https://youtube.com/shorts/7-1-Ue0Sh8o?si=IPl4cpVzjeJG3YdO
newsics.com
ಅದ್ಯಾಕೋ ‘ಕಾಂತಾರ’ ಚಿತ್ರತಂಡ ಗೊಂದಲದ ಗೂಡಾಗಿದೆ. ಹೊಂಬಾಳೆ ಫಿಲ್ಮ್ಸ್ ಸಂಸ್ಥೆ, ರಿಷಬ್ ಶೆಟ್ಟಿ ನಡುವೆ ಎಲ್ಲವೂ ಸರಿಯಿಲ್ಲ ಎನ್ನುವ ಊಹಾಪೋಹ ಶುರುವಾಗಿದೆ. ‘ಹೊಂಬಾಳೆ ಫಿಲ್ಮ್ಸ್’ ಹಾಗೂ ‘ಕಾಂತಾರ’ ಇನ್ಸ್ಟಾಗ್ರಾಮ್ ಖಾತೆಗಳನ್ನು ರಿಷಬ್ ಶೆಟ್ಟಿ ಅನ್ಫಾಲೋ ಮಾಡಿದ್ದಾರೆ. ರಾಜ್ ಬಿ ಶೆಟ್ಟಿ ಜೊತೆಗೂ ಅಷ್ಟಕ್ಕಷ್ಟೆ, ಎನ್ನುವಂತಾಗಿದೆ. ಅದಕ್ಕೆ ಅವರನ್ನು ಅನ್ಫಾಲೋ ಮಾಡಿದ್ದಾರೆ ಎನ್ನುವ ಚರ್ಚೆ ನಡೀತಿದೆ.
ಅಚ್ಚರಿ ಎನ್ನುವಂತೆ ಇದೀಗ ನಟಿ ರುಕ್ಮಿಣಿ ವಸಂತ್ ಅವರನ್ನು ಕೂಡ ರಿಷಬ್ ಶೆಟ್ಟಿ ಅನ್ಫಾಲೋ ಮಾಡಿದ್ದಾರೆ ಎನ್ನುವ ಸುದ್ದಿ ವೈರಲ್ ಆಗ್ತಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಕೆಲವರು ಪೋಸ್ಟ್ ಮಾಡುತ್ತಿದ್ದಾರೆ. ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸಿದ ‘ಕಾಂತಾರ- 1’ ಚಿತ್ರದಲ್ಲಿ ರುಕ್ಮಿಣಿ ನಾಯಕಿಯಾಗಿ ನಟಿಸಿದ್ದರು. ಸಿನಿಮಾ ಬ್ಲಾಕ್ಬಸ್ಟರ್ ಹಿಟ್ ಆಗಿದ್ದು ಗೊತ್ತೇಯಿದೆ. ರಿಷಬ್ ಶೆಟ್ಟಿ ಅವರ ಡಿಜಿಟಲ್ ಟೀಂ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯನ್ನು ಹ್ಯಾಂಡಲ್ ಮಾಡ್ತಿದೆ.
ಇವರಷ್ಟೇ ಅಲ್ಲದೆ, ಸುಮಾರು 40ಕ್ಕೂ ಹೆಚ್ಚು ಅಕೌಂಟ್ಗಳನ್ನು ರಿಷಬ್ ತಮ್ಮ ಪಟ್ಟಿಯಿಂದ ತೆಗೆದುಹಾಕಿದ್ದಾರೆ ಎನ್ನಲಾಗಿದೆ.
ಯುಗಾದಿ ಹಬ್ಬದಂದು ರಿಷಬ್ ‘2ನೇ ಅಧ್ಯಾಯ ಆರಂಭ’ ಎಂಬ ಪೋಸ್ಟರ್ ಹಂಚಿಕೊಂಡಿದ್ದರು. ಇದು ‘ಕಾಂತಾರ’ ಸರಣಿಯದ್ದೇ ಅಥವಾ ಅವರ ಮೊದಲ ಹಿಟ್ ಚಿತ್ರ ‘ಸರಕಾರಿ ಹಿರಿಯ ಪ್ರಾಥಮಿಕ ಶಾಲೆ’ಯ ಮುಂದುವರಿದ ಭಾಗವೇ ಎಂಬ ಗೊಂದಲ ಅಭಿಮಾನಿಗಳಲ್ಲಿದೆ. ಹೊಂಬಾಳೆ ಬ್ಯಾನರ್ ಬದಲಿಗೆ ರಿಷಬ್ ತಮ್ಮದೇ ಸ್ವಂತ ಬ್ಯಾನರ್ ಅಡಿಯಲ್ಲಿ ಹೊಸ ಸಿನಿಮಾ ಘೋಷಿಸಿರುವುದು ಭಿನ್ನಾಭಿಪ್ರಾಯದ ವದಂತಿಗಳಿಗೆ ಮತ್ತಷ್ಟು ಪುಷ್ಟಿ ನೀಡಿದಂತಾಗಿದೆ.
ರಿಷಬ್ ಶೆಟ್ಟಿ ಅವರು ಪ್ರಶಾಂತ್ ವರ್ಮಾ ನಿರ್ದೇಶನದ ‘ಜೈ ಹನುಮಾನ್’ ಚಿತ್ರದಲ್ಲಿ ಮಗ್ನರಾಗಿದ್ದಾರೆ. ಅತ್ತ ನಟಿ ರುಕ್ಮಿಣಿ ವಸಂತ್ ಅವರು ಜ್ಯೂ. ಎನ್ಟಿಆರ್ ಮತ್ತು ಪ್ರಶಾಂತ್ ನೀಲ್ ಕಾಂಬಿನೇಷನ್ನ ಸಿನಿಮಾದಲ್ಲಿ ನಟಿಸಲು ಸಜ್ಜಾಗುತ್ತಿದ್ದಾರೆ. ಒಟ್ಟಿನಲ್ಲಿ, ‘ಕಾಂತಾರ’ದಂತಹ ಜಾಗತಿಕ ಯಶಸ್ಸಿನ ಬಳಿಕ ರಿಷಬ್ ಶೆಟ್ಟಿ ತಮ್ಮ ಆಪ್ತ ಬಳಗದಿಂದ ದೂರವಾಗುತ್ತಿದ್ದಾರಾ? ಅಥವಾ ಇದು ಕೇವಲ ಅವರ ಸೋಷಿಯಲ್ ಮೀಡಿಯಾ ಟೀಮ್ ಮಾಡುತ್ತಿರುವ ಬದಲಾವಣೆಯೇ? ಅಥವಾ ಯಾವುದಾದರೂ ಹೊಸ ಪ್ರಾಜೆಕ್ಟ್ನ ಪ್ರಚಾರ ತಂತ್ರವೇ ಎಂಬುದು ಶೀಘ್ರದಲ್ಲೇ ತಿಳಿಯಲಿದೆ.
https://www.newsics.com/2026/03/28/bcci-makes-tough-decision-before-ipl-starts/