https://youtube.com/shorts/JFDfzeRUAUw?si=UPiQjhCFAIkLXEhb
newsics.com
ಕಾರು ಮತ್ತು ಲಾರಿಯ ನಡುವೆ ಭೀಕರ ಡಿಕ್ಕಿ ಸಂಭವಿಸಿ ಮೂವರು ರಿಸರ್ವ್ ಸಬ್ ಇನ್ಸ್ಪೆಕ್ಟರ್ಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 150ಎರಲ್ಲಿ ನಡೆದಿದೆ.
ಐವರು ಒಂದೇ ಕಾರ್ನಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದರು. ಮೃತರನ್ನು ಮಂಜುನಾಥ್, ಅಂಬರೀಷ್ ಮತ್ತು ಸಚಿನ್ ಎಂದು ಗುರುತಿಸಲಾಗಿದೆ. ಗಾಯಾಳುಗಳಾದ ಈಶ್ವರ್ ಮತ್ತು ಮಹಾಂತೇಶ್ ಗಾಯಗೊಂಡಿದ್ದಾರೆ. ಲಾರಿಗೆ ಕಾರ್ ಡಿಕ್ಕಿ ಹೊಡೆದಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ
ಇದೇ ವೇಳೆ ಕಾರಿನಲ್ಲಿ ಇದ್ದ ಪಿಎಸ್ಐ ಈಶ್ವರ್ ಹಾಗೂ ರಿಸರ್ವ್ ಸಬ್ ಇನ್ಸ್ಪೆಕ್ಟರ್ ಮಹಾಂತೇಶ್ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.