https://youtube.com/shorts/9RsasXrq5aU?si=7o1s1Fcwa742mk87
Subscribe ನ್ಯೂಸಿಕ್ಸ್ ಕನ್ನಡ
newsics.com
ನವದೆಹಲಿ: ‘ಒಂದು ದೇಶ ಒಂದು ಪಡಿತರ ಚೀಟಿ’ ಮಾದರಿಯಲ್ಲೇ ಈಗ ‘ಒಂದು ದೇಶ ಒಂದು ಮತಪಟ್ಟಿ’ ಪರಿಕಲ್ಪನೆಯನ್ನು ಜಾರಿಗೆ ತರಲು ಕೇಂದ್ರ ಚುನಾವಣಾ ಆಯೋಗ ಮುಂದಾಗಿದೆ. ಈ ನಿಟ್ಟಿನಲ್ಲಿ ಮಂಗಳವಾರ ದೆಹಲಿಯ ‘ಭಾರತ ಮಂಟಪ’ದಲ್ಲಿ ರಾಜ್ಯ ಚುನಾವಣಾ ಆಯುಕ್ತರ ರಾಷ್ಟ್ರೀಯ ದುಂಡುಮೇಜಿನ ಸಮ್ಮೇಳನ ಆಯೋಜಿಸಲಾಗಿದ್ದು, ಬರೋಬ್ಬರಿ 27 ವರ್ಷಗಳ ನಂತರ ಇಂತಹ ಬೃಹತ್ ಸಭೆ ನಡೆಯುತ್ತಿರುವುದು ವಿಶೇಷವಾಗಿದೆ.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಈ ಸಭೆಯಲ್ಲಿ 36 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಚುನಾವಣಾ ಆಯುಕ್ತರು ಭಾಗವಹಿಸಲಿದ್ದಾರೆ. ಪ್ರಸ್ತುತ ಚಾಲ್ತಿಯಲ್ಲಿರುವ ಎರಡು ಪದ್ಧತಿಗಳನ್ನು ಸಮನ್ವಯಗೊಳಿಸುವುದು ಇದರ ಮುಖ್ಯ ಉದ್ದೇಶ:
ಕೇಂದ್ರ ಆಯೋಗ: ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳಿಗೆ ಮತದಾರರ ಪಟ್ಟಿ ಸಿದ್ಧಪಡಿಸುತ್ತದೆ.
ರಾಜ್ಯ ಆಯೋಗ: ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಪ್ರತ್ಯೇಕ ಪಟ್ಟಿ ತಯಾರಿಸುತ್ತದೆ.
ಈ ಎರಡು ಪ್ರತ್ಯೇಕ ಪಟ್ಟಿಗಳಿಂದಾಗಿ ಮತದಾರರ ಸಂಖ್ಯೆಯಲ್ಲಿ ವ್ಯತ್ಯಾಸ ಹಾಗೂ ಗೊಂದಲಗಳು ಉಂಟಾಗುತ್ತಿದ್ದು, ಇದನ್ನು ನಿವಾರಿಸಲು ‘ಒಂದೇ ಮತದಾರರ ಪಟ್ಟಿ’ ಅಗತ್ಯ ಎಂದು ಆಯೋಗ ಅಭಿಪ್ರಾಯಪಟ್ಟಿದೆ.
https://www.newsics.com/2026/02/24/thunderstorms-likely-in-five-districts/