https://youtube.com/shorts/lXpfR5AMayg?si=7veIYlHbfMC24bIz
Subscribe ನ್ಯೂಸಿಕ್ಸ್ ಕನ್ನಡ
newsics.comcom
ಹಂಪಿ ಸಮೀಪದ ಸಾಣಾಪುರದಲ್ಲಿ ವಿದೇಶಿ ಪ್ರವಾಸಿ ಮಹಿಳೆ ಮೇಲೆ ಅತ್ಯಾಚಾರ ಹಾಗೂ ಅಮೆರಿಕದ ಪ್ರವಾಸಿಗನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ ನ್ಯಾಯಾಲಯ ಐತಿಹಾಸಿಕ ತೀರ್ಪು ನೀಡಿದೆ.
ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸಷೆನ್ಸ್ ನ್ಯಾಯಾಲಯವು ಮೂವರು ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಿ ಆದೇಶಿಸಿದೆ.
ಗಂಗಾವತಿಯ ಸಾಯಿನಗರದ ಮಲ್ಲೇಶ್ (ಹಂದಿಮಲ್ಲ), ಸಾಯಿ (ಚೈತನ್ಯಸಾಯಿ) ಹಾಗೂ ಶರಣಪ್ಪ (ಶರಣು ಬಸವರಾಜ್) ಈ ಶಿಕ್ಷೆಗೆ ಒಳಗಾದ ಅಪರಾಧಿಗಳು.
2025ರ ಮಾರ್ಚ್ ತಿಂಗಳಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹಂಪಿಯ ಸಾಣಾಪೂರ ಬಳಿ ಈ ಪೈಶಾಚಿಕ ಕೃತ್ಯ ನಡೆದಿತ್ತು. ಇಸ್ರೇಲ್ ಮೂಲದ ಮಹಿಳೆಯ ಮೇಲೆ ಅಮಾನವೀಯವಾಗಿ ಅತ್ಯಾಚಾರವೆಸಗಿದ್ದರು. ಈ ಘಟನೆಯಲ್ಲಿ ವಿದೇಶಿ ಯುವಕನ ಕೊಲೆಯಾಗಿತ್ತು.ಘಟನೆ ನಡೆದ ಕೆಲವೇ ದಿನಗಳಲ್ಲಿ ಕೃತ್ಯ ಎಸಗಿದವರ ಬಂಧನವಾಗಿತ್ತು.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಹಾಗೂ ಶರಣಪ್ಪ ಮೂವರ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ ದಾಖಲಾಗಿತ್ತು. ಬಳಿಕ ಪೊಲೀಸರು ಅತ್ಯಂತ ಚುರುಕಾಗಿ ತನಿಖೆ ನಡೆಸಿ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣದಲ್ಲಿ ಮಲ್ಲೇಶ್ ಅಲಿಯಾಸ್ ಹಂದಿಮಲ್ಲ, ಸಾಯಿ ಮತ್ತು ಶರಣಪ್ಪ ಎಂಬ ಮೂವರನ್ನು ಆರೋಪಿಗಳೆಂದು ಹೆಸರಿಸಲಾಗಿತ್ತು. ಸುದೀರ್ಘ ವಿಚಾರಣೆ ನಡೆಸಿದ ಗಂಗಾವತಿಯ ಹೆಚ್ಚುವರಿ ಸತ್ರ ನ್ಯಾಯಾಲಯವು, ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಈ ಮೂವರೂ ದೋಷಿಗಳು ಎಂದು ಆದೇಶಿಸಿತ್ತು.