Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕ್ಯಾಮರಾ ಮುಂದೆಯೇ ಆರ್ ಅಶ್ವಿನ್, ವೀರೇಂದ್ರ ಸೆಹ್ವಾಗ್ ಕಿತ್ತಾಟ
ದೇಶಪ್ರಮುಖ

ಕ್ಯಾಮರಾ ಮುಂದೆಯೇ ಆರ್ ಅಶ್ವಿನ್, ವೀರೇಂದ್ರ ಸೆಹ್ವಾಗ್ ಕಿತ್ತಾಟ

Share
2 Min Read
SHARE

newsics.com

ಐಪಿಎಲ್‌ ನ ಮೊದಲ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಿತು. ಈ ಉದ್ಘಾಟನಾ ಪಂದ್ಯದಲ್ಲಿ, ಆರ್‌ಸಿಬಿ ತಂಡ ಸನ್‌ರೈಸರ್ಸ್‌ ಹೈದರಾಬಾದ್‌ ವಿರುದ್ಧ 6 ವಿಕೆಟ್‌ಗಳ ಭರ್ಜರಿ ಜಯ ಗಳಿಸಿತು.
ಆದರೆ ನಿನ್ನೆಯ ಮ್ಯಾಚ್‌ನ ಲೈವ ಕಾಮೆಂಟರಿ ವೇಳೆ ಕಾಮೆಂಟೆಟರ್‌ ಹಾಗೂ ಇಬ್ಬರು ಕ್ರಿಕೆಟ್ ದಿಗ್ಗಜರಾದ ವೀರೇಂದ್ರ ಸೆಹ್ವಾಗ್ ಹಾಗೂ ಆರ್ ಅಶ್ವಿನ್ ಲೈವ್‌ನಲ್ಲೇ ಪರಸ್ಪರ ವಾಕ್ಸಮರ ನಡೆಸಿದ್ದು, ಇದು ಮುಜುಗರಕ್ಕೆ ಕಾರಣವಾಗಿದೆ. ತಾಳ್ಮೆ ಕಳೆದುಕೊಂಡು ಕ್ಯಾಮರಾ ಮುಂದೆಯೇ ಕಿತ್ತಾಡಿದ ಈ ಇಬ್ಬರ ವಿರುದ್ಧ ಈಗ ಕ್ರಮ ಕೈಗೊಳ್ಳುವುದಕ್ಕೆ ಬಿಸಿಸಿಐ ಮುಂದಾಗಿದೆ ಎಂದು ವರದಿಯಾಗಿದೆ.
ಸೆಹ್ವಾಗ್ ಮಾತಿಗೆ ಆರ್ ಅಶ್ವಿನ್ ತಿರುಗೇಟು
ಹೌದು ನಿನ್ನೆಯಷ್ಟೇ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ವರ್ಷದ ಮೊದಲ ಐಪಿಎಲ್ ಪಂದ್ಯ ನಡೆಯಿತು. ಈ ಪಂದ್ಯದ ವೇಳೆ ತಮ್ಮ ಚೊಚ್ಚಲ ಕ್ರಿಕೆಟ್ ಕಾಮೆಂಟರಿ ಹೇಳುವುದಕ್ಕೆ ಕ್ರಿಕೆಟರ್ ಆರ್ ಅಶ್ವಿನ್ ಆಗಮಿಸಿದ್ದರು. ಆದರೆ ಅವರು ಕಾಮೆಂಟರಿ ಬಾಕ್ಸ್‌ಗೆ ಬರುತ್ತಿದ್ದಂತೆ ಅಲ್ಲೇ ಇದ್ದ ಸೆಹ್ವಾಗ್ ಹಾಸ್ಯಮಯವಾಗಿ ಅವರ ಕಾಲೆಳೆಯುವ ಪ್ರಯತ್ನ ಮಾಡಿದ್ದಾರೆ. ಇವತ್ತಾದರೂ ಜನ ತಮ್ಮ ಹೃದಯದಿಂದ ಮಾತನಾಡಲಿದ್ದಾರೆ ಹಾಗೂ ಮಾತನಾಡುವ ಮೊದಲು ಜಾಸ್ತಿ ಯೋಚನೆ ಮಾಡುವುದಿಲ್ಲ ಎಂದು ಭಾವಿಸುವೆ ಎಂದು ಹೇಳಿದ್ದಾರೆ. ವೀರೇಂದ್ರ ಸೆಹ್ವಾಗ್ ಈ ಮಾತಿಗೆ ಆರ್ ಅಶ್ವಿನ್ ಸಿಡಿಮಿಡಿಗೊಂಡಿದ್ದು, ನನ್ನ ಪೋಷಕರು ನನಗೆ ಯಾವಾಗಲೂ ಮಾತನಾಡುವ ಮೊದಲು ಯೋಚಿಸಿ ಮಾತನಾಡುವಂತೆ ಹೇಳಿಕೊಟ್ಟಿದ್ದಾರೆ ಹಾಗೂ ನಾನು ಯೋಚನೆ ಮಾಡದೇ ಎಂದಿಗೂ ಯಾವ ಮಾತನ್ನೂ ಆಡುವುದಿಲ್ಲ ಎಂದು ಆರ್ ಅಶ್ವಿನ್ ಹೇಳಿದ್ದಾರೆ.
ಈ ಮಾತಿನ ನಂತರ ಇಬ್ಬರ ಮಧ್ಯೆ ವಾಗ್ವಾದ ನಡೆದಿದೆ. ಇಬ್ಬರ ವಾಕ್ಸಮರದಿಂದಾಗಿ ಕಾಮೆಂಟರಿ ಬಾಕ್ಸ್‌ನಲ್ಲಿ ವಾತಾವರಣ ಬಿಸಿಯೇರಿ ಆತಂಕಕ್ಕೇ ಕಾರಣವಾಗಿತ್ತು. ಈ ಹಿನ್ನೆಲೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಬಿಸಿಸಿಐ ಈ ಇಬ್ಬರು ಮಾಜಿ ಕ್ರಿಕೆಟರ್‌ಗಳ ವಿರುದ್ಧ ಕ್ರಮ ಕೈಗೊಳ್ಳುವುದಕ್ಕೆ ಮುಂದಾಗಿದೆ ಎಂದು ವರದಿಯಾಗಿದೆ. ಕ್ರಿಕೆಟ್ ಅನ್ನು ವಿಶ್ಲೇಷಿಸುವುದು ಕಾಮೆಂಟರಿ ಪ್ಯಾನೆಲ್‌ನ ಕೆಲಸ, ಆದರೆ ವೈಯಕ್ತಿಕ ವಾದಗಳು ಮತ್ತು ಹಳೆಯ ಪೈಪೋಟಿ ಸಾರ್ವಜನಿಕವಾಗಿ ಹೊರಬಂದರೆ, ಬಿಸಿಸಿಐ ಕಠಿಣ ಕ್ರಮ ಕೈಗೊಳ್ಳಬಹುದು.. ಆದರೆ ಬಿಸಿಸಿಐ ಕ್ರಮ ಕೈಗೊಳ್ಳುವ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಇದುವರೆಗೆ ಬಂದಿಲ್ಲ, ಆದರೆ ಸೋಶಿಯಲ್ ಮೀಡಿಯಾದಲ್ಲಿ ಈ ವಿಚಾರ ಸಿಕ್ಕಾಪಟ್ಟೆ ವೈರಲ್ ಆಗ್ತಿದ್ದು, ಜನ ಈ ವಿಚಾರದ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ.
ಅಶ್ವಿನ್ ಈ ಕಾಮೆಂಟರಿ ಪಾತ್ರದಲ್ಲಿ ಚೆನ್ನಾಗಿ ನಟಿಸಲು ಸಾಧ್ಯವಿಲ್ಲ ಮತ್ತು ಸುಲಭವಾಗಿ ಅವರನ್ನು ಕೆರಳಿಸಬಹುದು. ಇದೆಲ್ಲವೂ ಅವರ ಸ್ವಂತ YT ಚಾನೆಲ್‌ನಲ್ಲಿ ಚೆನ್ನಾಗಿ ನಡೆಯಬಹುದು ಏಕೆಂದರೆ ಅವರು ಕೆಟ್ಟದಾಗಿ ಮಾತನಾಡಬಹುದು ಮತ್ತು ಅವರೇ ಅಲ್ಲಿ ಬಾಸ್ ಆದರೆ ಇಲ್ಲಿ ಯಾವಾಗಲೂ ಅವರ ಮುಖವನ್ನು ನೋಡಿಕೊಂಡು ಮಾತನಾಡುವ ಜನ ಇರುತ್ತಾರೆ ಎಂದು ಒಬ್ಬರು ಕಾಮೆಂಟ್ ಮಾಡಿದ್ದಾರೆ. ಅಶ್ವಿನ್ ಯೂಟ್ಯೂಬ್‌ನಲ್ಲಿಯೇ ಇದ್ದು, ಅಲ್ಲಿಂದಲೇ ವಿಶ್ಲೇಷಣೆ ಮಾಡಬೇಕಿತ್ತು ಎಂದು ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ. ಇಲ್ಲಿ ಕೆರಳಿಸಿದ್ದು ಯಾರು? ಅಶ್ವಿನ್ ಕ್ರಿಕೆಟ್ ಅನ್ನು ವಿಶ್ಲೇಷಿಸಲು ಇದ್ದಾರೆಯೇ ಹೊರತು ಸೆಹ್ವಾಗ್ ಅವರಂತೆ ರಬ್ಬಿಶ್ ಮಾತನಾಡಲು ಅಲ್ಲ ಎಂದು ಒಬ್ಬರು ಅಶ್ವಿನ್ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ವಾಸ್ತವವೆಂದರೆ ಅವರು ಹೊಸ ಕಾಮೆಂಟೇಟರ್‌ಗಳನ್ನು ದ್ವೇಷಿಸುತ್ತಾರೆ. ಜಹೀರ್ ಖಾನ್ ಕೂಡ ಅಶ್ವಿನ್ ಗುಂಪಿಗೆ ಸೇರಿದಾಗ ಅವರನ್ನು ಕಾಡಿಸಿದ್ದರು ಎಂದು ಮತ್ತೊಬ್ಬರು ಕಾಮೆಂಟ್ ಮಾಡಿದ್ದಾರೆ. ಸೆಹ್ವಾಗ್ ಕೂಡ ಹೇಗೆ ವೃತ್ತಿಪರ ಆಗಿರಬೇಕು ಎಂಬುದನ್ನು ಕಲಿಯಬೇಕು ಎಂದು ಒಬ್ಬರು ಕಾಮೆಂಟ್ ಮಾಡಿದ್ದಾರೆ. ಒಟ್ಟಿನಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಈ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

https://x.com/RitikSriva75/status/2038082029942882349?ref_src=twsrc%5Etfw%7Ctwcamp%5Etweetembed%7Ctwterm%5E2038082029942882349%7Ctwgr%5E4bd9156205e9e3d61c11fba36728523b9aa76ed9%7Ctwcon%5Es1_c10&ref_url=https%3A%2F%2Fapi-news.dailyhunt.in%2F

ದೇವರು ನನ್ನ ಕರೆಯುತ್ತಿದ್ದಾನೆ ಎಂದು ಪತ್ರ ಬರೆದಿಟ್ಟು ಯುವತಿ ನಾಪತ್ತೆ !

TAGGED:R AshwinVirender Sehwag banter in front of the camera
Share This Article
Facebook Twitter Copy Link Print
Previous Article ದೇವರು ನನ್ನ ಕರೆಯುತ್ತಿದ್ದಾನೆ ಎಂದು ಪತ್ರ ಬರೆದಿಟ್ಟು ಯುವತಿ ನಾಪತ್ತೆ !
Next Article ಆರ್ಥಿಕ ಬಿಕ್ಕಟ್ಟು; ಬಂಗಾರದ ಮಾರಾಟಕ್ಕೆ ಮುಂದಾದ ರಷ್ಯಾ

Popular Posts

Heavy Rain 5 ದಿನಗಳ ಕಾಲ ರಾಜ್ಯಾದ್ಯಂತ ಬಿರುಗಾಳಿ ಸಹಿತ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

1 Min Read

Kangana Ranaut ರೇಷ್ಮೆ ಪೈಠಣಿ ಸೀರೆಯಲ್ಲಿ ಮಿಂಚಿದ ಕಂಗನಾ ರಣಾವತ್

1 Min Read

PM Narendra Modi ಮಧ್ಯಮ ವರ್ಗದವರು ಯಾವುದೇ ಕಾರಣಕ್ಕೂ ಹಿಂದುಳಿಯದಂತೆ ನಾವು ಹಗಲಿರುಳು ಶ್ರಮಿಸಬೇಕು : NDA ಸಮಾವೇಶದಲ್ಲಿ ಪ್ರಧಾನಿ ಮೋದಿ

1 Min Read

Numerology ನಿಮ್ಮ ಮೊಬೈಲ್ ನಂಬರ್​​ನ ಕೊನೆಯ ಎರಡು ಸಂಖ್ಯೆ ಯಾವುದಿರಬೇಕು?

2 Min Read

You Might Also Like

ಕರ್ನಾಟಕದೇಶಪ್ರಮುಖ

Gold Rate ಆಭರಣ ಪ್ರಿಯರಿಗೆ ಭರ್ಜರಿ ಗುಡ್‌ನ್ಯೂಸ್ : ಚಿನ್ನದ ದರ ಭಾರಿ ಇಳಿಕೆ ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ ₹10,000 ದಾಖಲೆಯ ಕುಸಿತ

1 Min Read
ದೇಶಪ್ರಮುಖ

ಮಮತಾ ಬ್ಯಾನರ್ಜಿಗೆ ಮತ್ತೊಂದು ಶಾಕ್ : ಟಿಎಂಸಿ ರಾಜ್ಯಸಭಾ ಸಂಸದೆ ಸುಷ್ಮಿತಾ ದೇವ್ ರಾಜೀನಾಮೆ

1 Min Read
ಕರ್ನಾಟಕಪ್ರಮುಖ

ವಾರದೊಳಗೆ 200 ವೈದ್ಯರ ಖಾಯಂ ನೇಮಕಾತಿಗೆ ಯು.ಟಿ. ಖಾದರ್ ಆದೇಶ

1 Min Read
ದೇಶಪ್ರಮುಖವಿದೇಶ

pak helicopter crashes ಪಿಒಕೆಯಲ್ಲಿ ಪಾಕ್ ಸೇನಾ ಹೆಲಿಕಾಪ್ಟರ್ ಪತನ: 21 ಸಿಬ್ಬಂದಿ ಸಾವು, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?