https://youtube.com/shorts/NQT6o3FTgxQ?si=QO7iNw2quSngYXpc
newsics.com
ನಟ ಮತ್ತು ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಅಧ್ಯಕ್ಷ ವಿಜಯ್ ಅವರಿಗೆ ಸಿಬಿಐ (CBI) ಮತ್ತೆ ಸಮನ್ಸ್ ನೀಡಿದೆ. ಕಳೆದ ವರ್ಷ ನಡೆದ ಕರೂರ್ ತುಳಿತ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ವರ್ಷ ಸೆಪ್ಟೆಂಬರ್ನಲ್ಲಿ ನಡೆದ ರ್ಯಾಲಿ ವೇಳೆ ಸಂಭವಿಸಿದ ಭೀಕರ ದುರಂತದ ತನಿಖೆ ಚುರುಕುಗೊಂಡಿದ್ದು, ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಕೇಂದ್ರ ತನಿಖಾ ಸಂಸ್ಥೆ ಸೂಚನೆ ನೀಡಿದೆ.
2025ರ ಸೆಪ್ಟೆಂಬರ್ 27ರಂದು ವಿಜಯ್ ಅವರ ಪಕ್ಷದ ರ್ಯಾಲಿ ವೇಳೆ ನಡೆದ ಭೀಕರ ತುಳಿತದಲ್ಲಿ ಸುಮಾರು 41 ಜನರು ಸಾವನ್ನಪ್ಪಿದ್ದರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯ್ ಅವರು ಈಗಾಗಲೇ ಜನವರಿ 12 ಮತ್ತು ಜನವರಿ 19 ರಂದು ಸಿಬಿಐ ಕೇಂದ್ರ ಕಚೇರಿಗೆ ಭೇಟಿ ನೀಡಿ ವಿಚಾರಣೆ ಎದುರಿಸಿದ್ದರು. ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತನಿಖೆಯ ಸಂದರ್ಭದಲ್ಲಿ ಲಭ್ಯವಾಗಿರುವ ಕೆಲವು ಹೆಚ್ಚುವರಿ ಪುರಾವೆಗಳು ಮತ್ತು ಮಾಹಿತಿಗಳಿಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ಪಡೆಯಲು ವಿಜಯ್ ಅವರನ್ನು ಮಂಗಳವಾರ ಮತ್ತೊಮ್ಮೆ ವಿಚಾರಣೆಗೆ ಕರೆಯಲಾಗಿದೆ.