https://youtube.com/shorts/fD6pvkz7g8c?si=uKQ1N3BMJTvK6QIw
newsics.com
ವಾಣಿಜ್ಯ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಹಿನ್ನೆಲೆ ಕರ್ನಾಟಕ ಸೇರಿ ದೇಶಾದ್ಯಂತ ಹೋಟೆಲ್, ರೆಸ್ಟೋರೆಂಟ್, ಬೇಕರಿ ಮಾಲೀಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ.
ಅನೇಕ ರಾಜ್ಯಗಳಲ್ಲಿ ಹೋಟೆಲ್ಗಳ ಸೇವೆ ಬಾಧಿತವಾಗಿದೆ. ವಿಶೇಷವಾಗಿ ಪಾಂಡಿಚೇರಿಯಲ್ಲಿ ಎಲ್ಪಿಜಿ ಅಭಾವದಿಂದ ಟೀ, ಕಾಫಿ ಮಾರಾಟವನ್ನೇ ಬಂದ್ ಮಾಡಲು ನಿರ್ಧರಿಸಿದ್ದಾರೆ. ತಮಿಳುನಾಡು ಹೋಟೆಲ್ಗಳಲ್ಲಿನ ಮೆನು ಕಡಿತಗೊಳಿಸಲಾಗಿದೆ.
ನೆರೆ ರಾಜ್ಯ ತಮಿಳುನಾಡಿನಲ್ಲಿಯೂ ಎಲ್ಪಿಜಿ ಅಭಾವ ಸೃಷ್ಟಿಯಾಗಿದೆ. ಇನ್ನು 1-2 ದಿನಗಳಿಗಾವಷ್ಟು ದಾಸ್ತಾನು ಮಾತ್ರವೇ ಉಳಿದಿದೆ. ಇಲ್ಲಿನ ಹಲವು ಹೋಟೆಲ್, ರೆಸ್ಟೋರೆಂಟ್ಗಳಲ್ಲಿ ಸಿಲಿಂಡರ್ ಉಳಿಸುವ ಸಲುವಾಗಿ ದೋಸೆ, ಚಹಾ, ಕಾಫಿ ಅಂತಹ ಮೆನುಗಳನ್ನು ಕಡಿತಗೊಳಿಸಿ, ಸೀಮಿತ ಸಂಖ್ಯೆಯ ಆಹಾರವನ್ನು ಮಾತ್ರ ಮಾರಾಟ ಮಾಡಲಾಗುತ್ತಿದೆ.
ದೇವರ ಚಿತ್ರವನ್ನು ಕಾಲಿಗೆ ತಾಗಿಸಿಕೊಂಡು ಓಡಾಡಿದ ರಶ್ಮಿಕಾ ಮಂದಣ್ಣ: ಪೋಟೋ ವೈರಲ್