newsics.com
ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಇದು ಸಿಎಂ ಸಿದ್ದರಾಮಯ್ಯ ಮಂಡಿಸುತ್ತಿರುವ ದಾಖಲೆಯ 17ನೇ ಬಜೆಟ್ ಆಗಿದೆ.
ಈ ವರ್ಷ 56,432 ಉದ್ಯೋಗ ಭರ್ತಿಗೆ ಚಾಲನೆ ನೀಡಲಾಗುತ್ತಿದೆ. ನೇಮಕಾತಿಗೆ ವಯೋಮಿತಿ 5 ವರ್ಷಗಳ ಸಡಿಲಿಕೆ ನೀಡಿದ್ದೇವೆ . ಕರ್ನಾಟಕ 45 ಉತ್ಪನ್ನಗಳಿಗೆ GI ಮಾನ್ಯತೆ ದೊರೆತಿದೆ.ಮುಜರಾಯಿ ಇಲಾಖೆ ವ್ಯಾಪ್ತಿಯ 259 ಕಲ್ಯಾಣಿಗಳ ಪುನರುಜ್ಜೀವನ ಮಾಡಲಾಗುತ್ತದೆ. ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆಗೆ 100 ಕೋಟಿ ರೂ. ಅನುದಾನ ನೀಡಲಾಗುತ್ತದೆ.
ಕರ್ನಾಟಕದ ಒಟ್ಟು ಸಾಲ 8 ಲಕ್ಷ 24,000 389 ಕೋಟಿ ರೂ. ಇದೆ, ಗಣಿಗಾರಿಕೆಯಿಂದ 11,000 ಕೋಟಿ ರೂಪಾಯಿ ಶುಲ್ಕ ಅಂದಾಜು ಬರಬಹುದೆಂದು ಅಂದಾಜಿಸಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
60 ಕೋಟಿ ರೂ. ವೆಚ್ಚದಲ್ಲಿ ನೂತನ10 GTTC ಕೇಂದ್ರಗಳ ಸ್ಥಾಪನೆ ಮಾಡಲಾಗುತ್ತದೆ, ಕಾರ್ಮಿಕರ ಮಕ್ಕಳಿಗಾಗಿ ನೂತನ 62 ವಸತಿ ಶ್ರಮಿಕ ಶಾಲೆ ಆರಂಭಿಸಲಾಗುತ್ತದೆ. ಒಟ್ಟು 104 ಶಾಲೆಗಳ ಆರಂಭಕ್ಕೆ ಆದ್ಯತೆ ನೀಡಲಾಗುತ್ತದೆ. ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಕೌಶಲ್ಯ ತರಬೇತಿ ಅಕಾಡೆಮಿ ತೆರೆಯಲಾಗುತ್ತದೆ. 200 ಕೋಟಿ ರೂಪಾಯಿ ವೆಚ್ಚದಲ್ಲಿ ಅಕಾಡೆಮಿ ಸ್ಥಾಪನೆ ಮಾಡಲಾಗುತ್ತದೆ. ಕಾರ್ಮಿಕರ ವಿಮಾ ಸೊಸೈಟಿಯಿಂದ ಹುಬ್ಬಳ್ಳಿ, ಇಂದಿರಾನಗರ , ಮೈಸೂರು, ದೊಡ್ಡ ಬಳ್ಳಾಪುರದಲ್ಲಿ ಪ್ಯಾರಾ ಮೆಡಿಕಲ್ ಕೋರ್ಸ್ ಆರಂಭಿಸಲಾಗುತ್ತದೆ ಎಂದು ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದ್ದಾರೆ.
ಸಾರಿಗೆ ಇಲಾಖೆಗೆ 15,500 ಕೋಟಿ ರೂ. ತೆರಿಗೆ ಸಂಗ್ರಹಣೆ ಗುರಿ ನೀಡಲಾಗಿದೆ. ನೊಂದಣಿ ಹಾಗೂ ಮುದ್ರಾಂಕ ಇಲಾಖೆಗೆ 29 ಸಾವಿರ ಕೋಟಿ ರಾಜಸ್ವ ಗುರಿ, ಅಬಕಾರಿ ಇಲಾಖೆ ಇಲಾಖೆಯಲ್ಲಿ 45,000 ಕೋಟಿ ರೂ. ಆದಾಯ ಗುರಿ ನೀಡಲಾಗಿದೆ.