https://youtube.com/shorts/Z1cy8EQaCVE?si=-_cWMt02yPVoM0xd
Subscribe ನ್ಯೂಸಿಕ್ಸ್ ಕನ್ನಡ
newsics.com
ನವದೆಹಲಿ: ಮಸ್ಕತ್ ನಿಂದ ಮಂಗಳೂರಿಗೆ ಸ್ಥಗಿತವಾಗಿದ್ದ ನೇರ ವಿಮಾನ ಸೇವೆಯನ್ನು ಪುನರಾರಂಭಿಸಲಾಗುವುದು ಎಂದು ಕೇಂದ್ರ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ತಿಳಿಸಿದ್ದಾರೆ.
ಮಸ್ಕತ್ ಮತ್ತು ಕರಾವಳಿ ಪ್ರದೇಶದ ಅನಿವಾಸಿ ಭಾರತೀಯರು ಮಸ್ಕತ್ ನಿಂದ ಮಂಗಳೂರಿಗೆ ನೇರ ವಿಮಾನ ಸೇವೆ ಪ್ರಾರಂಭಿಸಬೇಕೆಂದು ಒತ್ತಾಯಿಸಿದ್ದರು. ಈ ಬಗ್ಗೆ ಕೇಂದ್ರ ಸಚಿವರಿಗೆ ಪತ್ರ ಬರೆದಿದ್ದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಸ್ಕತ್ -ಮಂಗಳೂರು ವಿಮಾನ ಸೇವೆ ಪುನಾರಂಬಿಸುವಂತೆ ಮನವಿ ಮಾಡಿದ್ದರು.
ಸಂಸದರ ಮನವಿಗೆ ಸಚಿವರು ಸ್ಪಂದಿಸಿದ್ದು, ಏರ್ ಇಂಡಿಯಾ ಜೊತೆಗೆ ಸಮಾಲೋಚನೆ ನಡೆಸಲಾಗಿದೆ. 2026ರ ಮಾರ್ಚ್ ನಿಂದ ಜಾರಿಗೆ ಬರುವಂತೆ ಮಸ್ಕತರ್ ನಿಂದ ಮಂಗಳೂರಿಗೆ ನೇರ ವಿಮಾನ ಸೇವೆಯ ಕಾರ್ಯಾಚರಣೆ ಪುನರಾರಂಭಿಸಲು ಏರ್ ಇಂಡಿಯಾ ನಿರ್ಧಾರ ತೆಗೆದುಕೊಂಡಿದೆ. ಈ ಕುರಿತಾಗಿ ಏರ್ ಇಂಡಿಯಾ ಮಾಹಿತಿ ನೀಡಿದ್ದು ಟಿಕೆಟ್ ಬುಕಿಂಗ್ ಸೌಲಭ್ಯ ಪ್ರಸ್ತುತ ಲಭ್ಯವಿದೆ ಎಂದು ಸಚಿವರು ತಿಳಿಸಿದ್ದಾರೆ.