https://youtube.com/shorts/meQfr5hOsT4?si=BiBl0igLh3sczkdb
Subscribe ನ್ಯೂಸಿಕ್ಸ್ ಕನ್ನಡ
newsics.com
ಬೆಂಗಳೂರು: ಕೆಎಎಸ್ ಅಧಿಕಾರಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹಂಚಿಕೊಂಡಿದ್ದ ಆರೋಪದಡಿ ದಾಖಲಾಗಿದ್ದ ಪ್ರಕರಣದಲ್ಲಿ ಮೈಸೂರಿನ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಶುಕ್ರವಾರ ಮಧ್ಯಾಹ್ನ ಬಂಧಿಸಿದ್ದಾರೆ.
ಮೈಸೂರಿನ ಸ್ನೇಹಮಯಿ ಕೃಷ್ಣ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ನನ್ನ ಫೋಟೋ ಮತ್ತು ನಕಲಿ ದಾಖಲೆ ಜೊತೆಗೆ ಧ್ವನಿ ಕ್ಲಿಪ್ ಹಾಕಿ ಅಪಪ್ರಚಾರ ನಡೆಸುತ್ತಿದ್ದಾರೆ ಎಂಬುವುದು ನಟೇಶ್ ಆರೋಪವಾಗಿದೆ. ಈ ಹಿನ್ನೆಲೆಯಲ್ಲಿ ಅವರು ದೂರು ನೀಡಿದ್ದರು. ಇದೀಗ ಸ್ನೇಹಮಯಿ ಕೃಷ್ಣ ಅವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಮುಡಾ ಮಾಜಿ ಆಯುಕ್ತ ನಟೇಶ್ ದೂರಿನ ಅನ್ವಯ ಸ್ನೇಹಮಯಿ ಕೃಷ್ಣ ವಿರುದ್ಧ FIR ದಾಖಲಾಗಿದೆ. ಸಿಸಿಬಿ ಪೊಲೀಸರು ಮೂರು ಸೆಕ್ಷನ್ ಗಳಲ್ಲಿ ಕೇಸು ದಾಖಲಿಸಿದ್ದು, BNS 336, 335 ಹಾಗೂ 340 ಸೆಕ್ಷನ್ ಅಡಿಯಲ್ಲಿ FIR ದಾಖಲಾಗಿದೆ. ನಕಲಿ ದಾಖಲೆ ಸೃಷ್ಟಿ, ಮಾನಹಾನಿ, ಫೋರ್ಜರಿ ಸೆಕ್ಷನ್ ಗಳಲ್ಲಿ ಕೇಸ್ ದಾಖಲಾದ ಹಿನ್ನೆಲೆ ಕೃಷ್ಣಮಯಿಗೆ ಸಂಕಷ್ಟ ಶುರುವಾಗಿದೆ.
ಸಿಸಿಬಿ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಸ್ನೇಹಮಯಿ ಕೃಷ್ಣ ವಿಚಾರಣೆ ನಡೆಸಲಾಗಿದೆ. ಸಿಸಿಬಿ ಡಿಸಿಪಿ ಖಾಸಿಂ ನೇತೃತ್ವದಲ್ಲಿ ತಡರಾತ್ರಿವರೆಗೂ ವಿಚಾರಣೆ ನಡೆದಿದ್ದು, ಇಂದು ನ್ಯಾಯಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.
ಆಡಿಯೋದಲ್ಲಿ ಮಾತಾಡಿರೋದು ನಟೇಶ್ ಅವರೇ ಎಂದು ಕೃಷ್ಣ ಆರೋಪ ಮಾಡ್ತಿದ್ದಾರೆ. ಸದ್ಯ ಕೃಷ್ಣ ಹೇಳಿಕೆಗಳನ್ನು ದಾಖಲಿಸಿಕೊಂಡಿರುವ ಪೊಲೀಸರು ಆಡಿಯೋ ಸಂಭಾಷಣೆಯಲ್ಲಿರೋ ಮತ್ತೋರ್ವ ವ್ಯಕ್ತಿಯನ್ನು ವಿಚಾರಣೆಗೆ ಒಳಪಡಿಸಲಿದ್ದಾರೆ.