Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದಲ್ಲಿ ಮತ್ತೆ ಪವರ್​ ಪಾಲಿಟಿಕ್ಸ್ ಶುರು – ಕುತೂಹಲ ಮೂಡಿಸಿದ ಸಿಎಂ-ಡಿಸಿಎಂ ನಡೆ
ಕರ್ನಾಟಕಪ್ರಮುಖ

ರಾಜ್ಯದಲ್ಲಿ ಮತ್ತೆ ಪವರ್​ ಪಾಲಿಟಿಕ್ಸ್ ಶುರು – ಕುತೂಹಲ ಮೂಡಿಸಿದ ಸಿಎಂ-ಡಿಸಿಎಂ ನಡೆ

Share
2 Min Read
SHARE

https://youtube.com/shorts/Z1cy8EQaCVE?si=-_cWMt02yPVoM0xd

Subscribe ನ್ಯೂಸಿಕ್ಸ್ ಕನ್ನಡ

newsics.com

ಬೆಂಗಳೂರು : ಕರ್ನಾಟಕ ಕಾಂಗ್ರೆಸ್ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾವಣೆ ಸದ್ದು ಮತ್ತೆ ಜೋರಾಗಿದೆ. ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿಯಾಗಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಚನ್ನರಾಜಹಟ್ಟಿಹೊಳಿ ಹೇಳಿದರೆ, ಕೊಪ್ಪಳ ಕ್ಷೇತ್ರದ ಶಾಸಕ ರಾಘವೇಂದ್ರ ಹಿಟ್ನಾಳ್‌, ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂಬ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.

ಈ ನಡುವೆ ಕಾಂಗ್ರೆಸ್‌‍ ನಲ್ಲೂ ರೆಸಾರ್ಟ್‌ ರಾಜಕೀಯ ಶುರುವಾಗಲಿದೆ. ಗೋವಾದ ರೆಸಾರ್ಟ್‌ನಲ್ಲಿ ಕಾಂಗ್ರೆಸ್‌‍ನ ಪ್ರಭಾವಿ ನಾಯಕರೊಬ್ಬರು 50ಕ್ಕೂ ಹೆಚ್ಚು ರೂಮ್‌ಗಳನ್ನೂ ಕಾಯ್ದಿರಿಸಿದ್ದಾರೆ ಎಂಬ ವದಂತಿಯೂ ಹರಿದಾಡಿತ್ತು. ಆದರೆ ಅದನ್ನು ತಳ್ಳಿ ಹಾಕಲಾಗಿದೆ.

ರಾಜಕೀಯ ಭಿನ್ನರಾಗಗಳ ಮಧ್ಯೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಒಂದೇ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರೂ ಇಬ್ಬರ ನಡುವೆ ಅಷ್ಟೇನೂ ಮಾತುಕತೆ ನಡೆಯಲಿಲ್ಲ. ಒಬ್ಬರಿಗೊಬ್ಬರು ಔಪಚಾರಿಕವಾಗಿ ಮಾತುಕತೆ ನಡೆಸಿದರಾದರೂ, ಮೊದಲಿನ ಅನ್ಯೋನ್ಯತೆ ಕಂಡು ಬರಲಿಲ್ಲ. ಇಬ್ಬರು ತಮ್ಮ ಪಾಡಿಗೆ ತಾವು ಅನ್ಯಮನಸ್ಕರಾಗಿ ವೇದಿಕೆಯಲ್ಲಿ ಕಾಣಿಸಿಕೊಂಡರು.

ಸಮಯ ಕಳೆಯಲು ಡಿ.ಕೆ.ಶಿವಕುಮಾರ್‌ ಅವರು ಕಾರ್ಯಕ್ರಮ ಆಯೋಜಕರನ್ನು ಕರೆದು ಸಲಹೆ ಸೂಚನೆ ನೀಡುವ ಮೂಲಕ ಸಕ್ರಿಯವಾಗಿರಲು ಯತ್ನಿಸಿದರು. ಆ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಡಿ.ಕೆ.ಶಿವಕುಮಾರ್‌ ಅವರನ್ನೇ ನೋಡುತ್ತಲಿದ್ದರು. ಈ ಹಂತದಲ್ಲಿ ಸೌಜನ್ಯಕ್ಕಾದರೂ ಡಿ.ಕೆ.ಶಿವಕುಮಾರ್‌ ಮತ್ತು ಸಿದ್ದರಾಮಯ್ಯ ಪರಸ್ಪರ ಮಾತನಾಡಲಿಲ್ಲ. ತಮ್ಮ ಪಾಡಿಗೆ ತಾವು ಇದ್ದು ಬಿಟ್ಟರು.

ಅಧಿಕಾರ ಹಂಚಿಕೆಯ ಬಗ್ಗೆ ಹೈಕಮಾಂಡ್‌ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳುತ್ತಿದ್ದ ಡಿ.ಕೆ.ಶಿವಕುಮಾರ್‌ ದೆಹಲಿಯಲ್ಲಿ ವರಿಷ್ಠರ ಭೇಟಿಯ ಬಳಿಕ ಕಾಲವೇ ಉತ್ತರ ನೀಡುತ್ತದೆ ಎಂದು ಹೇಳಲಾರಂಭಿಸಿದ್ಧಾರೆ.

ವಿಧಾನಸಭೆ ಚುನಾವಣೆಯಲ್ಲಿ 136 ಸ್ಥಾನಗಳಲ್ಲಿ ಕಾಂಗ್ರೆಸ್‌‍ ಗೆಲ್ಲುತ್ತದೆ ಎಂದು ಡಿ.ಕೆ.ಶಿವಕುಮಾರ್‌ ಮೊದಲೇ ಅಂದಾಜಿಸಿದ್ದರು ಎಂದರೆ ಅವರು ಎಷ್ಟು ಪೂರ್ವತಯಾರಿ ನಡೆಸಿದ್ದರು ಎಂದು ಊಹಿಸಬಹುದು. ಅವರು ಮುಖ್ಯಮಂತ್ರಿಯಾಗಬೇಕು ಎಂಬುದು ನಮೆಲ್ಲರ ಬಯಕೆಯಾಗಿದೆ ಎಂದರು.

ಗೋವಾದಲ್ಲಿ ರೆಸಾರ್ಟ್‌ ರಾಜಕಾರಣ ಮಾಡಲು ತಯಾರಿಯಾಗಿದೆ ಎಂಬುದು ಸುಳ್ಳು, ಡಿ.ಕೆ.ಶಿವಕುಮಾರ್‌ ಹುಟ್ಟಾ ಕಾಂಗ್ರೆಸ್ಸಿಗರು. ಯಾವತ್ತೂ ಅವರು ಗುಂಪುಗಾರಿಕೆ ಮಾಡುವುದಿಲ್ಲ. ರೆಸಾರ್ಟ್‌ ರಾಜಕೀಯ ಕಾಂಗ್ರೆಸ್‌‍ನಲ್ಲಿ ಇಲ್ಲ. ಅಧಿಕಾರ ಹಂಚಿಕೆ ಹೈಕಮಾಂಡ್‌ ನ ನಿರ್ಧಾರಕ್ಕೆ ಸಂಬಂಧಿಸಿದ ವಿಷಯ. ಅವರು ಯಾವತ್ತೂ ಸಮಯ ನಿಗದಿ ಮಾಡುತ್ತಾರೋ ಅಂದು ನೆರವೇರಲಿದೆ ಎಂದು ಹೇಳಿದರು.

ಕೊಪ್ಪಳದಲ್ಲಿ ಮಾತನಾಡಿರುವ ರಾಘವೇಂದ್ರ ಹಿಟ್ನಾಳ್‌, ಹೈಕಮಾಂಡ್‌ ನಾಯಕತ್ವ ಬದಲಾವಣೆಯಾಗಲಿದೆ ಎಂದು ಹೇಳಿಲ್ಲ. ಹಾಗೇ ಹೇಳದೆ ಇದ್ದರೆ ಸಿದ್ದರಾಮಯ್ಯ ಅವರು ಐದು ವರ್ಷ ಅಧಿಕಾರ ಪೂರ್ಣಗೊಳಿಸುತ್ತಾರೆ ಎಂಬ ವಿಶ್ವಾಸ ನಮಲ್ಲಿದೆ. ಸಚಿವ ಸಂಪುಟ ಪುನರ್‌ ರಚನೆಯೂ ಶೀಘ್ರದಲ್ಲೇ ನಡೆಯಲಿದೆ. ತಮಗೂ ಅವಕಾಶ ಸಿಗಲಿದೆ ಎಂದು ಹೇಳಿದ್ದಾರೆ.

https://www.newsics.com/2026/02/14/learn-ai-or-leave-the-company-googles-advice-to-employees/

 

TAGGED:Power politics has started again in the state - CM-DCM's move has aroused curiosity
Share This Article
Facebook Twitter Copy Link Print
Previous Article ಎಐ ಕಲಿಯಿರಿ, ಇಲ್ಲ ಕಂಪೆನಿ ಬಿಡಿ – ಉದ್ಯೋಗಿಗಳಿಗೆ ‘ಗೂಗಲ್’ ಸೂಚನೆ!
Next Article ಒಂದು ಹುಡುಗನಿಗಾಗಿ ಇಬ್ಬರು ಯುವತಿಯರು ಜಗಳ ಕೊಲೆಯಲ್ಲಿ ಅಂತ್ಯ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?