newsics.com
ಪಾಟ್ನಾ: ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡದ ವಿಕೆಟ್ ಪತನವನ್ನು ಆಚರಿಸಿದ್ದಕ್ಕಾಗಿ ಹದಿಹರೆಯದ ವ್ಯಕ್ತಿಯೊಬ್ಬನನ್ನು ಥಳಿಸಿ ಕೊಂದ ಘಟನೆ ಬಿಹಾರದ ವೈಶಾಲಿ ಜಿಲ್ಲೆಯಲ್ಲಿ ನಡೆದಿದೆ.
ಮೃತನನ್ನು ಕುಂದನ್ ಕುಮಾರ್ (17) ಎಂದು ಗುರುತಿಸಲಾಗಿದೆ. ಕುಂದನ್ ಹಾಗೂ ಕಿಶನ್ ಕುಮಾರ್ ಇಬ್ಬರು ಫೈನಲ್ ಪಂದ್ಯವನ್ನು ಮೊಬೈಲ್ನಲ್ಲಿ ವೀಕ್ಷಿಸುತ್ತಿದ್ದರು. ಪಂದ್ಯದ ನಡುವೆ ಕೂಗಾಟ ಮತ್ತು ಸಂಭ್ರಮಾಚರಣೆ ವಿಚಾರಕ್ಕೆ ಜಗಳ ಶುರುವಾಗಿತ್ತು. ಈ ಗಲಾಟೆ ವಿಕೋಪಕ್ಕೆ ತಿರುಗಿದೆ. ಈ ವೇಳೆ ಗೆಳೆಯನನ್ನು ಕಿಶನ್ ಕುಮಾರ್ ಥಳಿಸಿ ಕೊಂದಿದ್ದಾನೆ.
ಗಾಯಗೊಂಡಿದ್ದ ಕುಂದನ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಆತ ಬದುಕುಳಿಯಲಿಲ್ಲ.
ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸಲು ಶೋಧ ಕಾರ್ಯಾಚರಣೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
https://www.newsics.com/2026/03/10/young-man-dies-after-consuming-sexual-stimulant-pills/