https://youtube.com/shorts/9RsasXrq5aU?si=7o1s1Fcwa742mk87
Subscribe ನ್ಯೂಸಿಕ್ಸ್ ಕನ್ನಡ
newsics.com
ಲಖ್ನೋ: ನೀಟ್ ಸ್ಪರ್ಧಾತ್ಮಕ ಪರೀಕ್ಷೆಗೆ ತಯಾರಿ ನಡೆಸುವಂತೆ ಪದೇ ಪದೇ ಒತ್ತಡ ಹೇರಿದ್ದಕ್ಕೆ ತನ್ನ ತಂದೆಯನ್ನು ಗುಂಡಿಕ್ಕಿ ಕೊಂದು, ದೇಹವನ್ನು ತುಂಡು ಮಾಡಿ ಲಕ್ನೋದ ತಮ್ಮ ಮನೆಯಲ್ಲಿ ಡ್ರಮ್ನಲ್ಲಿ ಬಚ್ಚಿಟ್ಟಿ ಘಟನೆ ಲಖ್ನೋದಲ್ಲಿ ನಡೆದಿದೆ.
ವರ್ಧಮಾನ್ ಪ್ಯಾಥಾಲಜಿಯ ಮಾಲೀಕ ಮನ್ವೇಂದ್ರ ಪ್ರತಾಪ್ ಸಿಂಗ್ ಫೆಬ್ರವರಿ 20 ರಿಂದ ಕಾಣೆಯಾಗಿದ್ದ, ಕಾಣೆಯಾದ ವ್ಯಕ್ತಿಯ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ತನಿಖೆ ಬಳಿಕ ಅವರ ಶವವನ್ನು ಮನೆಯ ಡ್ರಮ್ನೊಳಗೆ ವಶಪಡಿಸಿಕೊಳ್ಳಲಾಗಿದೆ.
ತನಿಖೆಯ ಸಮಯದಲ್ಲಿ, ಪೊಲೀಸರು ಸಿಂಗ್ ಅವರ ಮಗ ಅಕ್ಷತ್ ಪ್ರತಾಪ್ ಸಿಂಗ್ ಅವರನ್ನು ವಿಚಾರಣೆಗೆ ಕರೆದೊಯ್ದಾಗ, ಬೇಸರಗೊಂಡು ತಮ್ಮ ತಂದೆಯನ್ನು ಕೊಂದಿದ್ದಾಗಿ ಒಪ್ಪಿಕೊಂಡಿದ್ದಾನೆ.
ನೀಟ್ಗೆ ತಯಾರಿ ನಡೆಸುವಂತೆ ತಂದೆ ಆಗಾಗ್ಗೆ ಒತ್ತಡ ಹೇರುತ್ತಿದ್ದರು ಮತ್ತು ಗದರಿಸುತ್ತಿದ್ದರು. ಇದು ಮನೆಯಲ್ಲಿ ಪದೇ ಪದೇ ಜಗಳಗಳಿಗೆ ಕಾರಣವಾಗಿತ್ತು.
ಫೆಬ್ರವರಿ 20 ರಂದು ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುವ ಬಗ್ಗೆ ತಂದೆ ಮತ್ತು ಮಗನ ನಡುವೆ ಜಗಳ ನಡೆದಿತ್ತು. ಕೋಪದ ಭರದಲ್ಲಿ ಮಗ ತನ್ನ ತಂದೆಗೆ ಬಂದೂಕಿನಿಂದ ಗುಂಡು ಹಾರಿಸಿ ಸಾವಿಗೆ ಕಾರಣನಾದ ಎಂದು ಡಿಸಿಪಿ ವಿಕ್ರಾಂತ್ ವೀರ್ ಹೇಳಿದ್ದಾರೆ.
ಶವ ಪತ್ತೆಯಾದ ನಂತರ ಹಿರಿಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದರು. ವಿಧಿವಿಜ್ಞಾನ ತಂಡವು ಸ್ಥಳ ಪರಿಶೀಲನೆ ನಡೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಿತು. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದು, ಹೆಚ್ಚಿನ ವಿಚಾರಣೆ ಮತ್ತು ಕಾನೂನು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.
https://www.newsics.com/2026/02/24/man-stripped-naked-and-attacked-with-a-stone-at-will/