https://youtube.com/shorts/lXpfR5AMayg?si=7veIYlHbfMC24bIz
Subscribe ನ್ಯೂಸಿಕ್ಸ್ ಕನ್ನಡ
newsics.com
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸದ್ಯ ನಟ ದರ್ಶನ್ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾರೆ. ಈ ಮಧ್ಯೆ ಜೂನ್ ನಲ್ಲಿ ನಟ ದರ್ಶನ್ ಅವರು ಜೈಲಿನಿಂದ ಬಿಡುಗಡೆಯಾಗುತ್ತಾರೆ ಎಂದು ಖ್ಯಾತ ಜ್ಯೋತಿಷಿ ಪ್ರಶಾಂತ್ ಕಿಣಿ ಸ್ಪೋಟಕ ಭವಿಷ್ಯ ನುಡಿದಿದ್ದಾರೆ.
ಇದೇ ಜ್ಯೋತಿಷಿಯು ರಾಜಕಾರಣಿಯೊಬ್ಬರು ಸಾವಿಗೀಡಾಗುತ್ತಾರೆ ಎಂದು ಭವಿಷ್ಯ ನುಡಿದ ಬೆನ್ನಲ್ಲೆ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಮೃತಪಟ್ಟಿದ್ದರು. ಆ ಸಂದರ್ಭದಲ್ಲಿ ಜ್ಯೋತಿಷಿ ಹೇಳಿದ್ದ ಮಾತುಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು. ಸದ್ಯ ನಟ ದರ್ಶನ್ ಜಾಮೀನಿನ ಬಗ್ಗೆಗೂ ಹೇಳಿರುವುದು ವೈರಲ್ ಆಗಿದೆ.
ಪ್ರಶಾಂತ್ ಕಿಣಿ ರಾಜಕೀಯ, ಸಿನಿಮಾ, ಕ್ರಿಕೆಟ್ ಹಾಗೂ ಹಲವು ಪ್ರಚಲಿತ ವಿದ್ಯಮಾನಗಳ ಕುರಿತು ಟ್ವೀಟ್ ಮಾಡಿ ಭವಿಷ್ಯ ಹೇಳುತ್ತಾರೆ. ಸದ್ಯ ನಟ ದರ್ಶನ್ ಬಗ್ಗೆ ಟ್ವೀಟ್ ಮಾಡಿರುವ ಪ್ರಶಾಂತ್ ಕಿಣಿ, ಚಾಲೆಂಜಿಂಗ್ ಸ್ಟಾರ್ ದರ್ಶನ್ಗೆ ಜೂನ್ 2026 ರ ಒಳಗೆ ಜಾಮೀನು ಸಿಗಲಿದೆ. ಇದು ನೂರಕ್ಕೆ ನೂರು ಸತ್ಯ ಎಂದಿದ್ದಾರೆ.