https://youtube.com/shorts/fD6pvkz7g8c?si=uKQ1N3BMJTvK6QIw
newsics.com
ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಚಿರತೆ ಮತ್ತೆ ಕಾಣಿಸಿಕೊಂಡಿದ್ದು, ಸ್ಥಳೀಯರು ಹಾಗೂ ಭಕ್ತಾದಿಗಳಲ್ಲಿ ಭೀತಿ ಮೂಡಿಸಿದೆ.
ರಸ್ತೆಯ ಇಳಿಜಾರಿನ ತಿರುವಿನಲ್ಲಿರುವ ತಡೆಗೋಡೆಯ ಪಕ್ಕದಲ್ಲಿ ಚಿರತೆ ಕುಳಿತಿದ್ದನ್ನು ಕಂಡು, ಆ ಹಾದಿಯಲ್ಲಿ ವಾಹನದಲ್ಲಿ ತೆರಳುತ್ತಿದ್ದವರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ದೃಶ್ಯವನ್ನು ಸೆರೆಹಿಡಿದಿದ್ದಾರೆ.ಕಳೆದ ಶಿವರಾತ್ರಿ ಜಾತ್ರೆಯ ಸಂದರ್ಭದಲ್ಲಿ ಇದೇ ಪ್ರದೇಶದ ಸಮೀಪ ಚಿರತೆಯು ಪಾದಯಾತ್ರಿಯೊಬ್ಬರ ಮೇಲೆ ದಾಳಿ ಮಾಡಿ ಕೊಂದು ತಿಂದಿದ್ದ ಘಟನೆ ನಡೆದಿತ್ತು.ಈಗ ಮತ್ತೆ ಅದೇ ಸ್ಥಳದಲ್ಲಿ ಚಿರತೆ ಕಾಣಿಸಿಕೊಂಡಿರುವುದು ಬೆಟ್ಟಕ್ಕೆ ಬರುವ ಭಕ್ತರು ಮತ್ತು ಕಾಲ್ನಡಿಗೆಯಲ್ಲಿ ಸಾಗುವ ಪಾದಯಾತ್ರಿಗಳಲ್ಲಿ ಆತಂಕವನ್ನು ಇಮ್ಮಡಿಗೊಳಿಸಿದೆ.
ಅರಣ್ಯ ಇಲಾಖೆಯು ಈ ಬಗ್ಗೆ ಗಮನ ಹರಿಸಿ ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.