https://youtube.com/shorts/1G3iDuCfqaQ?si=Tja2ncvA4iaSoDUf
newsics.com
ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇನ್ನು ಮುಂದೆ ವಿದ್ಯುನ್ಮಾನ ಮತಯಂತ್ರಗಳ ಬದಲಿಗೆ ಹಳೆಯ ಮಾದರಿಯ ಮತಪತ್ರಗಳನ್ನು ಬಳಸಲು ಅವಕಾಶ ನೀಡುವ ‘ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ವು ವಿಧಾನಸಭೆಯಲ್ಲಿ ತೀವ್ರ ಗದ್ದಲದ ನಡುವೆ ಅಂಗೀಕಾರಗೊಂಡಿದೆ.
ಸಚಿವ ಪ್ರಿಯಾಂಕ್ ಖರ್ಗೆ ಅವರು ವಿಧೇಯಕ ಮಂಡಿಸಿದ್ದು, ಈ ವೇಳೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಮಸೂದೆ ಪ್ರತಿ ಹರಿದು ಹಾಕಿ ಸಭಾತ್ಯಾಗ ಮಾಡಿದರು. ಅಲ್ಲದೇ ಆಡಳಿತ ಪಕ್ಷ ಹಾಗೂ ವಿಪಕ್ಷಗಳ ವಾಕ್ಸಮರಕ್ಕೆ ಕಾರಣವಾಯಿತು.
ಮಸೂದೆ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾತನಾಡಿ, ಇವಿಎಂ ಮೇಲೆ ವಿಶ್ವಾಸ ಕಡಿಮೆಯಾಗುತ್ತಿದೆ. ಮಹಾರಾಷ್ಟ್ರ ವಿಧಾನಭೆ ಚುನಾವಣೆಯಲ್ಲಿ ಆಯೋಗದ ವರದಿಯಂತೆ ಸಂಜೆ 58.22% ಮತದಾನ ಆಗಿತ್ತು. ರಾತ್ರಿ 11.30 ಗಂಟೆಗೆ 68.02% ಆಗಿದೆ. ಅಂದರೆ ಐದು ಗಂಟೆಯಲ್ಲಿ 50 ಲಕ್ಷ ಮತ ಸೇರ್ಪಡೆ ಹೇಗಾಯ್ತು ಎಂದು ಪ್ರಶ್ನಿಸಿದರು.
ಹರಿಯಾಣ ಮತ್ತು ಮಧ್ಯಪ್ರದೇಶದಲ್ಲಿ ಅದೇ ರೀತಿ ಆಗಿದೆ. ಹಲವಾರು ಸಂಸ್ಥೆಗಳು ಈ ಬಗ್ಗೆ ಪ್ರಶ್ನೆ ಮಾಡಿವೆ. ಆದರೆ, ಚುನಾವಣಾ ಆಯೋಗ ಈ ಬಗ್ಗೆ ಸಮರ್ಪಕ ಉತ್ತರ ನೀಡಿಲ್ಲ. ಈ ಮಸೂದೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಮತಪತ್ರದ ಮೂಲಕ ಮಾಡಲು ಈ ತಿದ್ದುಪಡಿ ತರುತ್ತಿದ್ದೇವೆ. ಮತಯಂತ್ರದ ಬದಲು ಮತಪತ್ರ ಬಳಕೆ ಮಾಡಲು ಈ ಮಸೂದೆ ತರಲಾಗುತ್ತಿದೆ. ಮಸೂದೆಯಲ್ಲಿ 6 ಬದಲಾಣೆಗಳನ್ನು ತರಲಾಗುತ್ತಿದೆ ಎಂದರು.