newsics.com
ಬೆಂಗಳೂರು: ನೆಲಮಂಗಲದ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ಪ್ರಾಧ್ಯಾಪಕರೊಬ್ಬರು ವಿದ್ಯಾರ್ಥಿನಿಗೆ ಅಸಭ್ಯವಾಗಿ ಪ್ರಪೋಸ್ ಮಾಡಿದ್ದಾರೆಂಬ ಆರೋಪದ ಮೇಲೆ ದೊಡ್ಡ ಗಲಾಟೆ ನಡೆದಿದೆ.
ಆಕ್ರೋಶಗೊಂಡ ವಿದ್ಯಾರ್ಥಿಗಳು ವಿದ್ಯಾರ್ಥಿನಿಯ ಜತೆಗೂಡಿ ಪ್ರಾಧ್ಯಾಪಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದು, ಗೃಹ ಸಚಿವ ಜಿ. ಪರಮೇಶ್ವರ್ ಅವರ ಒಡೆತನದ ಕಾಲೇಜಿನಲ್ಲಿ ನಡೆದ ಈ ಘಟನೆ ತೀವ್ರ ಚರ್ಚೆಗೆ ಕಾರಣವಾಗಿದೆ.
ನೆಲಮಂಗಲ ತಾಲೂಕಿನ ಟಿ. ಬೇಗೂರು ಗ್ರಾಮದಲ್ಲಿರುವ ಸಿದ್ಧಾರ್ಥ ಮೆಡಿಕಲ್ ಕಾಲೇಜಿನಲ್ಲಿ ನಡೆದ ಘಟನೆೊಂದು ದೊಡ್ಡ ಗಲಾಟೆಗೆ ಕಾರಣವಾಗಿದ್ದು, ಕ್ಯಾಂಪಸ್ದಲ್ಲೇ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯ ಗೃಹ ಸಚಿವರಾದ ಡಾ. ಜಿ. ಪರಮೇಶ್ವರ ಅವರ ಒಡೆತನದ ಈ ಕಾಲೇಜಿನಲ್ಲಿ ನಡೆದ ಘಟನೆ ಇದೀಗ ಸಾರ್ವಜನಿಕ ವಲಯದಲ್ಲೂ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಕಾಲೇಜಿನ ಪ್ರಾಧ್ಯಾಪಕ ಅಬ್ದುಲ್ ಅವರು ತರಗತಿ ಕೊಠಡಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬರಿಗೆ ಅಸಭ್ಯವಾಗಿ ವರ್ತಿಸಿ ಪ್ರಪೋಸ್ ಮಾಡಿದರೆಂಬ ಆರೋಪ ಕೇಳಿಬಂದಿದೆ. ಅಲ್ಲದೆ, ಚಾಕಲೇಟ್ ನೀಡಿ ತನ್ನ ಪ್ರೀತಿಯನ್ನು ವ್ಯಕ್ತಪಡಿಸಲು ಪ್ರಯತ್ನಿಸಿದರೆಂದು ಹೇಳಲಾಗುತ್ತಿದೆ. ಈ ವರ್ತನೆಗೆ ಆಕ್ರೋಶಗೊಂಡ ವಿದ್ಯಾರ್ಥಿನಿ ತಕ್ಷಣವೇ ಅದನ್ನು ತಿರಸ್ಕರಿಸಿದ್ದು, ಇದರಿಂದ ತರಗತಿಯಲ್ಲೇ ಮಾತಿನ ಚಕಮಕಿ ಆರಂಭವಾಗಿ ಗಲಾಟೆಗೆ ತಿರುಗಿದೆ.
ವಿಷಯ ತಿಳಿದ ಕೂಡಲೇ ಇತರ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಸ್ತ್ರೀ ಕುಲಕ್ಕೆ ಗೌರವ ಇಲ್ಲವೇ?” ಎಂದು ಪ್ರಶ್ನಿಸುತ್ತಾ, ಆರೋಪಿತ ಪ್ರಾಧ್ಯಾಪಕನ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪರಿಸ್ಥಿತಿ ಕ್ಷಣಾರ್ಧದಲ್ಲಿ ಹದಗೆಟ್ಟು, ಕೆಲ ವಿದ್ಯಾರ್ಥಿಗಳು ಪ್ರಾಧ್ಯಾಪಕ ಅಬ್ದುಲ್ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದ್ದಾರೆ.
ಅನಿಲ ಅಭಾವ: ಹೆಚ್ಚುವರಿ ಹಣ ವಸೂಲಿ ಮಾಡದಂತೆ ಹೋಟೆಲ್ಗಳಿಗೆ ಕೇಂದ್ರ ಸರ್ಕಾರ ಸೂಚನೆ