https://youtube.com/shorts/1G3iDuCfqaQ?si=Tja2ncvA4iaSoDUf
newsics.com
ಚಿಕ್ಕಬಳ್ಳಾಪುರ: ಜಗಳದ ಬಳಿಕ ಮಲಗಿದ್ದ ಗಂಡನ ಮರ್ಮಾಂಗಕ್ಕೆ ಹೆಂಡತಿ ಒದ್ದು ಕೊಲೆಗೆ ಯತ್ನಿಸಿರುವ ಘಟನೆ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ವೆಂಕಟರಾಯನಕೋಟೆ ಗ್ರಾಮದಲ್ಲಿ ನಡೆದಿದೆ.
ಕಳೆದ ಎರಡು ವರ್ಷಗಳ ಹಿಂದೆ ಒಂದೇ ಗ್ರಾಮದ ಮುನೀಂದ್ರ (26) ಮತ್ತು ವರ್ಷ (20) (ಮುನಿವೆಂಕಟರತ್ನಮ್ಮ) ಪ್ರೀತಿಸಿ ಮದುವೆಯಾಗಿದ್ದರು. ಪತಿ ಮುನೀಂದ್ರ, ಡ್ರೈವರ್ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದನು. ಆದರೆ ಪ್ರೀತಿಸಿ ಮದುವೆಯಾಗಿದ್ದ ಎರಡೇ ವರ್ಷಕ್ಕೆ ಇಬ್ಬರ ಮಧ್ಯೆ ವೈಮನಸ್ಸು ಉಂಟಾಗಿದೆ. ಇದರಿಂದ ಮನೆಯಲ್ಲಿ ಗಂಡ ಹೆಂಡತಿ ಜಗಳ ಶುರುವಾಗಿದೆ.
ಪತಿ ಮುನೀಂದ್ರ ಹಾಗೂ ವರ್ಷಾ ನಡುವೆ ಗಲಾಟೆಯಾಗಿದ್ದು, ಬಳಿಕ ಮುನೀಂದ್ರ ಮಲಗಿದ್ದ ವೇಳೆ ಪತ್ನಿ ವರ್ಷಾ ಆತನ ಮರ್ಮಾಂಗಕ್ಕೆ ಬಲವಾಗಿ ಒದ್ದಿದ್ದಾಳೆ. ತನ್ನ ಗಂಡನಿಗೆ ಡೈವೋರ್ಸ್ ಕೊಡುವಂತೆ ಪೀಡಿಸಿದ್ದಾಳೆ. ಆದ್ರೆ, ಡೈವೋರ್ಸ್ ಕೊಡಲು ಒಪ್ಪದ ಗಂಡ ಮನೆಯಲ್ಲಿ ಮಲಗಿದ್ದಾಗ, ಆತನ ಮರ್ಮಾಂಗಕ್ಕೆ ಒದ್ದು ಕೊಲೆ ಯತ್ನ ನಡೆಸಿದ್ದಾಳೆ ಎಂದು ತಿಳಿದುಬಂದಿದ್ದು, ಅತ್ತ ಗಂಡ ಆಸ್ಪತ್ರೆ ಸೇರುತ್ತಿದ್ದಂತೆ ಇತ್ತ ಹೆಂಡತಿ ಆಸ್ಪತ್ರೆ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.ವಿವಾಹಿತ ಮಹಿಳೆಯನ್ನು ಜಿಲ್ಲಾಸ್ಪತ್ರೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
https://www.newsics.com/2026/03/24/a-woman-in-bengaluru-walked-to-her-office-for-two-weeks/