https://youtube.com/shorts/NQT6o3FTgxQ?si=QO7iNw2quSngYXpc
newsics.com
ಕಲಬುರಗಿ: ರಥ ಎಳೆಯುವ ಸಂದರ್ಭದಲ್ಲಿ ಮಹಿಳೆಯೊಬ್ಬರ ಎರಡು ಕಾಲುಗಳು ರಥದ ಚಕ್ರಕ್ಕೆ ಸಿಲುಕಿ ಕತ್ತರಿಸಲ್ಪಟ್ಟಿರುವ ಘಟನೆ ಅರಳಗುಂಡಗಿ ಗ್ರಾಮದ ಶ್ರೀ ಶರಣಬಸವೇಶ್ವರ ಜಾತ್ರಾ ಮಹೋತ್ಸವದಲ್ಲಿ ನಡೆದಿದೆ.
ಅರಳಗುಂಡಿ ಗ್ರಾಮದ ಶ್ರೀ ಶರಣಬಸವೇಶ್ವರ ರಥೋತ್ಸವದ ವೇಳೆ ಸಾವಿರಾರು ಭಕ್ತರು ಜಮಾಯಿಸಿದ್ದರು. ರಥವು ಅತ್ಯಂತ ರಭಸದಿಂದ ಸಾಗುತ್ತಿದ್ದಾಗ, ಭಕ್ತರ ನೂಕುನುಗ್ಗಲಿನಲ್ಲಿ ಸಿಲುಕಿದ ನಾಗಮ್ಮ ಎಂಬ ಮಹಿಳೆ ಆಯತಪ್ಪಿ ರಥದ ಬೃಹತ್ ಚಕ್ರದ ಅಡಿಗೆ ಬಿದ್ದಿದ್ದಾರೆ.
ರಥದ ವೇಗ ಹೆಚ್ಚಾಗಿದ್ದರಿಂದ ಚಕ್ರವು ಮಹಿಳೆಯ ಕಾಲುಗಳ ಮೇಲೆ ಹರಿದಿದ್ದು, ಪರಿಣಾಮವಾಗಿ ಅವರ ಎರಡೂ ಕಾಲುಗಳು ತುಂಡಾಗಿವೆ. ತಕ್ಷಣವೇ ಎಚ್ಚೆತ್ತ ಭಕ್ತರು ಮತ್ತು ಸ್ಥಳೀಯರು ರಥವನ್ನು ನಿಲ್ಲಿಸಿ, ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಹಿಳೆಯನ್ನು ರಕ್ಷಿಸಿದ್ದಾರೆ.ಗಂಭೀರವಾಗಿ ಗಾಯಗೊಂಡ ನಾಗಮ್ಮ ಅವರನ್ನು ಕೂಡಲೇ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಜಾತ್ರೆಯ ಸಂಭ್ರಮದಲ್ಲಿ ಮುನ್ನೆಚ್ಚರಿಕೆ ಕ್ರಮಗಳ ಕೊರತೆಯೇ ಈ ಅನಾಹುತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನಾ ಸ್ಥಳಕ್ಕೆ ಯಡ್ರಾಮಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
https://www.newsics.com/2026/03/09/trailer-of-darling-krishna-starrer-love-mocktail-3-released/