https://youtube.com/shorts/9RsasXrq5aU?si=7o1s1Fcwa742mk87
Subscribe ನ್ಯೂಸಿಕ್ಸ್ ಕನ್ನಡ
newsics.com
ಹುದ್ದೆ ತೋರಿಸದೆ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.
ಹುದ್ದೆ ನಿಗದಿಪಡಿಸದೆ ಅಥವಾ ಸ್ಪಷ್ಟವಾಗಿ ಹೊಸ ಹುದ್ದೆ ತೋರಿಸದೆ ಅಧಿಕಾರಿಗಳನ್ನು ವರ್ಗಾಯಿಸುವಂತಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ. ಈ ರೀತಿಯ ಅಸ್ಪಷ್ಟ ವರ್ಗಾವಣೆ ಕ್ರಮಗಳು ಸರ್ಕಾರದ ಬೊಕ್ಕಸಕ್ಕೆ ನಷ್ಟ ಉಂಟುಮಾಡುವ ಸಾಧ್ಯತೆಯಿದೆ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಕಾಯುವಿಕೆಯ ಅವಧಿಯ ವೇತನವನ್ನು ಕಾರಣಕರ್ತ ಅಧಿಕಾರಿಯಿಂದಲೇ ವಸೂಲು ಮಾಡಿ ಎಂದು ನ್ಯಾ. ಎಸ್.ಜಿ. ಪಂಡಿತ್ ಮತ್ತು ನ್ಯಾ. ಕೆ.ವಿ. ಅರವಿಂದ್ ಅವರಿದ್ದ ಪೀಠ ಆದೇಶಿಸಿದೆ. ಅಬಕಾರಿ ಉಪ ಆಯುಕ್ತ ಕೆ. ಅರುಣ್ ಕುಮಾರ್ ಅವರನ್ನು ಹುದ್ದೆ ತೋರಿಸದೇ 2025ರ ಜ.29ರಂದು ವರ್ಗಾವಣೆ ಮಾಡಲಾಗಿತ್ತು. ಅಂದಿನಿಂದಲೂ ಹುದ್ದೆಯಿಲ್ಲದ ಕಾರಣ ಅವರು ಪೋಸ್ಟಿಂಗ್ಗಾಗಿ ಹೈಕೋರ್ಟ್ ಮೆಟ್ಟಿಲೇರಿ ರಿಟ್ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ಮಾಡಿದ ಕೋರ್ಟ್ ಹುದ್ದೆ ನೀಡದೇ ಅಧಿಕಾರಿಗಳನ್ನು ವರ್ಗಾವಣೆ ಮಾಡಿದರೆ, ಅವರು ಕಾರ್ಯನಿರ್ವಹಿಸದೆ ಮನೆಯಲ್ಲಿ ಉಳಿದರೂ ಸಂಬಳ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಇದರಿಂದ ತೆರಿಗೆದಾರರ ಹಣ ದುರುಪಯೋಗವಾಗುತ್ತದೆ ಎಂದು ತಿಳಿಸಿದೆ.
ಸಾರ್ವಜನಿಕ ಹಣದ ಸಮರ್ಪಕ ಬಳಕೆ ಸರ್ಕಾರದ ಹೊಣೆಗಾರಿಕೆ ಎಂಬುದನ್ನು ನೆನಪಿಸಿದ ನ್ಯಾಯಾಲಯ, ಹುದ್ದೆ ತೋರಿಸುವವರೆಗೆ ಅಧಿಕಾರಿಗಳನ್ನು ಹಿಂದಿನ ಹುದ್ದೆಯಿಂದ ಬಿಡುಗಡೆ ಮಾಡಬಾರದು. ಆಡಳಿತಾತ್ಮಕ ಕ್ರಮಗಳಲ್ಲಿ ಸ್ಪಷ್ಟತೆ ಮತ್ತು ಹೊಣೆಗಾರಿಕೆ ಅಗತ್ಯವಿದೆ ಎಂಬ ಸಂದೇಶವನ್ನು ಈ ಆದೇಶ ನೀಡಿದೆ.
https://www.newsics.com/2026/02/22/i-went-crazy-after-seeing-the-tattoo-i-was-deceived-urfi-javed/