https://youtube.com/shorts/9RsasXrq5aU?si=7o1s1Fcwa742mk87
Subscribe ನ್ಯೂಸಿಕ್ಸ್ ಕನ್ನಡ
newsics.com
ಶಿವಮೊಗ್ಗ : ಜಗಳ ಬಿಡಿಸಲು ಹೋದ ಎಸ್ಎಸ್ಎಲ್ಸಿ ವಿದ್ಯಾರ್ಥಿ ಒಬ್ಬನನ್ನು ನಾಲ್ವರು ಆತನ ಮೇಲೆ ಹಲ್ಲೆ ಮಾಡಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಸೂಳೆಬೈಲು ಬಡಾವಣೆಯಲ್ಲಿ ನಡೆದಿದೆ. ಈ ಒಂದು ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಐವರು ಅಪರಾಪ್ತರನ್ನು ಅರೆಸ್ಟ್ ಮಾಡಿದ್ದಾರೆ.
ಮೃತ ವಿದ್ಯಾರ್ಥಿ ಸಂಕೇತ್ (15) ಸೂಳೆಬೈಲು ಸರ್ಕಾರಿ ಶಾಲೆಯ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದನು.
ಶಾಲೆಯಲ್ಲಿ ವಿಶೇಷ ತರಗತಿ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಸಂಕೇತ್ನ ಸ್ನೇಹಿತ ಗಿರೀಶ್ ಎಂಬುವವರ ಜೊತೆ ಕೆಲವು ವಿದ್ಯಾರ್ಥಿಗಳು ಜಗಳ ತೆಗೆದಿದ್ದರು. ಈ ಗಲಾಟೆಯನ್ನು ಬಿಡಿಸಲು ಹೋದ ಸಂಕೇತ್ ಮೇಲೆ ದುಷ್ಕರ್ಮಿಗಳು ತೀವ್ರವಾಗಿ ಹಲ್ಲೆ ನಡೆಸಿದ್ದಾರೆ.ನಾಲ್ವರು ಅಪ್ರಾಪ್ತರು ಸೇರಿ ಸಂಕೇತ್ನನ್ನು ಮನಸೋ ಇಚ್ಛೆ ಥಳಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಸಂಕೇತ್ನನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಆತ ಮೃತಪಟ್ಟಿದ್ದಾನೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಐವರು ಅಪ್ರಾಪ್ತ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
https://www.newsics.com/2026/02/24/koppal-is-completely-quiet/