Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಮ್ಮಪ್ಪನ 7ನೇ ಮದುವೆ ನಿಲ್ಲಿಸಿ; ಪೊಲೀಸ್ ಠಾಣೆ ಮೆಟ್ಟಿಲೇರಿದ 3ನೇ ಹೆಂಡ್ತಿ ಮಗ
ದೇಶಪ್ರಮುಖ

ನಮ್ಮಪ್ಪನ 7ನೇ ಮದುವೆ ನಿಲ್ಲಿಸಿ; ಪೊಲೀಸ್ ಠಾಣೆ ಮೆಟ್ಟಿಲೇರಿದ 3ನೇ ಹೆಂಡ್ತಿ ಮಗ

Share
2 Min Read
SHARE

https://youtube.com/shorts/fD6pvkz7g8c?si=uKQ1N3BMJTvK6QIw

newsics.com

55 ವರ್ಷದ ವ್ಯಕ್ತಿಯೊಬ್ಬ ಏಳನೇ ಬಾರಿಗೆ ಮದುವೆಯಾಗಲು ಸಿದ್ಧನಾಗಿದ್ದು, ಇದನ್ನು ತಡೆಯಲು ಆತನ ಅಪ್ರಾಪ್ತ ಮಗನೇ ಪೊಲೀಸ್ ಠಾಣೆಯ ಮೆಟ್ಟಿಲೇರುವ ಘಟನೆ ಉತ್ತರ ಪ್ರದೇಶದ ಆಜಂಗಢದಲ್ಲಿ ನಡೆದಿದೆ.
ಇಲ್ಲಿ 12ನೇ ಕ್ಲಾಸ್ ವಿದ್ಯಾರ್ಥಿ, ಸರ್ ನಮ್ಮಪ್ಪನ ಮದುವೆ ನಿಲ್ಲಿಸಿ ಎಂದು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾನೆ. ಇಲ್ಲಾಂದ್ರೆ ನಮ್ಮಪ್ಪ ಮದುವೆ ಮಾಡಿಕೊಳ್ಳುವುದನ್ನು ಮುಂದೆಯೂ ನಿಲ್ಲಿಸಲ್ಲ ಎಂದು ಮಗ ಮನವಿ ಮಾಡಿಕೊಂಡಿದ್ದಾನೆ.
ಅಮರ್ಜಿತ್ ಮೌರ್ಯ ಎಂಬಾತ ತನ್ನ 55ನೇ ವಯಸ್ಸಿನಲ್ಲಿ ಏಳನೇ ಬಾರಿ ಹಸೆಮಣೆ ಏರಲು ಸಿದ್ಧನಾಗಿದ್ದನು. ಆದ್ರೆ ಈ ಮದುವೆಗೆ ಅಮರ್ಜಿತ್ ಮೌರ್ಯನ ಮೂರನೇ ಹೆಂಡತಿಯ ಆಪ್ರಾಪ್ತ ಮಗ ಶನಿ ಮೌರ್ಯ ಅಡ್ಡಿಯಾಗಿದ್ದಾನೆ. ನನ್ನ ತಂದೆ ಒಟ್ಟು ಆರು ಮದುವೆಯಾಗಿದ್ದಾನೆ. ಕೌಟುಂಬಿಕ ಕಲಹದಿಂದ ಪತ್ನಿಯರಿಂದ ತಂದೆ ದೂರವಾಗಿದ್ದಾನೆ. ಇದೀಗ ಏಳನೇ ಮದುವೆಗೆ ಸಿದ್ದತೆ ನಡೆಸ್ತಿದ್ದಾನೆ. ಈ ಮದುವೆ ನಿಲ್ಲಿಸಲು ನನಗೆ ಸಹಾಯ ಮಾಡಿ ಎಂದು ಶನಿ ಮೌರ್ಯ ಹೇಳಿದ್ದಾನೆ.
2024ರಲ್ಲಿ ಅಮರ್ಜಿತ್ ಮೌರ್ಯ ಆರನೇ ಮದುವೆಯಾಗಿದ್ದನು. ಮದುವೆಯಾದ ಕೆಲವೇ ತಿಂಗಳುಗಳಲ್ಲಿ ಆರನೇ ಪತ್ನಿ ಒಡವೆ ಮತ್ತು ಜಮೀನಿನಲ್ಲಿ ಭಾಗ ಕೇಳಲು ಶುರು ಮಾಡಿದ್ದಾಳೆ. ನಂತರ ಆರನೇ ಪತ್ನಿಯೂ ಅಮರ್ಜಿತ್ ಮೌರ್ಯನಿಂದ ದೂರವಾಗಿದ್ದಾಳೆ. ಈ ಘಟನೆ ಬಳಿಕ ಅರ್ಮಜಿತ್ ಮತ್ತೆ ಮದುವೆಯಾಗಲ್ಲ ಎಂದು ಕುಟುಂಬಸ್ಥರೆಲ್ಲರೂ ಭಾವಿಸಿದ್ದರು. ಆದ್ರೆ ಅಮರ್ಜಿತ್ ಮತ್ತೆ ಮದುವೆಯಾಗಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾನೆ.
ತಂದೆಯ ಮದುವೆಗಳು ಕುಟುಂಬದ ಆರ್ಥಿಕಸ್ಥಿತಿ ಮೇಲೆ ಪರಿಣಾಮ ಬೀರುತ್ತಿದೆ. ಏಳನೇ ಮದುವೆಯ ಖರ್ಚಿಗಾಗಿ ತಂದೆ ಪೂರ್ವಜರ ಜಮೀನು ಮಾರಾಟ ಮಾಡಲು ಮುಂದಾಗಿದ್ದಾರೆ ಎಂದು ಶನಿ ಮೌರ್ಯ ಹೇಳಿದ್ದಾನೆ. ಪೂರ್ವಜರಿಂದ ಬಂದಿರುವ ಜಮೀನು ಮಾರಾಟ ಸಂಬಂಧ ತಂದೆ ಮುಂಗಡವಾಗಿ 50 ಸಾವಿರ ರೂಪಾಯಿ ಹಣ ಪಡೆದುಕೊಂಡಿದ್ದಾರೆ. ಕುಟುಂಬದ ಅರ್ಧದಷ್ಟು ಜಮೀನು ಈಗಾಗಲೇ ಅಡಮಾನದಲ್ಲಿದ್ದು, ಅದರ ಸಾಲವನ್ನು ಮಕ್ಕಳೇ ಪಾವತಿಸುತ್ತಿದ್ದಾರೆ. ಈ ಜಮೀನು ಮಾರಾಟವಾದರೆ ಕುಟುಂಬಕ್ಕೆ ಆರ್ಥಿಕ ಸಂಕಷ್ಟ ಎದುರಾಗಲಿದೆ ಎಂದು ಶನಿ ಮೌರ್ಯ ಪೊಲೀಸರಿಗೆ ವಿವರಿಸಿದ್ದಾನೆ.
ಶನಿ ಮೌರ್ಯ ದೂರಿನ ಮೇರೆಗೆ ಪೊಲೀಸರು ತನಿಖೆ ನಡೆಸಿದ್ದಾರೆ. ಈ ಪ್ರಕರಣದ ಕುರಿತು ಪ್ರತಿಕ್ರಿಯಿಸಿರುವ ಗ್ರಾಮಾಂತರ ಎಸ್‌ಪಿ ಚಿರಾಗ್ ಜೈನ್, ಪ್ರಾಥಮಿಕ ತನಿಖೆಯಲ್ಲಿ ಇದು ಕೇವಲ ಮದುವೆಗಳ ಪ್ರಕರಣದಂತೆ ಕಾಣುತ್ತಿಲ್ಲ. ಇದರಲ್ಲಿ ಜಮೀನು ಮತ್ತು ಆಸ್ತಿ ವಿವಾದದ ಆಯಾಮವೂ ಇದೆ ಎಂದು ಹೇಳಿದ್ದಾರೆ. ಪೊಲೀಸರು ಕುಟುಂಬಸ್ಥರ ಸದಸ್ಯರು ಮತ್ತು ಅರ್ಮಿಜಿತ್ ಮೌರ್ಯ ಹೇಳಿಕೆಯನ್ನು ದಾಖಲಿಸಿಕೊಂಡಿದ್ದಾರೆ.

ಕೆರೆಗೆ ಬಿದ್ದ ಮಗ-ರಕ್ಷಿಸಲು ತೆರಳಿದ ತಂದೆ ಜಲಸಮಾಧಿ

TAGGED:My father's 7th marriage stopped; son from 3rd wife goes to police station
Share This Article
Facebook Twitter Copy Link Print
Previous Article ಕೆರೆಗೆ ಬಿದ್ದ ಮಗ-ರಕ್ಷಿಸಲು ತೆರಳಿದ ತಂದೆ ಜಲಸಮಾಧಿ
Next Article 15 ದಿನ ಶಾಲೆ ಬಂದ್, ಅಧಿಕಾರಿಗಳ ಸಂಬಳ ಅರ್ಧ ಕಟ್! ಸರ್ಕಾರಿ ಕಚೇರಿಗಳಿಗೆ 4 ದಿನ ಕೆಲಸ

Popular Posts

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read
ಪ್ರಮುಖಲೈಫ್‌ಸ್ಟೈಲ್

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read
ಕರ್ನಾಟಕಪ್ರಮುಖಮನರಂಜನೆ

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read
ಕರ್ನಾಟಕಪ್ರಮುಖ

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?