https://youtube.com/shorts/9RsasXrq5aU?si=7o1s1Fcwa742mk87
Subscribe ನ್ಯೂಸಿಕ್ಸ್ ಕನ್ನಡ
newsics.com
ತಟಸ್ಥವಾಗಿದ್ದ ಚಿನ್ನ ಬೆಳ್ಳಿ ದರಗಳು 2025ರ ಅಂತ್ಯದ ವೇಳೆಗೆ ಗಣನೀಯವಾಗಿ ಏರಿಕೆಯನ್ನು ಕಂಡವು. ಇದು ಅಂತ್ಯಗೊಳ್ಳದೆ ಇಂದಿಗೂ ಕೂಡ ದುಬಾರಿ ಲೋಹದ ದರ ಗಗನಕ್ಕೆ ಏರುತ್ತಲೇ ಇದೆ. ಇದೀಗ ಭಾರತದ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಚಿನ್ನ ಬೆಳ್ಳಿ ದರ ನಿರಂತರವಾಗಿ ಒಂದೇ ಸಮನೆ ಏರುತ್ತಿರುವುದಕ್ಕೆ ಕಾರಣ ಬಿಚ್ಚಿಟ್ಟಿದ್ದಾರೆ.
ಆರ್ಬಿಐನ 621ನೇ ಕೇಂದ್ರೀಯ ಮಂಡಳಿ ಸಭೆ ಬಳಿಕ ಆರ್ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಜೊತೆ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ನಿರ್ಮಲಾ ಸೀತಾರಾಮನ್ ಅವರು ಅಮೆರಿಕದ ಟ್ಯಾರಿಫ್ ಬದಲಾವಣೆಯ ಪರಿಣಾಮಗಳು, ಚಿನ್ನದ ಆಮದು, ಹಣದುಬ್ಬರ ಇತ್ಯಾದಿ ವಿಚಾರಗಳನ್ನು ಹಂಚಿಕೊಂಡಿದ್ದಾರೆ.ಚಿನ್ನ ಯಾವಾಗಲೂ ಸಾಮಾನ್ಯ ಜನರಿಗೆ ಹೂಡಿಕೆಯಾಗಿದೆ, ಹಬ್ಬದ ಸಮಯದಲ್ಲಿ ಸಾಮಾನ್ಯವಾಗಿ ಏರಿಕೆ ಕಂಡುಬರುತ್ತದೆ. ನಾವು ಅದನ್ನು ಗಮನಿಸುತ್ತಿದ್ದೇವೆ. ಆದರೆ, ಬೆಲೆಗಳು ನಿರ್ದಿಷ್ಟ ಮಿತಿಯನ್ನು ಮೀರಿ ಹೋಗಿಲ್ಲ’ ಎಂದು ಹೇಳಿದರು.
ನಿರ್ಮಲಾ ಸೀತಾರಾಮನ್ ಪ್ರಕಾರ, ಜಾಗತಿಕವಾಗಿ ವಿವಿಧ ಸೆಂಟ್ರಲ್ ಬ್ಯಾಂಕುಗಳು ಚಿನ್ನ, ಬೆಳ್ಳಿಯಂತಹ ಅಮೂಲ್ಯ ಲೋಹಗಳನ್ನು ಸಾಕಷ್ಟು ಪ್ರಮಾಣದಲ್ಲಿ ಖರೀದಿಸಿದ್ದರಿಂದ ಬೇಡಿಕೆ ಹೆಚ್ಚಾಗಿ ಬೆಲೆಯೂ ಯದ್ವಾತದ್ವಾ ಏರಿದೆ.
ಭಾರತದ ಸೆಂಟ್ರಲ್ ಬ್ಯಾಂಕ್ ಆದ ಆರ್ಬಿಐ ಕೂಡ ಚಿನ್ನದ ಖರೀದಿಯನ್ನು ನಿರಂತರವಾಗಿ ಹೆಚ್ಚಿಸುತ್ತಾ ಹೋಗಿತ್ತು. ನಿರ್ಮಲಾ ಸೀತಾರಾಮನ್ ಪ್ರಕಾರ, ಚಿನ್ನ ಮತ್ತು ಬೆಳ್ಳಿಯ ಆಮದು ಆತಂಕ ಪಡುವ ಮಟ್ಟದಲ್ಲಿ ಇಲ್ಲವಂತೆ. ಅದರ ಬಗ್ಗೆ ಆರ್ಬಿಐ ನಿಗಾ ವಹಿಸಿದೆ ಎನ್ನುತ್ತಾರೆ ಅವರು.
https://www.newsics.com/2026/02/24/big-shock-for-our-metro-passengers-ticket-price-hike-fixed/