https://youtube.com/shorts/fD6pvkz7g8c?si=uKQ1N3BMJTvK6QIw
newsics.com
ಮಧ್ಯಪ್ರಾಚ್ಯದಲ್ಲಿನ ಯುದ್ಧದ ಪರಿಣಾಮವಾಗಿ ಸಿಲಿಂಡರ್ ಪೂರೈಕೆ ವ್ಯತ್ಯಯವಾಗಿದ್ದು, ಶೂನ್ಯವೇಳೆಯಲ್ಲಿ ಸಿಲಿಂಡರ್ ಕೊರತೆ ಬಗ್ಗೆ ಚರ್ಚೆಗೆ ಸ್ಪೀಕರ್ ಅವಕಾಶ ನೀಡಿದ್ದಾರೆ. ಈ ವೇಳೆ ಆಡಳಿತ ಮತ್ತು ವಿಪಕ್ಷಗಳ ನಡುವೆ ದೊಡ್ಡ ಹೈಡ್ರಾಮಾವೇ ನಡೆದಿದೆ.
ಮಾತಿಗೆ ಮಾತು ಬೆಳೆದ ಪರಿಣಾಮ ಸದನದ ರಣಾಂಗಣವಾಗಿದ್ದು ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರು ಪರಸ್ಪರ ದೂಷಿಸಿಕೊಂಡಿದ್ದಾರೆ. ಚರ್ಚೆ ಮಧ್ಯೆ ಪ್ರಧಾನಿ ಮೋದಿ ಅವರ ಹೆಸರು ಪ್ರಸ್ತಾಪವಾಗಿರೋದು ಉರಿಯುವ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಿದೆ.
ಸಿಲಿಂಡರ್ ಕೊರತೆ ಬಗ್ಗೆ ವಿಧಾನಸಭೆಯಲ್ಲಿ ಕುಣಿಗಲ್ ಶಾಸಕ ಡಾ.ರಂಗನಾಥ್ ಪ್ರಸ್ತಾಪ ಮಾಡಿದ್ದು, ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ವೇಳೆ ಆಹಾರ ಸಚಿವರಿಂದ ಉತ್ತರ ಕೊಡಿಸೋಣ ಎಂದು ಸ್ಪೀಕರ್ ಹೇಳಿದ್ದಾರೆ. ಶಾಸಕರ ಪ್ರಸ್ತಾಪಕ್ಕೆ ಉತ್ತರಿಸಿದ ಆಹಾರ ಸಚಿವ ಮುನಿಯಪ್ಪ, ಇರಾನ್-ಇಸ್ರೇಲ್ ಯುದ್ಧದಿಂದ ಸಿಲಿಂಡರ್ ಪೂರೈಕೆ ಆಗ್ತಿಲ್ಲ. ಆದರೆ ಗೃಹ ಬಳಕೆಯ ಸಿಲಿಂಡರ್ಗಳಿಗೆ ಯಾವುದೇ ಸಮಸ್ಯೆ ಇಲ್ಲ. 25 ದಿನಕ್ಕೊಮ್ಮೆ ಗೃಹ ಬಳಕೆಯ ಸಿಲಿಂಡರ್ ಕೊಡುತ್ತೇವೆ. ಗ್ಯಾಸ್ ಸಿಲಿಂಡರ್ಗೆ ಹೆಚ್ಚು ಖರ್ಚು ಮಾಡಿ ಸ್ಟೋರೇಜ್ ಮಾಡುವುದು ಬೇಡ ಎಂದಿದ್ದಾರೆ. ಈ ವೇಳೆ ಮುನಿಯಪ್ಪ ಮಾತಿಗೆ ರಂಗನಾಥ್ ಮರು ಪ್ರಶ್ನೆ ಮಾಡಿದ್ದು, 2000 ರೂ. ಕೊಟ್ಟು ವಾಣಿಜ್ಯ ಸಿಲಿಂಡರ್ ಪಡೆಯುವುದು ಹೇಗೆ? ಮೋದಿ ಸರ್ಕಾರ ದುರ್ಬಳಕೆ ಮಾಡಿಕೊಳ್ತಿದೆ ಎಂದಿದ್ದಾರೆ. ಈ ವೇಳೆ ಪ್ರತಿಪಕ್ಷ ಸದಸ್ಯರು ಆಕ್ಷೇಪ ತೆಗೆದಿದ್ದು, ಸುಖಾ ಸುಮ್ಮನೆ ಆರೋಪ ಮಾಡಬೇಡಿ ಎಂದಿದ್ದಾರೆ. ಇತ್ತ ಬಿಜೆಪಿ ವಿರುದ್ಧ ಕಾಂಗ್ರೆಸ್ ಶಾಸಕರಿಂದಲೂ ಆಕ್ರೋಶ ವ್ಯಕ್ತವಾಗಿದ್ದು, ಎಲ್ಪಿಜಿ ಗ್ಯಾಸ್ ಸಿಲಿಂಡರ್ ಸಮಸ್ಯೆ ಸರಿಪಡಿಸುವುದು ಯಾರು? ಬಿಜೆಪಿಯವರು ಯಾಕೆ ಮಾತನಾಡಲ್ಲ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಪ್ರಶ್ನಿಸಿದ್ದಾರೆ. ಮೋದಿ ಅಂದರೆ ಇವರಿಗೆಷ್ಟು ಭಯ ಎಂದು ಗೋಪಾಲಕೃಷ್ಣ ಹೇಳಿದ್ದು ಮತ್ತಷ್ಟು ಮಾತಿನ ಚಕಮಕಿಗೆ ಕಾರಣವಾಗಿದೆ.
ಈ ವೇಳೆ ಮಧ್ಯಪ್ರವೇಶಿಸಿದ ಸಿಎಂ ಸಿದ್ದರಾಮಯ್ಯ, ಮುನಿಯಪ್ಪ ತೈಲ ಕಂಪನಿಯವರ ಜೊತೆ ಮಾತನಾಡಿದ್ದಾರೆ. ಗ್ಯಾಸ್ ಪೂರೈಕೆ ಮಾಡುವುದು ಕೇಂದ್ರ ಸರ್ಕಾರ ಅಲ್ಲವೇ? ಅವರು ಉತ್ತರ ಹೇಳೋಕೆ ಅವಕಾಶ ಕೊಡಿ. ಕೇಂದ್ರ ಸಚಿವರು ಹೇಳಿದ್ದನ್ನು ಅವರು ಪ್ರಸ್ತಾಪ ಮಾಡಿದ್ರು. ನೀವು ಕೇಂದ್ರ ಸರ್ಕಾರ ಅಂದರೆ ಎದ್ದು ನಿಂತಿಕೊಳ್ಳುತ್ತೀರಾ ಎಂದು ಸಿಎಂ ಹೇಳಿದ್ದಾರೆ. ಇದು ಸಿಎಂ ಮತ್ತು ವಿಪಕ್ಷ ನಾಯಕರ ನಡುವೆ ವಾಗ್ವಾದಕ್ಕೆ ಕಾರಣವಾಗಿದ್ದು, ವಾಣಿಜ್ಯ ಬಳಕೆ ಸಿಲಿಂಡರ್ ಬರಲಿಲ್ಲ ಅಂದ್ರೆ ಚಳವಳಿ ಮಾಡ್ಬೇಕಾಗುತ್ತೆ ಎಂದು ಸಿಎಂ ಹೇಳಿರೋದಾಗಿ ಅಶೋಕ್ ಕಿಡಿ ಕಾರಿದ್ದಾರೆ. ಆದ್ರೆ ಚಳವಳಿ ಮಾಡಿ ಅಂತಾ ಪ್ರಚೋದನೆ ಮಾಡಿಲ್ಲ ಎಂದು ಈ ವೇಳೆ ಸಿಎಂ ಸ್ಪಷ್ಟಪಡಿಸಿದರೂ ಕೇಳದ ಅಶೋಕ್, ಚಳವಳಿ ಮಾಡಿ ಎಂದಿದ್ದೀರಿ ಅಂತಾ ಮಾಧ್ಯಮಗಳಲ್ಲಿ ಬಂದಿದೆ. ಸ್ಟ್ರೈಕ್ ಮಾಡೋಕೆ ಬೆಂಬಲ ಇದೆ ಎಂದಿದ್ದೀರಿ ಎಂದಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟಾದ ಪ್ರಸಂಗಕ್ಕೂ ವಿಧಾನಸಭೆ ಸಾಕ್ಷಿಯಾಗಿದೆ.
ಮಲೈಕಾಗೆ ಮತ್ತೆ ಲವ್? ಬೋಲ್ಡ್ ಆದದ್ದು ಯಾರು? ಅರೋರಾ ಲವ್ ಭಾರೀ ಡೇಂಜರ್!