newsics.com
2026-27ನೇ ಸಾಲಿನ ರಾಜ್ಯ ಬಜೆಟ್ನ ಒಟ್ಟು ಗಾತ್ರ ಸರಿಸುಮಾರು 4.48 ಲಕ್ಷ ಕೋಟಿ ರೂ. ಇದರಲ್ಲಿ ಹಲವು ಇಲಾಖೆಗಳಿಗೆ ಹಂಚಿಕೆಗಳನ್ನು ಮಾಡಲಾಗಿದೆ. ಅದರಲ್ಲಿ ಗ್ಯಾರಂಟಿ ಯೋಜನೆಗಳು ಮತ್ತು ಅಭಿವೃದ್ಧಿ ಕಾರ್ಯಗಳ ನಡುವೆ ಸಮತೋಲನ ಕಾಯ್ದುಕೊಳ್ಳಲು ಸರ್ಕಾರವು ವಿವಿಧ ಇಲಾಖೆಗಳಿಗೆ ಹಣವನ್ನು ನೀಡಿದೆ.
ಯಾವೆಲ್ಲ ಇಲಾಖೆಗಳಿಗೆ ಎಷ್ಟು ಅನುದಾನವನ್ನು ನೀಡಿದೆ ಎಂಬುದು ಇಲ್ಲಿದೆ.
ಇನ್ನು ಈ ಬಜೆಟ್ನಲ್ಲಿ ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಿಲಾಗಿದೆ. ರಾಜ್ಯದ ಇತಿಹಾಸದಲ್ಲೇ ಶಿಕ್ಷಣ ಕ್ಷೇತ್ರಕ್ಕೆ ಈ ಬಾರಿ ಗರಿಷ್ಠ ಮೊತ್ತವನ್ನು ಮೀಸಲಿಡಲಾಗಿದೆ. 800 ಕೆಪಿಎಸ್ (KPS) ಶಾಲೆಗಳ ಸ್ಥಾಪನೆ ಮತ್ತು 15,000 ಶಿಕ್ಷಕರ ನೇಮಕಾತಿಗೆ ಒತ್ತು ನೀಡಲಾಗಿದೆ. ಇದರ ಜತೆಗೆ ಗ್ಯಾರಂಟಿಗೂ ಬಲ ನೀಡಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ನೀಡಲಾದ ದೊಡ್ಡ ಮೊತ್ತವು ‘ಗೃಹಲಕ್ಷ್ಮಿ’ ಅಂತಹ ಗ್ಯಾರಂಟಿ ಯೋಜನೆಗಳ ಮುಂದುವರಿಕೆಯನ್ನು ಖಚಿತಪಡಿಸಿದೆ.
ನೀರಾವರಿ ಮತ್ತು ಗ್ರಾಮೀಣಾಭಿವೃದ್ಧಿಗೂ ಹೆಚ್ಚು ಅನುದಾನಗಳನ್ನು ನೀಡಲಾಗಿದೆ. ಕೃಷಿ ಮತ್ತು ಗ್ರಾಮೀಣ ಭಾಗದ ಮೂಲಸೌಕರ್ಯಕ್ಕೆ ಸರಿಸುಮಾರು 50,000 ಕೋಟಿಗೂ ಅಧಿಕ ಹಣವನ್ನು ವಿವಿಧ ಇಲಾಖೆಗಳ ಮೂಲಕ ಹಂಚಲಾಗಿದೆ.
ಇಲಾಖಾವಾರು ಅನುದಾನ:

ಬೆಂಗಳೂರು ನಗರಕ್ಕೆ ಬಂಪರ್ ಕೊಡುಗೆ
ಇದರ ಜತೆಗೆ ಬೆಂಗಳೂರನ್ನು ಅಂತರಾಷ್ಟ್ರೀಯ ಮಟ್ಟದ ನಗರವನ್ನಾಗಿ ರೂಪಿಸಲು ‘ನಮ್ಮ ಬೆಂಗಳೂರು’ ಮತ್ತು ‘ಬ್ರ್ಯಾಂಡ್ ಬೆಂಗಳೂರು’ ಯೋಜನೆಗಳ ಅಡಿಯಲ್ಲಿ ಸಾವಿರಾರು ಕೋಟಿ ರೂಪಾಯಿಗಳನ್ನು ಮೀಸಲಿಡಲಾಗಿದೆ. ಬೆಂಗಳೂರಿನ ಪ್ರಮುಖ ಟ್ರಾಫಿಕ್ ಪಾಯಿಂಟ್ಗಳಲ್ಲಿ ಸಂಚಾರ ದಟ್ಟಣೆ ಕಡಿಮೆ ಮಾಡಲು ಟನಲ್ ರಸ್ತೆ ನಿರ್ಮಾಣಕ್ಕೆ ಹೆಚ್ಚಿನ ಅನುದಾನ ಮೀಸಲಿಡಲಾಗಿದೆ. ಮೊದಲ ಹಂತದಲ್ಲಿ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ವರೆಗಿನ ಯೋಜನೆಯ ವೇಗಕ್ಕೆ ಒತ್ತು ನೀಡಲಾಗಿದೆ.
ಮೆಟ್ರೋ 3ನೇ ಹಂತದ ಕಾಮಗಾರಿಗಳಿಗೆ ಮತ್ತು ಹೊಸ ಮಾರ್ಗಗಳ ಸಮೀಕ್ಷೆಗಾಗಿ ಸುಮಾರು 5,000 ಕೋಟಿ ರೂ. ಗೂ ಅಧಿಕ ಹಣವನ್ನು ಮೀಸಲಿಡಲಾಗಿದೆ. ವಿಮಾನ ನಿಲ್ದಾಣದ ಮಾರ್ಗವನ್ನು ಶೀಘ್ರವಾಗಿ ಪೂರ್ಣಗೊಳಿಸಲು ಗಡುವು ನೀಡಲಾಗಿದೆ. ರಸ್ತೆ ಗುಂಡಿ ಮುಚ್ಚುವುದು, ಬಿಳಿ ರಸ್ತೆ ನಿರ್ಮಾಣ ಮತ್ತು ಮಳೆನೀರು ಕಾಲುವೆಗಳ ಅಭಿವೃದ್ಧಿಗೆ ಸುಮಾರು 3,000 ಕೋಟಿ ರೂ. ಅನುದಾನ ನೀಡಲಾಗಿದೆ. ಬಹುಕಾಲದ ಬೇಡಿಕೆಯಾದ ಪೆರಿಫೆರಲ್ ರಿಂಗ್ ರೋಡ್ (PRR) ಭೂಸ್ವಾಧೀನ ಪ್ರಕ್ರಿಯೆ ಚುರುಕುಗೊಳಿಸಲು ಹಣಕಾಸಿನ ನೆರವು ಘೋಷಿಸಲಾಗಿದೆ. ಬೆಂಗಳೂರಿನ 110 ಹಳ್ಳಿಗಳಿಗೆ ಕಾವೇರಿ ನೀರು ಪೂರೈಸುವ ಯೋಜನೆಯ ಅಂತಿಮ ಹಂತದ ಕಾಮಗಾರಿಗಳಿಗೆ ಅಗತ್ಯ ಅನುದಾನ ಒದಗಿಸಲಾಗಿದೆ.