newsics.com
ನವದೆಹಲಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ಟಿಸಿ) ತನ್ನ “ಪಾರದರ್ಶಕ ನೇಮಕಾತಿ ಮತ್ತು ಪರಿಣಾಮಕಾರಿ ತರಬೇತಿ ಕಾರ್ಯಕ್ರಮಕ್ಕಾಗಿ ಪ್ರತಿಷ್ಠಿತ ಸ್ಕೋಚ್ ರಾಷ್ಟ್ರೀಯ ಪ್ರಶಸ್ತಿ–2026ನ್ನು ಪಡೆದುಕೊಂಡಿದೆ.
ನವದೆಹಲಿಯ ಇಂಡಿಯಾ ಹ್ಯಾಬಿಟೇಟ್ ಸೆಂಟರ್ನ ಸಿಲ್ವರ್ ಓಕ್ ಹಾಲ್ನಲ್ಲಿ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ, ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ ಪಾಷ ಅವರು ಈ ಪ್ರಶಸ್ತಿಯನ್ನು ಸ್ಕೋಚ್ ಫೌಂಡೇಶನ್ ಅಧ್ಯಕ್ಷ ಸಮೀರ್ ಕೊಚ್ಚರ್, ಉಪಾಧ್ಯಕ್ಷ ಡಾ. ಗುರುಚರಣ್ ಧನ್ಜಾಲ್ ಅವರಿಂದ ಸ್ವೀಕರಿಸಿದರು.
ಕಳೆದ ಆರು ತಿಂಗಳಲ್ಲಿ 12 ಸಾವಿರಕ್ಕೂ ಹೆಚ್ಚು ಸಿಬ್ಬಂದಿಗೆ ಪರಿಣಾಮಕಾರಿ ತರಬೇತಿ ನೀಡಲಾಗಿದ್ದು, ನಿಗಮದ ಕಾರ್ಯಕ್ಷಮತೆ ಹಾಗೂ ಸೇವಾ ಗುಣಮಟ್ಟದಲ್ಲಿ ಸುಧಾರಣೆಗೆ ಕಾರಣವಾಗಿದೆ.
ದೆಹಲಿ ಮೂಲದ SKOCH Foundation 1997ರಲ್ಲಿ ಸ್ಥಾಪಿತವಾಗಿದ್ದು, 2003ರಿಂದ ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಆಡಳಿತ, ಹಣಕಾಸು ನಿರ್ವಹಣೆ, ತಂತ್ರಜ್ಞಾನ ಅಳವಡಿಕೆ ಹಾಗೂ ಪಾರದರ್ಶಕ ನೀತಿಗಳ ಅನುಷ್ಠಾನಕ್ಕಾಗಿ ಸಂಸ್ಥೆಗಳಿಗೆ ಸ್ಕೋಚ್ ಪ್ರಶಸ್ತಿಗಳನ್ನು ನೀಡುತ್ತಿದೆ.
ಅಡಿಕೆ ತೋಟದಲ್ಲಿ ಸುಟ್ಟ ಸ್ಥಿತಿಯಲ್ಲಿ ಉಪನ್ಯಾಸಕನ ಮೃತದೇಹ ಪತ್ತೆ; ಆಗಿದ್ದೇನು?