https://youtube.com/shorts/meQfr5hOsT4?si=–SvccKUHgJJVjWK
Subscribe ನ್ಯೂಸಿಕ್ಸ್ ಕನ್ನಡ
newsics.com
ಮಧುಮೇಹವು ಪ್ರಸ್ತುತ ಸಾಂಕ್ರಾಮಿಕ ರೋಗದಂತೆ ಹರಡುತ್ತಿದೆ. ಪ್ರಪಂಚದಾದ್ಯಂತ ಲಕ್ಷಾಂತರ ಜನರು ಇದರಿಂದಾಗಿ ಸಮಸ್ಯೆಗೀಡಾಗುತ್ತಿದ್ದಾರೆ. ಆತಂಕಕಾರಿ ವಿಷಯವೆಂದರೆ ಹೆಚ್ಚಿನ ಸಂಖ್ಯೆಯ ಜನರು ಮಧುಮೇಹ ಪೂರ್ವ ಸ್ಥಿತಿಗೆ ಬಲಿಯಾಗಿದ್ದಾರೆ. ಆದರೆ ಅವರಿಗೆ ಇದರ ಬಗ್ಗೆ ತಿಳಿದಿರುವುದಿಲ್ಲ.
ಅನೇಕ ಮಧುಮೇಹಿಗಳು ಸಾಮಾನ್ಯವಾಗಿ ಬೆಳಗಿನ ಉಪಾಹಾರ ಸೇವಿಸುವುದಿಲ್ಲ. ಇನ್ನೂ ಕೆಲವರು ತಡವಾಗಿ ಆಹಾರವನ್ನು ಸೇವಿಸುತ್ತಾರೆ. ಈ ರೀತಿಯ ತಪ್ಪಿನಿಂದಾಗಿ ದೇಹದಲ್ಲಿ ಹೆಚ್ಚಿನ ಮಟ್ಟದ ಸಕ್ಕರೆ ಉತ್ಪತ್ತಿಯಾಗುತ್ತದೆ. ಇದು ಹೃದಯ, ಕಣ್ಣು ಮತ್ತು ಮೂತ್ರಪಿಂಡಗಳ ಮೇಲೆ ನೇರವಾಗಿ ಪರಿಣಾಮ ಬೀರಬಹುದು. ಹಾಗಾಗಿ ಆಹಾರವನ್ನು ಸೇವಿಸುವುದು ಬಹಳ ಮುಖ್ಯವಾಗಿದೆ.
ವಾಸ್ತವವಾಗಿ, ಮಧುಮೇಹ ರೋಗಿಗಳು ದೀರ್ಘಕಾಲ ಊಟ ಮಾಡದೆ ಇರಬಾರದು. ಹೀಗೆ ಮಾಡುವುದರಿಂದ ದೇಹದಲ್ಲಿ ಹೆಚ್ಚಿನ ಇನ್ಸುಲಿನ್ ಹಾರ್ಮೋನುಗಳು ದುರ್ಬಲ ಸ್ಥಿತಿಗೆ ತಲುಪುತ್ತವೆ. ಇದರಿಂದ ಸಕ್ಕರೆ ಪ್ರಮಾಣವು ದೇಹದಲ್ಲಿ ಹೆಚ್ಚಾಗುತ್ತದೆ.
ಆದಾಗ್ಯೂ, ಬೆಳಿಗ್ಗೆ ಇನ್ಸುಲಿನ್ ಅಥವಾ ಔಷಧಿ ತೆಗೆದುಕೊಳ್ಳುವವರು ಊಟ ಮಾಡದಿದ್ದರೆ, ಮಧುಮೇಹ ಹೆಚ್ಚಾಗುವ ಸಾಧ್ಯತೆ ಇರುತ್ತದೆ. ಇದರಿಂದ ನೀವು ಗಂಭೀರ ಸಮಸ್ಯೆಯನ್ನು ಕೂಡಾ ಅನುಭವಿಸಬೇಕಾಗುತ್ತದೆ. ಹಾಗಾಗಿ ನೀವೇನಾದರೂ ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದರೆ, ಉಪಹಾರವನ್ನು ಸೇವಿಸಲೇಬೇಕು.
ಮಧುಮೇಹ ರೋಗಿಗಳು ಬೆಳಿಗ್ಗೆ 8-9 ಗಂಟೆಯೊಳಗೆ ಉಪಾಹಾರ ಸೇವಿಸುವುದು ಉತ್ತಮ. ಇದರ ನಂತರ ಸೇವಿಸುವುದರಿಂದ ದೇಹಕ್ಕೆ ಹಾನಿಯಾಗಬಹುದು. ರಾತ್ರಿ 7-8 ಗಂಟೆಯೊಳಗೆ ಸೇವಿಸಿ ಸ್ವಲ್ಪ ಓಡಾಡುವ ಅಭ್ಯಾಸವನ್ನು ಮಾಡಬೇಕು. ಜೊತೆಗೆ ಹಣ್ಣುಗಳನ್ನು ಸೇವಿಸುವುದರಿಂದ ನಿಮ್ಮ ಸಕ್ಕರೆ ನಿಯಂತ್ರಣದಲ್ಲಿರುತ್ತದೆ.
ರಕ್ತದಲ್ಲಿನ ಸಕ್ಕರೆ ಹಠಾತ್ತನೆ ಹೆಚ್ಚಾದರೆ, ತಕ್ಷಣವೇ ಭಾರವಾದ ಆಹಾರ ಅಥವಾ ಸಿಹಿ ಪದಾರ್ಥಗಳನ್ನು ಸೇವಿಸುವುದನ್ನು ಕೂಡಲೇ ನಿಲ್ಲಿಸಿ. ಬದಲಾಗಿ, ಓಟ್ಸ್, ಸಲಾಡ್, ಹಸಿರು ತರಕಾರಿಗಳು ಮತ್ತು ಫೈಬರ್ ಭರಿತ ಆಹಾರವನ್ನು ಸೇವಿಸಿ. ಇದು ರಕ್ತದಲ್ಲಿನ ಸಕ್ಕರೆಯನ್ನು ವೇಗವಾಗಿ ಹೆಚ್ಚಿ ಸುವುದಿಲ್ಲ ಮತ್ತು ಜೀರ್ಣಕ್ರಿಯೆಯೂ ಚೆನ್ನಾಗಿರುತ್ತದೆ
ಪರಾಠ ಮತ್ತು ಬ್ರೆಡ್ ಸೇವಿಸುವ ಬದಲಿಗೆ ಕಾರ್ಬೋಹೈಡ್ರೇಟ್ಗಳಲ್ಲಿ ಸಮೃದ್ಧವಾದ ಆಹಾರಗಳಾದ ರಾಗಿ, ನವಣೆ, ಸಾಮೆ, ಓಟ್ಸ್ , ಕೆಂಪಕ್ಕಿ ಸೇರಿಸುವುದು ಉತ್ತಮ. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.
ಈ ಸಮಯದಲ್ಲಿ ಹೆಚ್ಚು ಪ್ರೋಟೀನ್ ಸೇವಿಸಬೇಕು. ಮೊಟ್ಟೆ, ಮೀನು ಮತ್ತು ಕೋಳಿ ಮಾಂಸವನ್ನು ನಿಯಮಿತವಾಗಿ ಸೇವಿಸಿ. ಈ ಆಹಾರದಲ್ಲಿ ಉತ್ತಮ ಗುಣಮಟ್ಟದ ಪ್ರೋಟೀನ್ ಇರುತ್ತದೆ. ಈ ಎಲ್ಲಾ ಆಹಾರಗಳನ್ನು ಸೇವಿಸುವುದರಿಂದ ನಿಮ್ಮ ಸಕ್ಕರೆಯನ್ನು ಸುಲಭವಾಗಿ ನಿಯಂತ್ರಣದಲ್ಲಿಡಬಹುದು.