newsics.com
ಬೆಂಗಳೂರು: ರಾಜ್ಯದಲ್ಲಿ ಸರ್ಕಾರಿ ಶಾಲಾ-ಕಾಲೇಜು ಸಮಸ್ಯೆ ದೊಡ್ಡ ಮಟ್ಟದಲ್ಲಿದೆ. ಒಂದು ಕಡೆ ಎಸ್ಎಸ್ಎಲ್ಸಿ (SSLC) ನಂತರ ಮುಂದೆ ಓದಲು ಹಿಂದೇಟು ಹಾಕುವ ಯುವಕ, ಯುವತಿಯರು, ಮತ್ತೊಂದು ಕಡೆ ಶಿಕ್ಷಕರ ಸಮಸ್ಯೆ. ಈ ಎಲ್ಲಾ ಬೆಳವಣಿಗೆ ನಡುವೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ರಾಜ್ಯದ 50 ಸರ್ಕಾರಿ ಪ್ರೌಢಶಾಲೆಗಳನ್ನು ಈಗ ಪದವಿಪೂರ್ವ (PUC) ಕಾಲೇಜುಗಳಾಗಿ ಮೇಲ್ದರ್ಜೆಗೇರಿಸಲು ಎಲ್ಲಾ ತಯಾರಿ ಮಾಡಿಕೊಂಡಿದೆ. ಇದರಿಂದ ಶಾಲೆ ಬಿಡುವ ಮಕ್ಕಳ ಸಂಖ್ಯೆಯನ್ನು ಕಡಿಮೆ ಮಾಡುವ ಗುರಿ ಹೊಂದಲಾಗಿದೆ. ಇಷ್ಟೇ ಅಲ್ಲದೆ 100 ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢಶಾಲೆಯನ್ನಾಗಿ ಉನ್ನತೀಕರಣಗೊಳಿಸಲಾಗುತ್ತಿದೆ. ಇದಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ.
ರಾಜ್ಯದ ವಿವಿಧ ಭಾಗದ ಆಯ್ದ 50 ಪ್ರೌಢಶಾಲೆಗಳಲ್ಲಿ ಈ ಪ್ರಕ್ರಿಯೆ ನಡೆಯಲಿದೆ. ಅಂದರೆ 15 ಕಿ.ಮೀ ವ್ಯಾಪ್ತಿಯಲ್ಲಿ ಪಿಯು ಕಾಲೇಜು ಇಲ್ಲದ ಪ್ರದೇಶಗಳಲ್ಲಿರುವ ಪ್ರೌಢಶಾಲೆಗಳನ್ನು ಮಾತ್ರ ಈಗ ಮೇಲ್ದರ್ಜೆಗೆ ಏರಿಸಲಾಗುತ್ತಿದೆ.ಇದು ಹಂತಹಂತವಾಗಿ ನಡೆಯುವ ಪ್ರಕ್ರಿಯೆಯಾಗಿದೆ.
ನಿಯಮಗಳು ಸರಳ
ಮತ್ತೊಂದು ಗಮನಾರ್ಹ ವಿಚಾರ ಏನೆಂದರೆ ಇದಕ್ಕೆ ನಿಯಮಗಳು ಸರಳವಾಗಿವೆ. ಶಾಲೆಯಲ್ಲಿ ಎಸ್ಎಸ್ಎಲ್ಸಿಯಲ್ಲಿ ಕನಿಷ್ಠ 40 ವಿದ್ಯಾರ್ಥಿಗಳಿರಬೇಕೆಂಬ ನಿಯಮ ಇದೆ. ಈ ರೀತಿ ಇರುವ ಶಾಲೆಗಳು ಈಗ ಕಾಲೇಜುಗಳಾಗಲಿವೆ. ಇತ್ತ ಇದಕ್ಕಾಗಿ ಬೇಕಾಗಿರುವ ಸ್ಥಳ, ಸವಲತ್ತು, 10ನೇ ತರಗತಿಗಳಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಇದ್ದಾರೆಯೇ ಎಂದು ಪರಿಶೀಲನೆ ನಡೆಸುವ ಹೊಣೆಗಾರಿಕೆ ಸೇರಿದಂತೆ ಅಗತ್ಯ ಕೆಲಸಗಳನ್ನು ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ವಹಿಸಿಕೊಡಲಾಗುತ್ತಿದೆ. ಇವರು ಒಂದು ವಾರದ ಒಳಗೆ ವರದಿಯನ್ನು ಸರ್ಕಾರಕ್ಕೆ ಸಲ್ಲಿಕೆ ಮಾಡಬೇಕಿದೆ.
ಯಾವೆಲ್ಲಾ ಜಿಲ್ಲೆಗಳಲ್ಲಿ ಈ ಅನುಕಕೂಲ?
ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಬಾಗಲಕೋಟೆ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಪ್ರತಿ ಜಿಲ್ಲೆಗೆ ಎರಡು ಪ್ರೌಢಶಾಲೆಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಬೆಂಗಳೂರು ಉತ್ತರ, ದಕ್ಷಿಣಕ್ಕೆ ತಲಾ 1, ಬೆಂಗಳೂರು ಗ್ರಾಮಾಂತರ ಭಾಗಕ್ಕೆ ತಲಾ 2 ಪ್ರೌಢಶಾಲೆಗಳಿಗೆ ಅವಕಾಶ ನೀಡಲಾಗಿದೆ. ಇದರೊಂದಿಗೆ ಬೆಳಗಾವಿ, ಕೋಲಾರ, ವಿಜಯಪುರ, ಉತ್ತರ ಕನ್ನಡ, ಗದಗ,ಚಿಕ್ಕೋಡಿ, ಚಿತ್ರದುರ್ಗ ಸೇರಿದಂತೆ ಇತರೆ ಜಿಲ್ಲೆಗಳಿಗೆ ತಲಾ 1 ಪ್ರೌಢಶಾಲೆಗಳಿಗೆ ಪಿಯು ಉನ್ನತೀಕರಣ ಪ್ರಯೋಜನ ಸಿಕ್ಕಿದೆ.
ದೂರು ಕೊಡಲು ಠಾಣೆಗೆ ಬಂದಿದ್ದ ಮಹಿಳೆಯನ್ನು ಮಂಚಕ್ಕೆ ಕರೆದ ಇನ್ಸ್ಪೆಕ್ಟರ್