https://youtube.com/shorts/OcRzQ68lM7k?si=kBWGhvCtygy6kinF
Subscribe ನ್ಯೂಸಿಕ್ಸ್ ಕನ್ನಡ
newsics.com
ತಾಲಿಬಾನ್ ಆಳ್ವಿಕೆಯಲ್ಲಿರುವ ಅಫ್ಘಾನಿಸ್ತಾನದ ನಂಗರ್ಹಾರ್ ಮತ್ತು ಪಕ್ತಿಕಾ ಪ್ರಾಂತ್ಯಗಳ ಮೇಲೆ ಪಾಕಿಸ್ತಾನವು ವಾಯುದಾಳಿ ನಡೆಸಿದೆ.
ಆ ಪ್ರದೇಶಗಳಲ್ಲಿರುವ ಟಿಟಿಪಿ ಮತ್ತು ಐಎಸ್ಕೆಪಿ ಭಯೋತ್ಪಾದಕ ಸಂಘಟನೆಗಳ ಕ್ಯಾಂಪ್ಗಳ ಮೇಲೆ ದಾಳಿ ನಡೆಸಿರುವುದಾಗಿ ಪಾಕಿಸ್ತಾನ ಹೇಳಿಕೊಂಡಿದೆ. ಆದರೆ, ಈ ದಾಳಿಯಲ್ಲಿ 11 ಮಕ್ಕಳು ಸೇರಿದಂತೆ 17 ಮಂದಿ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನ್ ಹೇಳಿಕೊಂಡಿದೆ. ಪಾಕ್ ಸೇನೆಯ ಕ್ರಮಕ್ಕೆ ಪ್ರತ್ಯುತ್ತರ ನೀಡುವುದಾಗಿಯೂ ಎಚ್ಚರಿಕೆ ನೀಡಿದೆ.
ತಾಲಿಬಾನ್ ಆಡಳಿತವಿರುವ ಅಫ್ಗಾನಿಸ್ತಾನ ವಿರುದ್ಧ ‘ಬಹಿರಂಗ ಯುದ್ಧ’ ಆರಂಭಿಸಿರುವುದಾಗಿ ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಮುಹಮ್ಮದ್ ಆಸಿಫ್ ಶುಕ್ರವಾರ ಘೋಷಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಅವರು, ‘ನಮ್ಮ ತಾಳ್ಮೆಯ ಮಿತಿ ಮೀರಿದೆ. ಇದೀಗ ನಮ್ಮ ಹಾಗೂ ನಿಮ್ಮ ನಡುವೆ ಬಹಿರಂಗ ಯುದ್ಧ ಆರಂಭವಾಗಿದೆ’ ಎಂದು ಹೇಳಿದ್ದಾರೆ. ‘ಇದು ತಾಲಿಬಾನ್ ಜೊತೆಗಿನ ಮುಖಾಮುಖಿ ಸಂಘರ್ಷ’ ಎಂದೂ ಪ್ರಕಟಿಸಿದ್ದಾರೆ.
ಉಭಯ ದೇಶಗಳ ನಡುವಣ ಸಂಬಂಧ ಇತ್ತೀಚಿನ ತಿಂಗಳುಗಳಲ್ಲಿ ಹದಗೆಟ್ಟಿದೆ. ಉಭಯ ದೇಶಗಳ ನಡುವೆ ಗಡಿ ವಿಚಾರವಾಗಿ ತಿಂಗಳುಗಳಿಂದ ನಡೆಯುತ್ತಿರುವ ತಿಕ್ಕಾಟವು ಯುದ್ಧ ಘೋಷಣೆಗೆ ದಾರಿ ಮಾಡಿಕೊಟ್ಟಿದೆ.
ಇದರ ಬೆನ್ನಲ್ಲೇ, ಪಾಕಿಸ್ತಾನ ಸೇನೆಯು ಅಫ್ಗಾನಿಸ್ತಾನದ ಪ್ರಮುಖ ನಗರಗಳ ಮೇಲೆ ಬಾಂಬ್ ದಾಳಿ ನಡೆಸಿದೆ. ‘ಕಾಬೂಲ್, ಪಕ್ತಿಯಾ ಪ್ರಾಂತ್ಯ ಹಾಗೂ ಕಂದಹಾರ್ನಲ್ಲಿ ತಾಲಿಬಾನ್ ರಕ್ಷಣಾ ಕೇಂದ್ರಗಳನ್ನು ಗುರಿಯಾಗಿಸಿದ್ದೆವು’ ಎಂದು ಮಾಹಿತಿ ಸಚಿವ ಅತ್ತಾವುಲ್ಲಾ ತರಾರ್ ಅವರು ಎಕ್ಸ್ನಲ್ಲಿ ತಿಳಿಸಿದ್ದಾರೆ.
https://www.newsics.com/2026/02/27/excise-policy-case-arvind-kejriwal-manish-sisodia-acquitted/