆ ತಕ್ಕಂತೆ ಸರಳವಾಗಿಯೇ ಕಾಣಿಸಿಕೊಳ್ಳುತ್ತಿದ್ದ ಸರಳಾ ಮಹೇಶ್ವರಿ ಅವರು, ತಮ್ಮ ವಾರ್ತಾ ವಾಚನದಿಂದಲೇ ಪ್ರಸಿದ್ಧರಾಗಿದ್ದರು.

1991ರಲ್ಲಿ ರಾಜೀವ್ ಗಾಂಧಿಯವರು ಆತ್ಮಾಹುತಿ ಬಾಂಬ್ ದಾಳಿಗೆ ಬಲಿಯಾಗಿದ್ದಾಗ, ಇದೇ ಸರಳಾ ಅವರು ಇಡೀ ದೇಶಕ್ಕೆ ಈ ನೋವಿನ ಸುದ್ದಿ ಬಿತ್ತರಿಸಿದ್ದರು. ಅಲ್ಲದೇ ಸ್ಥಳಕ್ಕೇ ಧಾವಿಸಿ, ರಾಜೀವ್ ಹತ್ಯೆ ವರದಿಯನ್ನು ಜನರ ಮುಂದಿಟ್ಟಿದ್ದರು.

1997ರಲ್ಲಿ ನೊಬೇಲ್ ಪ್ರಶಸ್ತಿ ಪುರಸ್ಕೃತೆ ಮದರ್ ಥೆರೆಸಾ ಕೊನೆಯುಸಿರೆಳೆದಾಗಲೂ ಪಶ್ಚಿಮ ಬಂಗಾಳಕ್ಕೆ ತೆರಳಿ, ಅಂತ್ಯ ಸಂಸ್ಕಾರವನ್ನು ವರದಿ ಮಾಡಿದ್ದರು. ತಮ್ಮ ಯಶಸ್ಸಿನ ಹಿಂದೆ ತಂದೆಯವರ ಪ್ರೋತ್ಸಾಹವಿದೆ ಎಂದು ಅವರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು.

ಸರಳಾ ಮಹೇಶ್ವರಿ ಅವರಿಗೆ ಡಿಡಿ ನ್ಯೂಸ್ ಸಂತಾಪ ಸೂಚಿಸಿ, ಎಕ್ಸ್ ಖಾತೆಯಲ್ಲಿ ಸರಳಾ ಅವರ ಫೋಟೋ ಶೇರ್ ಮಾಡಿಕೊಂಡಿದೆ.

ಸರಳಾ ಮಹೇಶ್ವರಿ ಅವರ ವಾರ್ತೆ ನಿರೂಪಣೆಗೂ ಇಂದಿನ ಆ್ಯಂಕರ್ ವಾಚನಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಸರಳ ಮಹೇಶ್ವರಿ ಅವರು ರಾಜ್ಯಸಭೆ ಮಾಜಿ ಸದಸ್ಯರಾಗಿದ್ದರು.

ಡಿಡಿ ನ್ಯೂಸ್ ನಿರೂಪಕಿ

ಆಗಿನ್ನೂ ಟಿವಿ ಎಲ್ಲರ ಮನೆಗೂ ಕಾಲಿಡುತ್ತಿದ್ದ ಸಮಯ. ಎಲ್ಲರ ಮನೆಯಲ್ಲಿಯೂ ಬ್ಲ್ಯಾಕ್ ಆ್ಯಂಡ್ ವೈಟ್ ಟಿವಿ ಸಾಮಾನ್ಯವಾಗಿ ಇರುತ್ತಿತ್ತು. ಎಲ್ಲಿಯೋ ಊರಲ್ಲಿ ಒಂದಿಬ್ಬರ ಮನೆಯಲ್ಲಿ ಟಿವಿ ಇರುತ್ತಿತ್ತು. ಅದರಲ್ಲಿಯೂ ಕಲರ್ ಟಿವಿ ಅಂದ್ರೆ ಸಾಮಾನ್ಯವಾಗಿ ಎಟುಕದ ನಕ್ಷತ್ರ. ಅಂಥ ಟೈಮಲ್ಲಿ ವಾರದಲ್ಲೊಮ್ಮೆ ಪ್ರಸಾರವಾಗುತ್ತಿದ್ದ ರಾಮಾಯಣ, ಮಹಾಭಾರತ ಧಾರಾವಾಹಿಗಳ ಜತೆ ದಿನಕ್ಕೊಂದೆರಡು ಸಲ ಪ್ರಸಾರವಾಗುವ ಬುಲೆಟಿನ್ಸ್‌ಗೆ ಜನರು ಕಾತುರದಿಂದ ಕಾಯುತ್ತಿದ್ದರು.

ಜರ್ನಲಿಸಂ ಅಂದ್ರೆ ಹೆಣ್ಣು ಮಕ್ಕಳು ದೂರವೇ ಉಳಿಯುತ್ತಿದ್ದ ಕಾಲದಲ್ಲಿ, ಎಲ್ಲರಿಗೂ ನ್ಯೂಸ್ ಆ್ಯಂಕರ್ ಆಗಬೇಕೆಂಬ ಆಸೆ ಹುಟ್ಟಿಸಿದ ಕೆಲವೇ ಕೆಲವು ನ್ಯೂಸ್ ರೀಡರ್‌ಗಳಲ್ಲಿ ಸರಳ ಪ್ರಮುಖರು.

ದೂರದರ್ಶನದಲ್ಲಿ ಸ್ಕ್ರೀನ್ ರೈಟರ್ ಆಗಿ ಕೆಲಸಕ್ಕೆ ಸೇರಿಕೊಂಡಿದ್ದ ಸರಳಾ ಮಹೇಶ್ವರಿಯವರು, ಅಲ್ಲಿಯೇ ನ್ಯೂಸ್ ರೀಡರ್ ಆಗಿ ಮುಂದುವರಿದರು. ನಂತರ ದಿಲ್ಲಿ ವಿಶ್ವವಿದ್ಯಾಲಯದಲ್ಲಿ ಪಾಠ ಮಾಡುತ್ತಿದ್ದ ಸರಳಾ ಅವರು, ಸಂಜೆ ವೇಳೆ ದೂರದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. 80ರ ದಶಕದಲ್ಲಿ ಬ್ಲ್ಯಾಕ್ ಆ್ಯಂಡ್ ವೈಟ್ ಟಿವಿಯಿಂದ ಕಲರ್ ಟಿವಿಗೆ ಜನರು ಶಿಫ್ಟ್ ಆಗುತ್ತಿದ್ದ ವೇಳೆಯಲ್ಲಿ ಭಾರತದಲ್ಲಿ ನಡೆದ ಏಷ್ಯನ್ ಗೇಮ್ಸ್ ಅನ್ನು ರಸವತ್ತಾಗಿ ಆ್ಯಂಕರಿಂಗ್ ಮಾಡಿದ್ದರು.

https://x.com/i/status/2021864049206800805

Compensation ಅಮೆರಿಕ ರಸ್ತೆ ಅಪಘಾತದಲ್ಲಿ ಮೃತಪಟ್ಟ ಭಾರತೀಯ ವಿದ್ಯಾರ್ಥಿನಿ ಜಾಹ್ನವಿ ಕುಟುಂಬಕ್ಕೆ 260 ಕೋಟಿ ರೂ. ಪರಿಹಾರ

Vijay Mallya ತಕ್ಷಣ ಭಾರತಕ್ಕೆ ಮರಳಿ: ವಿಜಯ್ ಮಲ್ಯಗೆ ಕೊನೆ ಅವಕಾಶ ನೀಡಿದ ಕೋರ್ಟ್

ASTRO secrets ರಾಶಿ ಹೊಂದಾಣಿಕೆಯಿದ್ದರೆ ಸಿಗತ್ತೆ ಭಾರೀ ಲೈಂಗಿಕ ತೃಪ್ತಿ! ಯಾವ್ಯಾವ ರಾಶಿ ಮಹಿಳೆಯರ ಪ್ರಣಯಾಸಕ್ತಿ ಹೇಗೆ?

TAGGED:DD News anchor Sarala Maheshwari is no more
Share This Article
Facebook Twitter Copy Link Print
Previous Article Vijay Mallya ತಕ್ಷಣ ಭಾರತಕ್ಕೆ ಮರಳಿ: ವಿಜಯ್ ಮಲ್ಯಗೆ ಕೊನೆ ಅವಕಾಶ ನೀಡಿದ ಕೋರ್ಟ್
Next Article ಮೊದಲ ಬಾರಿಗೆ ಡಿವೋರ್ಸ್ ಬಗ್ಗೆ ಮಾತನಾಡಿದ ನಟಿ ಮಯೂರಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?