https://youtube.com/shorts/lXpfR5AMayg?si=7veIYlHbfMC24bIz
Subscribe ನ್ಯೂಸಿಕ್ಸ್ ಕನ್ನಡ
newsics.com
ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿಮ ಹಂತಕ್ಕೆ ತಲುಪಿದ್ದು, ವಿಶೇಷ ತನಿಖಾ ತಂಡ (ಎಸ್ಐಟಿ) ಶೀಘ್ರದಲ್ಲೇ ತನ್ನ ಸಮಗ್ರ ವರದಿಯನ್ನು ಪೊಲೀಸ್ ಕಮಿಷನರ್ಗೆ ಸಲ್ಲಿಸಲು ಸಜ್ಜಾಗಿದೆ.
ಸಿ.ಜೆ. ರಾಯ್ ಆತ್ಮಹತ್ಯೆ ಸಂಬಂಧ ಎಸ್ಐಟಿ ನಾಲ್ಕು ಪ್ರಮುಖ ಆಯಾಮಗಳಲ್ಲಿ ತನಿಖೆ ಕೈಗೊಂಡಿದೆ.
ಐಟಿ ದಾಳಿ, ಉದ್ಯಮ ವ್ಯವಹಾರಗಳು, ಉದ್ಯಮದಲ್ಲಿ ನಡೆದ ಹೂಡಿಕೆಗಳು ಹಾಗೂ ಕೌಟುಂಬಿಕ ವಿಚಾರಗಳ ಕುರಿತು ಸಮಗ್ರ ಪರಿಶೀಲನೆ ನಡೆಸಲಾಗಿದೆ.
ತನಿಖೆಯ ಭಾಗವಾಗಿ ಹಲವು ದಾಖಲೆಗಳು ಮತ್ತು ಕಡತಗಳನ್ನು ಎಸ್ಐಟಿ ಪರಿಶೀಲಿಸಿದೆ. ಕಚೇರಿ ಸಿಬ್ಬಂದಿ, ಅಧಿಕಾರಿಗಳು ಹಾಗೂ ಐಟಿ ಅಧಿಕಾರಿಗಳ ವಿಚಾರಣೆ ನಡೆಸಿ ಹೇಳಿಕೆಗಳನ್ನು ದಾಖಲಿಸಲಾಗಿದೆ. ರಾಯ್ ಕುಟುಂಬದ ಸದಸ್ಯರು ಮತ್ತು ಆಪ್ತರನ್ನೂ ವಿಚಾರಣೆಗೊಳಪಡಿಸಲಾಗಿದೆ.
ರಾಯ್ ಅವರ ಆತ್ಮಹತ್ಯೆ ಕುಟುಂಬದವರಿಗೂ ಅಚ್ಚರಿ ಮೂಡಿಸಿದೆ. ಉದ್ಯಮ ವ್ಯವಹಾರಗಳಲ್ಲಿ ಧೈರ್ಯಶಾಲಿ ಮತ್ತು ಬೋಲ್ಡ್ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಿದ್ದ ಅವರು, ಇಂತಹ ನಿರ್ಧಾರ ಯಾಕೆ ಕೈಗೊಂಡರು ಎಂಬುದು ಇನ್ನೂ ಗೊತ್ತಾಗಿಲ್ಲ. ಆತ್ಮಹತ್ಯೆಯ ಹಿಂದಿನ ನಿಜವಾದ ಕಾರಣ ಇನ್ನೂ ಗುಟ್ಟಾಗಿಯೇ ಉಳಿದಿದೆ.
ಅಂತಿಮ ಹಂತದ ತನಿಖೆ ಪೂರ್ಣಗೊಳಿಸಿರುವ ಎಸ್ಐಟಿ ತಂಡ ಕೆಲವೇ ದಿನಗಳಲ್ಲಿ ಷರಾ ಬರೆದು ತನ್ನ ವರದಿಯನ್ನು ಕಮಿಷನರ್ಗೆ ಸಲ್ಲಿಸಲಿದೆ. ಎಸ್ಐಟಿ ವರದಿ ಮೂಲಕವೇ ಆತ್ಮಹತ್ಯೆಯ ಹಿಂದಿನ ಸತ್ಯಾಂಶಗಳು ಬಹಿರಂಗವಾಗುವ ನಿರೀಕ್ಷೆ ವ್ಯಕ್ತವಾಗಿದೆ.