Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೀ-ವೆಡ್ಡಿಂಗ್ ಶೂಟ್ ಮಾಡುತ್ತಿದ್ದವರ ಮೇಲೆ ಸ್ಥಳೀಯ ಪುಂಡರು ಹಲ್ಲೆ!
ಕರ್ನಾಟಕಪ್ರಮುಖ

ಪ್ರೀ-ವೆಡ್ಡಿಂಗ್ ಶೂಟ್ ಮಾಡುತ್ತಿದ್ದವರ ಮೇಲೆ ಸ್ಥಳೀಯ ಪುಂಡರು ಹಲ್ಲೆ!

Share
1 Min Read
SHARE

newsics.com

ಪ್ರವಾಸಕ್ಕೆ ಬಂದು ಫೋಟೋ ಶೂಟಿಂಗ್ ಮಾಡುತ್ತಿದ್ದವರ ಮೇಲೆ ಸ್ಥಳೀಯ ಕೆಲವು ಪುಂಡರು ವಿನಾಕಾರಣ ಹಲ್ಲೆ ನಡೆಸಿದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇಗುಲದ ಆವರಣದಲ್ಲಿ ನಡೆದಿದೆ.

ಪ್ರೀ-ವೆಡ್ಡಿಂಗ್ ಶೂಟ್ ಮಾಡಲು ಬಂದಿದ್ದ ಫೋಟೋಗ್ರಾಫರ್‌ಗಳ ಮೇಲೆ ಸ್ಥಳೀಯ ಯುವಕರು ಎನ್ನಲಾದ ಗುಂಪೊಂದು ಹಿಗ್ಗಾಮುಗ್ಗಾ ಹಲ್ಲೆ ನಡೆಸಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಸೆರೆಯಾಗಿದೆ.
ಸ್ಥಳೀಯ ಪುಂಡರು ಹಲ್ಲೆ ಮಾಡಿದ್ದು ಯಾಕೆ?
ಬೆಳ್ಳಂಬೆಳಗ್ಗೆ ದೇವಸ್ಥಾನದ ಸುಂದರ ಪರಿಸರದಲ್ಲಿ ಫೋಟೋಗ್ರಾಫರ್‌ಗಳು ಪ್ರೀ-ವೆಡ್ಡಿಂಗ್ ಶೂಟಿಂಗ್‌ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ಅಲ್ಲಿಗೆ ಬಂದ ಕೆಲವು ಸ್ಥಳೀಯರು, ‘ಇಲ್ಲಿ ಯಾಕೆ ಶೂಟಿಂಗ್ ಮಾಡುತ್ತಿದ್ದೀರಿ? ಯಾರು ಹೇಳಿದ್ದು ಎಂದು ಪ್ರಶ್ನಿಸಿದ್ದಾರೆ. ದೇವಸ್ಥಾನದಲ್ಲಿ ಫೋಟೋ ತೆಗೆಯಲು ಯಾರ ಅನುಮತಿ ಬೇಕು, ಪ್ರವಾಸಕ್ಕೆ ಬಂದಿದ್ದೇವೆ ಫೋಟೋ ತೆಗೆದರೆ ಏನಾಯ್ತು ಎಂದು ಪ್ರಶ್ನಿಸಿದ್ದಾರೆ. ಈ ವಿಚಾರವಾಗಿ ಎರಡೂ ಗುಂಪುಗಳ ನಡುವೆ ಮಾತಿನ ಚಕಮಕಿ ನಡೆದಿದೆ.
ಫೋಟೋಗ್ರಾಫರ್‌ಗಳ ಮೇಲೆ ಗೂಂಡಾಗಿರಿ
ಮಾತಿನ ಚಕಮಕಿ ತಾರಕಕ್ಕೇರಿದಾಗ ಸ್ಥಳೀಯರು ಎಂದು ಹೇಳಿಕೊಂಡ ಯುವಕರ ಗುಂಪು ಫೋಟೋಗ್ರಾಫರ್‌ಗಳ ಮೇಲೆ ಏಕಾಏಕಿ ಮುಗಿಬಿದ್ದು ಹಲ್ಲೆ ನಡೆಸಿದ್ದಾರೆ. ‘ಯಾಕಪ್ಪಾ ಹೊಡೆಯುತ್ತಿದ್ದೀರಿ, ಏನಾಗಿದೆ?’ ಎಂದು ಕೇಳಿದರೂ ಫೋಟೋಗ್ರಾಫರ್‌ಗಳಿಗೆ ಮನಬಂದಂತೆ ಥಳಿಸಿದ್ದಾರೆ. ಅವರು ಯಾಕೆ ಹೊಡೆಯುತ್ತಿದ್ದಾರೆಂದೇ ತಿಳಿದಿಲ್ಲ. ಪ್ರಶ್ನಿಸಿದಷ್ಟೂ ಹಲ್ಲೆ ನಡೆಸಿರುವುದು ವಿಡಿಯೋದಲ್ಲಿ ಕಾಣಬಹುದು.
ಶಾಂತಿಯುತವಾಗಿದ್ದ ದೇವಸ್ಥಾನದ ಆವರಣ ಪುಂಡರಿಂದಾಗಿ ಕೆಲಕಾಲ ಪ್ರವಾಸಿಗರಲ್ಲಿ ಆತಂಕ ತರಿಸಿತು. ಪ್ರವಾಸಿಗರ ಮೇಲೆ ಸ್ಥಳೀಯರು ಎನ್ನಲಾದ ವ್ಯಕ್ತಿಗಳು ಗೂಂಡಾಗಿರಿ ನಡೆಸುತ್ತಿರುವುದನ್ನು ಕಂಡು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶೂಟಿಂಗ್ ಉಪಕರಣಗಳನ್ನು ಹಾನಿಗೊಳಿಸಲು ಯತ್ನಿಸಿದ ಘಟನೆಯೂ ನಡೆದಿದೆ ಎನ್ನಲಾಗಿದೆ.
ಪೊಲೀಸ್ ಮೆಟ್ಟಿಲೇರಿದ ಪ್ರಕರಣ
ಈ ಗಲಾಟೆಗೆ ಸಂಬಂಧಿಸಿದಂತೆ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಎರಡೂ ಕಡೆಯವರು ಪರಸ್ಪರ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ಮತ್ತು ಸ್ಥಳೀಯರ ನಡುವಿನ ಇಂತಹ ಘರ್ಷಣೆಗಳು ಪ್ರವಾಸೋದ್ಯಮದ ಮೇಲೆ ಕರಿನೆರಳು ಬೀರುತ್ತಿವೆ.

ಮಹಿಳಾ ಪ್ರಯಾಣಿಕರ ಮುಂದೆ ಕೊಲೆ ರಹಸ್ಯ ಬಿಚ್ಚಿಟ್ಟ ಉಬರ್ ಚಾಲಕ; ವೈರಲ್ ವಿಡಿಯೋ ನೋಡಿ

TAGGED:Local thugs attack those doing a pre-wedding shoot!
Share This Article
Facebook Twitter Copy Link Print
Previous Article ಮಹಿಳಾ ಪ್ರಯಾಣಿಕರ ಮುಂದೆ ಕೊಲೆ ರಹಸ್ಯ ಬಿಚ್ಚಿಟ್ಟ ಉಬರ್ ಚಾಲಕ; ವೈರಲ್ ವಿಡಿಯೋ ನೋಡಿ
Next Article ಅನುಮತಿ ಇಲ್ಲದೆ ಹಾರ್ಮುಜ್ ಮೂಲಕ ಹಾದುಹೋದ ತೈಲ ಟ್ಯಾಂಕರ್ಗೆ ಬೆಂಕಿ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?