Subscribe ನ್ಯೂಸಿಕ್ಸ್ ಕನ್ನಡ
newsics.com
ಬೆಂಗಳೂರು: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದ ಘಟನೆ ಬಾಗಲಕೋಟೆಯ ಕಿಲ್ಲಾ ಓಣಿಯಲ್ಲಿ ನಡೆದಿದೆ.ಇನ್ನು ಈ ಘಟನೆಯಲ್ಲಿ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಸಿದ್ಧಾರ್ಥ ಗೋಯಲ್ ಅವರ ಮೇಲೆ ಕಲ್ಲು ಬಿದ್ದಿತು. ಈ ವೇಳೆ ಕಲ್ಲು ಅವರಿಗೆ ತಾಕಿದ್ದರಿಂದ ಸಣ್ಣ ಗಾಯವಾಗಿದೆ.
ಮರಾಠ ಸಮುದಾಯದ ವತಿಯಿಂದ ಸಂಜೆ ಸಮಯದಲ್ಲಿ ಶಿವಾಜಿ ಮಹಾರಾಜರ ಜಯಂತಿ ಹಿನ್ನೆಲೆ ಬೃಹತ್ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಕಿಲ್ಲಾದ ಅಂಬಾಭವಾನಿ ದೇವಾಲಯದಿಂದ ಪ್ರಾರಂಭವಾದ ಶಿವಾಜಿ ಮಹಾರಾಜರ ಮೆರವಣಿಗೆ ಪ್ರಮುಖ ರಸ್ತೆಯ ಮೂಲಕ ಬಸವೇಶ್ವರ ವೃತ್ತದಲ್ಲಿ ಹೋಗಿ ಬಳಿಕ ವಲ್ಲಭಭಾಯಿ ಚೌಕ ಮೂಲಕ ಕಿಲ್ಲಾದಲ್ಲಿ ಮುಕ್ತಾಯ ಆಗುತ್ತಿತ್ತು. ಮೆರವಣಿಗೆ ಸಾಗುತ್ತಿದ್ದ ಸಮಯದಲ್ಲಿ ಕೆಲ ದುಷ್ಕರ್ಮಿಗಳು ಕಲ್ಲು ತೋರಾಟ ಮಾಡಿದ್ದಾರೆ.
ಇನ್ನು ಘಟನೆಯ ನಂತರ ಪೊಲೀಸರು ಮತ್ತು ಸ್ಥಳೀಯರ ನಡುವೆ ಸ್ವಲ್ಪ ನೂಕಾಟ ನೂಕಾಟ ನಡೆಯಿತು. ಪರಿಸ್ಥಿತಿಯನ್ನು ಹತೋಟಿಗೆ ತರುವುದಕ್ಕಾಗಿ ಪೊಲೀಸರು ಶ್ರಮಿಸಿದರು. ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿದುಬಂದಿದೆ.
https://www.newsics.com/2026/02/20/famous-bollywood-producer-director-mm-baig-dies-mysteriously/