Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Govinda Bhat no more ಯಕ್ಷಗಾನ ದಶಾವತಾರಿ ಗೋವಿಂದ ಭಟ್ ಇನ್ನಿಲ್ಲ
ಕರ್ನಾಟಕದೇಶಪ್ರಮುಖಮನರಂಜನೆ

Govinda Bhat no more ಯಕ್ಷಗಾನ ದಶಾವತಾರಿ ಗೋವಿಂದ ಭಟ್ ಇನ್ನಿಲ್ಲ

Share
2 Min Read
SHARE

newsics.com

ತೆಂಕುತಿಟ್ಟು ಯಕ್ಷಗಾನ ಕ್ಷೇತ್ರದ ಅಗ್ರಮಾನ್ಯ ಕಲಾವಿದ, ಯಕ್ಷಗುರು ದಶಾವತಾರಿ ಸೂರಿಕುಮೇರಿ ಕೆ. ಗೋವಿಂದ ಭಟ್ ಅವರು ಶುಕ್ರವಾರ ರಾತ್ರಿ ವಿಧಿವಶರಾದರು.

ತೀರ್ಥಹಳ್ಳಿಯ ತಮ್ಮ ಪುತ್ರನ ನಿವಾಸದಲ್ಲಿ  ಕೊನೆಯುಸಿರೆಳೆದ ಅವರಿಗೆ 90 ವರ್ಷ ವಯಸ್ಸಾಗಿತ್ತು. ಗೋವಿಂದ ಭಟ್ ಅವರಿಗೆ ಪತ್ನಿ, ಮೂವರು ಪುತ್ರರಿದ್ದಾರೆ.

ಯಕ್ಷಗಾನದ ತೆಂಕುತಿಟ್ಟು ರಂಗಭೂಮಿಯ ನಡೆದಾಡುವ ವಿಶ್ವಕೋಶ, ಅಭಿನಯ ಚತುರ ಎಂದೇ ಖ್ಯಾತರಾಗಿದ್ದ ಗೋವಿಂದ ಭಟ್ 2016ರಲ್ಲಿ ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾಗಿದ್ದರು.

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದ ಸೂರಿಕುಮೇರಿಯಲ್ಲಿ ಮಾರ್ಚ್ 22, 1938 ರಂದು ಇವರು ಜನಿಸಿದರು. ತಂದೆ ಶಿವರಾಮ ಭಟ್ಟರು ಮತ್ತು ತಾಯಿ ಪಾರ್ವತಿ ಅಮ್ಮ. ಕಡು ಬಡತನದ ನಡುವೆಯೂ ಏಳನೇ ತರಗತಿಯವರಿಗೆ ಇವರು ವಿದ್ಯಾಭ್ಯಾಸ ಮಾಡಿದರು. ಯಕ್ಷಗಾನದ ಮೇಲಿದ್ದ ಅಪಾರ ಪ್ರೀತಿಯಿಂದಾಗಿ 1951ರಲ್ಲಿ ಕೇವಲ 13ನೇ ವಯಸ್ಸಿನಲ್ಲಿಯೇ ಬಣ್ಣ ಹಚ್ಚಿ ರಂಗಪ್ರವೇಶ ಮಾಡಿದರು.

ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಕೃಪಾಪೋಷಿತ ಯಕ್ಷಗಾನ ಮಂಡಳಿಯಲ್ಲಿ ಸತತ 50 ವರ್ಷಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿದ ಅಪರೂಪದ ಕಲಾವಿದ. ಮೇಳದ ಶಿಸ್ತು ಮತ್ತು ಸಂಪ್ರದಾಯದ ಕಾವಲುಗಾರನಂತೆ ಇವರು ಕಾರ್ಯನಿರ್ವಹಿಸಿದ್ದರು.

ಹದಿಹರೆಯದಿಂದ ಹಿಡಿದು ಇಳಿವಯಸ್ಸಿನವರೆಗೂ ಯಕ್ಷಗಾನ ರಂಗದ ಮೇಲೆ ಸಕ್ರಿಯರಾಗಿದ್ದ ಇವರು, ಯಕ್ಷಗಾನದ ಏರಿಳಿತಗಳನ್ನು ಹತ್ತಿರದಿಂದ ಕಂಡವರು. ‘ದಶಾವತಾರಿ’ ಎಂದೇ ಕರೆಯಲ್ಪಡುತ್ತಿದ್ದ ಇವರು ಯಾವುದೇ ವೇಷಕ್ಕಾದರೂ ಸೈ ಎನಿಸಿಕೊಳ್ಳುತ್ತಿದ್ದರು.

ಇವರ ಪಾತ್ರಗಳಲ್ಲಿನ ಗಾಂಭೀರ್ಯ ಮತ್ತು ಸಂಭಾಷಣಾ ಚತುರತೆ ಅದ್ವಿತೀಯವಾಗಿತ್ತು. ಅರ್ಜುನ, ಭೀಷ್ಮ, ಕರ್ಣ, ಕೌರವ, ದಶರಥ, ವಾಲಿಯಂತಹ ಪೌರಾಣಿಕ ಪಾತ್ರಗಳಿಗೆ ಹೊಸ ಆಯಾಮ ನೀಡಿದವರು ಗೋವಿಂದ ಭಟ್ಟರು . ಇವರ ಮುಖಭಾವಗಳಲ್ಲಿ ನವರಸಗಳು ಲಾಸ್ಯವಾಡುತ್ತಿದ್ದವು. ವಿಶೇಷವಾಗಿ ವೀರ ಮತ್ತು ಕರುಣಾ ರಸದ ಪಾತ್ರಗಳಲ್ಲಿ ಇವರನ್ನು ಮೀರಿಸುವವರಿಲ್ಲ ಎಂಬ ಮಾತು ಕಲಾಭಿಮಾನಿಗಳಲ್ಲಿದೆ.

ಇವರ ಸಾಧನೆಗೆ 2016ರಲ್ಲಿ ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ಸರಕಾರದ ರಾಜ್ಯೋತ್ಸವ ಪ್ರಶಸ್ತಿ ದಕ್ಕಿದೆ. ಅಭಿಮಾನಿಗಳು ಇವರ ಕಲಾ ಜೀವನವನ್ನು ದಾಖಲಿಸಲು ‘ಸವ್ಯಸಾಚಿ’ ಎಂಬ ಸ್ಮರಣ ಸಂಚಿಕೆಯನ್ನು ಅರ್ಪಿಸಿದ್ದರು.

ಯಕ್ಷರಂಗದಲ್ಲಿ ಕಲಾವಿದರಾಗಿ, ತಾಳಮದ್ದಳೆ ಕ್ಷೇತ್ರದ ಅದ್ಭುತ ಅರ್ಥಧಾರಿಯಾಗಿ ಗಮನ ಸೆಳೆದಿದ್ದ ಗೋವಿಂದ ಭಟ್ ಅವರು ಅದೆಷ್ಟೋ ಕಲಾವಿದರಿಗೆ ಗುರುಗಳಾಗಿ ಮಾರ್ಗದರ್ಶನ ತೋರಿದವರು.

ತೆಂಕುತಿಟ್ಟು ಯಕ್ಷಗಾನದ ‘ದಶಾವತಾರಿ’ ಎಂದೇ ಇವರು ಪ್ರಸಿದ್ಧರಾಗಿದ್ದರು. ಜತೆಗೆ ಇವರು ತೆಂಕುತಿಟ್ಟು ಯಕ್ಷಗಾನಕ್ಕೆ ಎರಡನೇ ರಾಷ್ಟ್ರಪ್ರಶಸ್ತಿ ತಂದು ಕೊಟ್ಟವರು. ತಮ್ಮ ಯಕ್ಷತಿರುಗಾಟದ ಅನುಭವ ಕಥನವನ್ನು ಇವರು ‘ಎಪ್ಪತ್ತು ತಿರುಗಾಟಗಳು’ ಎಂಬ ಕೃತಿಯಲ್ಲಿ ಅದ್ಭುತವಾಗಿ ಕಟ್ಟಿಕೊಟ್ಟಿದ್ದಾರೆ.

ಟ್ರಂಪ್​ಗೆ ಮುಖಭಂಗ : ಅಮೆರಿಕದ ಯುದ್ಧ ವಿಮಾನಗಳನ್ನು ಇಳಿಸಲು ಅವಕಾಶ ನಿರಾಕರಿಸಿದ ಶ್ರೀಲಂಕಾ

ರೇಬಿಸ್ ಕಾಯಿಲೆಯಿಂದ ನಾಯಿಯಂತೆ ಬೊಗಳುತ್ತಿರುವ ಬಾಲಕ..! ವೈರಲ್ ವಿಡಿಯೋ ನೋಡಿ

TAGGED:Yakshagana Dashavatari Govinda Bhat is no more
Share This Article
Facebook Twitter Copy Link Print
Previous Article Strange case ಫಸ್ಟ್ ನೈಟ್ ನಿರಾಕರಿಸಿದ ಪತಿ ವಿರುದ್ಧ ಪೊಲೀಸರಿಗೆ ದೂರು ನೀಡಿದ ಪತ್ನಿ!
Next Article GOOD MORNING Today’s Horoscoe ಇಂದಿನ ರಾಶಿ ಭವಿಷ್ಯ, 21-03-2026, ಶನಿವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?