https://youtube.com/shorts/1G3iDuCfqaQ?si=Tja2ncvA4iaSoDUf
newsics.com
ಹುಬ್ಬಳ್ಳಿ: ಸಾಮಾಜಿಕ ಜಾಲತಾಣಗಳಲ್ಲಿ ‘ರೀಲ್ಸ್’ ಮಾಡಲು ಹೋಗಿ 15 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ನಗರದಲ್ಲಿ ನಡೆದಿದೆ. ಬಾಲಕನ ಸಾವಿಗೆ ಸಂಬಂಧಿಸಿದಂತೆ ಅಪಘಾತ ಮಾಡಿದ ಬಾಲಕ ಮಾತ್ರವಲ್ಲ, ಆತನ ತಂದೆಯನ್ನು ಕೂಡ ಪೊಲೀಸರು ಬಂಧಿಸಿದ್ದಾರೆ.
ರೀಲ್ಸ್ ಮಾಡಲು ಹೋದಾಗ ಆಡಿ ಕಾರು ಮತ್ತು ಸ್ಕೂಟಿ ನಡುವೆ ಅಪಘಾತವಾಗಿದ್ದು, ಬಾಲಕನೋರ್ವ ಮೃತಪಟ್ಟಿದ್ದ. ಹುಬ್ಬಳ್ಳಿ ನಗರದ ಲಕ್ಷ್ಮಿ ನಗರದ ನಮೀಷ್ ಸಂಗಳದ ಮೃತ ಬಾಲಕ. ಹುಬ್ಬಳ್ಳಿಯ ಬಿಜೆಪಿ ಮುಖಂಡ ವಿರೇಶ್ ಸಂಗಳದ ಪುತ್ರನಾಗಿದ್ದ ನಮೀಷ್, ಯುಗಾದಿ ಹಬ್ಬದ ದಿನ ಶೇಜವಾಡ್ಕರ್ ಪ್ಲಾಟ್ನಲ್ಲಿ ಸ್ನೇಹಿತರ ಜೊತೆ ರೀಲ್ಸ್ ಮಾಡಲು ಹೋಗಿದ್ದ.
ನಮೀಷ್ ಇದ್ದ ಸ್ಕೂಟಿಗೆ 17ನೇ ವರ್ಷದ ಅಪ್ರಾಪ್ತ ಬಾಲಕ ಓಡಿಸುತ್ತಿದ್ದ ಆಡಿ ಕಾರು ಗುದ್ದಿದ ಪರಿಣಾಮ ನಮೀಷ್ ಸ್ಥಳದಲ್ಲೇ ಮೃತಪಟ್ಟಿದ್ದ. ಈ ಬಗ್ಗೆ ಹುಬ್ಬಳ್ಳಿ ವಿದ್ಯಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.
ಅಪಘಾತ ಮಾಡಿರುವ 17ನೇ ವರ್ಷದ ಅಪ್ರಾಪ್ತ ಬಾಲಕನನ್ನು ಬಂಧಿಸಿ ಬಾಲಕರ ಬಾಲ ಮಂದಿರಕ್ಕೆ ಕಳುಹಿಸಿದರೆ, ಅಪ್ರಾಪ್ತ ಮಗನಿಗೆ ಕಾರು ನೀಡಿದ್ದ ಬಾಲಕನ ತಂದೆ ನಾಗರಾಜ್ ರಾಯ್ಕರ್ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.