Subscribe ನ್ಯೂಸಿಕ್ಸ್ ಕನ್ನಡ
newsics.com
ಬೆಂಗಳೂರು: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಿಂದ ಕೈಬಿಡುವಂತೆ JDS ಎಂಎಲ್ಸಿ ಸೂರಜ್ ರೇವಣ್ಣ ಕೋರಿದ್ದ ಮರುಪರಿಶೀಲನಾ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಜಾ ಮಾಡಿದೆ. ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಿಂದ ತಮ್ಮನ್ನು ಕೈಬಿಡುವಂತೆ ಕೋರಿ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರ ಪೀಠ ವಜಾ ಮಾಜಿ ಆದೇಶ ಹೊರಡಿಸಿದ್ದಾರೆ.
ಇನ್ನು ಜೆಡಿಎಸ್ ಕಾರ್ಯಕರ್ತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ಡಾ.ಸೂರಜ್ ರೇವಣ್ಣ ಅವರನ್ನು ಬಂಧಿಸಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು. ಬಳಿಕ ಸೂರಜ್ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿತ್ತು. ಈ ಹಿನ್ನೆಲೆ ಸೂರಜ್ ಒಂದು ತಿಂಗಳ ಬಳಿಕ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು.
ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 2024ರ ಜೂನ್ 22 ರಂದು ಸಂತ್ರಸ್ತ ದೂರು ನೀಡಿದ್ದರು. ಇದರ ಆಧಾರದಲ್ಲಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಾಗಿತ್ತು. ಆರಂಭದಲ್ಲಿ ಹಾಸನದ ಜಿಲ್ಲಾ ಪೊಲೀಸ್ ಠಾಣೆಗೆ ಸಂತ್ರಸ್ತ ದೂರು ನೀಡಲು ಆಗಮಿಸಿದ್ದರು. ಆದರೆ, ನಂತರ ಅದನ್ನು ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರಿಗೆ ವರ್ಗಾಯಿಸಲಾಗಿತ್ತು. ಅದರಂತೆ, ಜೂನ್ 23 ರಂದು ಸೂರಜ್ ರೇವಣ್ಣರನ್ನು ಬಂಧಿಸಲಾಗಿತ್ತು.
https://www.newsics.com/2026/02/17/mangala-ajji-still-drives-an-auto-at-65/