Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನಟ ರವಿಚಂದ್ರನ್ ಮನೆಗೆ ಡಿ.ಕೆ. ಶಿವಕುಮಾರ್ ಭೇಟಿ; ಸೌಜನ್ಯದ ಭೇಟಿಯೋ ಅಥವಾ ವಿಶೇಷ ಚರ್ಚೆಯೋ?
ಕರ್ನಾಟಕಪ್ರಮುಖಮನರಂಜನೆ

ನಟ ರವಿಚಂದ್ರನ್ ಮನೆಗೆ ಡಿ.ಕೆ. ಶಿವಕುಮಾರ್ ಭೇಟಿ; ಸೌಜನ್ಯದ ಭೇಟಿಯೋ ಅಥವಾ ವಿಶೇಷ ಚರ್ಚೆಯೋ?

Share
2 Min Read
SHARE

newsics.com

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇಂದು ಸ್ಯಾಂಡಲ್‌ವುಡ್‌ನ ಕನಸುಗಾರ ಕ್ರೇಜಿಸ್ಟಾರ್ ರವಿಚಂದ್ರನ್ ಅವರ ನಿವಾಸಕ್ಕೆ ಭೇಟಿ ನೀಡಿದ್ದಾರೆ. ಬೆಂಗಳೂರಿನ ಹೊಸಕೆರೆಹಳ್ಳಿಯಲ್ಲಿರುವ ರವಿಚಂದ್ರನ್ ಅವರ ಮನೆಗೆ ತೆರಳಿದ ಡಿಸಿಎಂ, ಸುದೀರ್ಘ ಕಾಲ ಕ್ರೇಜಿಸ್ಟಾರ್ ಜೊತೆ ಮಾತುಕತೆ ನಡೆಸಿದ್ದಾರೆ. ಈ ಇಬ್ಬರು ದಿಗ್ಗಜರ ಭೇಟಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಕುತೂಹಲ ಮೂಡಿಸಿದೆ.

ಸಾಮಾನ್ಯವಾಗಿ ರಾಜಕಾರಣಿಗಳು ಮತ್ತು ಚಿತ್ರರಂಗದ ಗಣ್ಯರು ಭೇಟಿಯಾದಾಗ ಅಲ್ಲಿ ಹತ್ತಾರು ಊಹಾಪೋಹಗಳು ಏಳುವುದು ಸಹಜ. ಡಿ.ಕೆ. ಶಿವಕುಮಾರ್ ಅವರು ರವಿಚಂದ್ರನ್ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಉಭಯ ಕುಶಲೋಪರಿ ವಿಚಾರಿಸಿದ್ದಾರೆ. ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ನಡೆದ ಈ ಭೇಟಿಯಲ್ಲಿ ಸಿನಿಮಾ ರಂಗದ ಇಂದಿನ ಸ್ಥಿತಿಗತಿ, ಕಲಾವಿದರ ಸಮಸ್ಯೆಗಳು ಹಾಗೂ ವೈಯಕ್ತಿಕ ವಿಚಾರಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಇನ್ನು ಇಬ್ಬರೂ ಬಾಲ್ಯದ ಸ್ನೇಹಿತರಾಗಿದ್ದು,

ರವಿಚಂದ್ರನ್ ಅವರ ಹೊಸಕೆರೆಹಳ್ಳಿಯ ನಿವಾಸದಲ್ಲಿ ನಡೆದ ಈ ಭೇಟಿಯ ಫೋಟೋಗಳು ಈಗ ವೈರಲ್ ಆಗುತ್ತಿವೆ. ಡಿ.ಕೆ. ಶಿವಕುಮಾರ್ ಅವರನ್ನು ರವಿಚಂದ್ರನ್ ಆತ್ಮೀಯವಾಗಿ ಬರಮಾಡಿಕೊಂಡರು. ಹಿರಿಯ ನಟನ ಆರೋಗ್ಯ ಮತ್ತು ಅವರ ಮುಂದಿನ ಚಿತ್ರಗಳ ಬಗ್ಗೆ ಡಿಸಿಎಂ ವಿಚಾರಿಸಿದ್ದಾರೆ. ಡಿ.ಕೆ. ಶಿವಕುಮಾರ್ ಅವರು ಮೊದಲಿನಿಂದಲೂ ಚಿತ್ರರಂಗದ ಕಲಾವಿದರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಅದರಲ್ಲೂ ರವಿಚಂದ್ರನ್ ಮತ್ತು ಡಿ.ಕೆ. ಶಿವಕುಮಾರ್ ಒಂದೇ ಸ್ಕೂಲಿನಲ್ಲಿ ಓದಿದ್ದಾರೆ. ಇಬ್ಬರ ಒಡನಾಟವೂ ಆತ್ಮೀಯವಾಗಿದ್ದು, ಎಲ್ಲಿಯೇ ಸಿಕ್ಕಿದರೂ ಆತ್ಮೀಯತೆಯಿಂದಲೇ ಮಾತನಾಡುತ್ತಾರೆ. ಇದೀಗ ರವಿಚಂದ್ರನ್ ಮನೆಗೆ ಹೋಗಿರುವುದಕ್ಕೆ ಕಾರಣ ಏನು ಎಂಬುದನ್ನು ಸುಲಭವಾಗಿ ಊಹಿಸಲಾಗುವುದಿಲ್ಲ.

ಸದ್ಯ ಕನ್ನಡ ಚಿತ್ರರಂಗ ಹಲವು ಸವಾಲುಗಳನ್ನು ಎದುರಿಸುತ್ತಿದೆ. ಚಿತ್ರಮಂದಿರಗಳ ಸಮಸ್ಯೆ, ಪೈರಸಿ ಮತ್ತು ಕಲಾವಿದರ ಸಂಘದ ಕೆಲವು ವಿಚಾರಗಳ ಬಗ್ಗೆ ರವಿಚಂದ್ರನ್ ಅವರು ಡಿಸಿಎಂ ಗಮನಕ್ಕೆ ತಂದಿರಬಹುದು ಎಂಬ ಮಾತುಗಳು ಕೇಳಿಬರುತ್ತಿವೆ. ಸರ್ಕಾರದ ಮಟ್ಟದಲ್ಲಿ ಚಿತ್ರರಂಗಕ್ಕೆ ಸಿಗಬೇಕಾದ ಪ್ರೋತ್ಸಾಹ ಮತ್ತು ಸೌಲಭ್ಯಗಳ ಬಗ್ಗೆ ಕ್ರೇಜಿಸ್ಟಾರ್ ಸಲಹೆ ನೀಡಿರುವ ಸಾಧ್ಯತೆ ಇದೆ.

ಡಿ.ಕೆ. ಶಿವಕುಮಾರ್ ಅವರು ಕೇವಲ ರಾಜಕಾರಣಿಯಾಗಿ ಮಾತ್ರವಲ್ಲದೆ, ಕಲಾ ಪೋಷಕರಾಗಿಯೂ ಗುರುತಿಸಿಕೊಂಡವರು. ಈ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶವಿಲ್ಲ, ಇದು ಕೇವಲ ಸೌಜನ್ಯದ ಭೇಟಿ ಎಂದು ಡಿಕೆಶಿ ಆಪ್ತ ಮೂಲಗಳು ತಿಳಿಸಿವೆ.

ಮತ್ತೊಬ್ಬ ಹೀರೋ ಮದುವೆಗೆ ರೆಡಿ: ಯಾರು ಈ ಬೆಲ್ಲಂಕೊಂಡ?

TAGGED:D.K. Shivakumar's visit to actor Ravichandran's house; Courtesy visit or special discussion?
Share This Article
Facebook Twitter Copy Link Print
Previous Article ಮತ್ತೊಬ್ಬ ಹೀರೋ ಮದುವೆಗೆ ರೆಡಿ: ಯಾರು ಈ ಬೆಲ್ಲಂಕೊಂಡ?
Next Article ಉಚಿತ ಸೀರೆಗಾಗಿ ನಾ ಮುಂದು ತಾ ಮುಂದು ಮುಗಿಬಿದ್ದ ಮಹಿಳೆಯರು

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?