Subscribe ನ್ಯೂಸಿಕ್ಸ್ ಕನ್ನಡ
newsics.com
ಕಳೆದ ವರ್ಷ ಜನವರಿಯಲ್ಲಿ ಬಸ್ ಪ್ರಯಾಣ ದರಕ್ಕೆ 15% ಏರಿಕೆ ಮಾಡಲಾಗಿತ್ತು. ಆ ನಂತರ ಸರ್ಕಾರವು ಪ್ರತಿ ವರ್ಷ ದರ ಪರಿಷ್ಕರಣೆ ಮಾಡುವ ನಿರ್ಣಯ ತೆಗೆದುಕೊಂಡಿತ್ತು. ಆದರೆ ಈ ವರ್ಷ ಇದಕ್ಕೆ ಬ್ರೇಕ್ ಹಾಕಿದೆ.
ರಾಜ್ಯ ಸರ್ಕಾರ ಜಲಮಂಡಳಿ, ವಿದ್ಯುತ್ ಮತ್ತು ಮೆಟ್ರೋ ಮಾದರಿಯಲ್ಲಿ ಪ್ರತಿ ವರ್ಷ ದರ ಪರಿಷ್ಕರಣೆ ಮಾಡುವಂತೆ ಸಾರಿಗೆ ದರಕ್ಕೂ ಅನ್ವಯಿಸಲು ಯೋಜನೆ ಮಾಡಲಾಗಿತ್ತು. ಇದಕ್ಕಾಗಿ ಒಂದು ಸಮಿತಿಯನ್ನು ರಚಿಸಿ, ಆ ಸಮಿತಿಯ ವರದಿಯ ಆಧಾರದ ಮೇಲೆ ದರ ಏರಿಕೆ ಅಥವಾ ಕಡಿತ ಮಾಡುವ ಯೋಜನೆಯಾಗಿತ್ತು. ಆದರೆ ಈ ವರ್ಷ ಇನ್ನೂ ಆ ಸಮಿತಿ ರಚನೆಯಾಗಿಲ್ಲ. ಸಮಿತಿ ರಚನೆಯಾಗದ ಕಾರಣ ಈ ವರ್ಷ ಬಸ್ ಟಿಕೆಟ್ ದರ ಏರಿಕೆ ಮಾಡುವುದಿಲ್ಲ ಎಂದು ಸಚಿವ ರಾಮಲಿಂಗರೆಡ್ಡಿ ಅವರು ಸ್ಪಷ್ಟಪಡಿಸಿದ್ದಾರೆ.
ಸದ್ಯ ದರ ಏರಿಕೆ ಮಾಡುವುದಿಲ್ಲ. ಸಮಿತಿ ರಚನೆಯಾಗಿ ವರದಿ ಬಂದ ನಂತರವೇ ಮುಂದಿನ ನಿರ್ಣಯ ತೆಗೆದುಕೊಳ್ಳಲಾಗುತ್ತದೆ’ ಎಂದು ರಾಮಲಿಂಗಾರೆಡ್ಡಿ ಸ್ಪಷ್ಟನೆ ನೀಡಿದ್ದಾರೆ. ಇದರಿಂದ ರಾಜ್ಯದ ಪುರುಷ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಸಚಿವ ರಾಮಲಿಂಗಾರೆಡ್ಡಿ, ಮುಂದಿನ 6 ತಿಂಗಳಲ್ಲಿ ಸಮಿತಿ ರಚನೆಯಾಗಿ ವರದಿ ನೀಡಿದರೂ, ಈ ವರ್ಷ ದರ ಏರಿಕೆಯ ಸಾಧ್ಯತೆ ಇಲ್ಲ. ಅಂದರೆ 2026ರ ಜನವರಿಯಿಂದ ಏಪ್ರಿಲ್ ಅಥವಾ ಮೇ ತಿಂಗಳವರೆಗೆ ಬಸ್ ದರ ಏರಿಕೆ ಆಗುವುದಿಲ್ಲ ಎಂದು ಅರ್ಥ. ಮುಂದಿನ ವರ್ಷ (2027) ದರ ಪರಿಷ್ಕರಣೆಯ ಸಾಧ್ಯತೆ ಇದೆ ಎಂದು ಸಚಿವರು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯದ ಪುರುಷ ಪ್ರಯಾಣಿಕರು ದೊಡ್ಡ ರಿಲೀಫ್ ಸಿಕ್ಕಿದೆ. ಏಕೆಂದರೆ ಕಳೆದ ವರ್ಷ ಜನವರಿಯಲ್ಲಿ ದರ ಏರಿಕೆಯಾದ ನಂತರ ಪ್ರಯಾಣಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಈಗ ದರ ಏರಿಕೆ ಇಲ್ಲದಿರುವುದರಿಂದ ಪ್ರಯಾಣ ವೆಚ್ಚ ಸ್ಥಿರವಾಗಿರುತ್ತದೆ.
ಮಗನ ಕ್ಲಾಸ್ ಮಿಸ್ ಆಗುತ್ತೆಂದು ಬಸ್ ಹಿಂದೆ ಓಡಿದ ತಾಯಿ; ವೈರಲ್ ವಿಡಿಯೋ ನೋಡಿ