newsics.com
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ ಆಗಿದೆ.ಹದಿನಾರು ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ, ಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನಲೆಯಲ್ಲಿ ಹಾಗೂ ಅಡ್ಡಪರಿಣಾಮ ತಡೆಗಟ್ಟುವ ಹಿನ್ನೆಲೆಯಲ್ಲಿ 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ನಿಷೇಧ ಮಾಡಲಾಗಿದೆ. ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಬಿ ಆರ್ ಸಿ ಕೇಂದ್ರಗಳಲ್ಲಿ ಓರ್ವ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರ ನೇಮಕ ಮಾಡಲಾಗುವುದು ಎಂದು ಬಜೆಟ್ನಲ್ಲಿ ಸಿಎಂ ಘೋಷಿಸಿದ್ದಾರೆ.
ವಿಕ್ಟೋರಿಯಾ ಆಸ್ಪತ್ರೆ ಇನ್ಮುಂದೆ ಶಾಂತವೇರಿ ಗೋಪಾಲಗೌಡ ಆಸ್ಪತ್ರೆ ಎಂದು ಮರುನಾಮಕರಣಕ್ಕೆ ನಿರ್ಧಾರ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾರವಾರ, ಯಾದಗಿರಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುವುದು. ತಲಾ 100 ಕೋಟಿ ರೂ. ವೆಚ್ಚದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಲಾಗುತ್ತಿದೆ. ಮುನಿರಾಬಾದ್-ಟಿ.ಬಿ ಡ್ಯಾಂ ಬಳಿ ಕ್ಯಾನ್ಸರ್ ಆಸ್ಪತ್ರೆ ಸ್ಥಾಪನೆಗೆ ನಿರ್ಧರಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಮೀನುಗಾರಿಕೆಗಾಗಿ ಪೋತ್ರಾಹಧನ 20 ಸಾವಿರ ರೂ.ಗೆ ಏರಿಕೆ ಮಾಡಲಾಗಿದೆ. ಮಂಗಳೂರು ಮೀನುಗಾರಿಕಾ ವಿವಿಯಲ್ಲಿ ಸೆಂಟರ್ ಆಫ್ ಎಕ್ಸ್ಲೆನ್ಸ್,ಮೀನು ಮಾರಾಟ ಮಾಡಲು ಮೀನು ಮಾರುಕಟ್ಟೆ ಸ್ಥಾಪನೆ ಮಾಡಲಾಗುವುದು.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆಯಲ್ಲಿ ಸ್ಥಾಪನೆ ಮಾಡಲಾಗುವುದು. 38 ಲಕ್ಷ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ 30 ಸಾವಿರ ಕೋಟಿ ಕೃಷಿ ಸಾಲ ನೀಡಲಾಗುವುದು ಎಂದು ಸಿದ್ದರಾಮಯ್ಯ ಘೋಷಿಸಿದ್ದಾರೆ.
ರಾಜ್ಯದ ಮಲೆನಾಡು ಹಾಗೂ ಕರಾವಳಿ ಪ್ರದೇಶಗಳಲ್ಲಿ ಸಂಪರ್ಕ ರಹಿತ ಹಾಗೂ ಜನವಸತಿ ಪ್ರದೇಶಗಳಿಗೆ ಸಾರ್ವಜನಿಕರ ಹಾಗೂ ವಿದ್ಯಾರ್ಥಿಗಳ ಸುರಕ್ಷತೆಗಾಗಿ 300 ಕಾಲುಸಂಕಗಳನ್ನು ನಿರ್ಮಾಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.