Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಬಾದಾಮಿ ಜಾತ್ರೆಯಲ್ಲಿ 30 ದಿನದಲ್ಲಿ 1 ಕೋಟಿ ಸಿಕ್ತು: ರಾಜು ತಾಳಿಕೋಟಿ ಪುತ್ರ ಹೇಳಿದ್ದೇನು?
ಪ್ರಮುಖಮನರಂಜನೆ

ಬಾದಾಮಿ ಜಾತ್ರೆಯಲ್ಲಿ 30 ದಿನದಲ್ಲಿ 1 ಕೋಟಿ ಸಿಕ್ತು: ರಾಜು ತಾಳಿಕೋಟಿ ಪುತ್ರ ಹೇಳಿದ್ದೇನು?

Share
2 Min Read
SHARE

https://youtube.com/shorts/b7DblvgZf1A?si=BCR0sxsn8Xzh1cnn

newsics.com

ರಾಜು ತಾಳಿಕೋಟಿ ಅವರ ಪುತ್ರ ಭರತ್, ತಮ್ಮ ನಾಟಕ ಕಂಪನಿ ಬಾದಾಮಿ ಜಾತ್ರೆಯಲ್ಲಿ 30 ದಿನಗಳಲ್ಲಿ 1 ಕೋಟಿ ರೂ.ಗೂ ಹೆಚ್ಚು ಗಳಿಸಿದೆ ಎಂದು ಬಹಿರಂಗಪಡಿಸಿದ್ದಾರೆ.

ಸಂದರ್ಶನವೊಂದರಲ್ಲಿ, ಸಿನಿಮಾ-ಸೀರಿಯಲ್‌ಗಳಿಗಿಂತ ರಂಗಭೂಮಿಯಲ್ಲಿ ಹೆಚ್ಚು ಸಂಭಾವನೆ ಇದೆ ಎಂದಿದ್ದಾರೆ.
ರಂಗಭೂಮಿಯ ಹಿರಿಯ ಕಲಾವಿದ ರಾಜು ತಾಳಿಕೋಟಿ ಅವರ ಪುತ್ರ ಭರತ್ ಸಂದರ್ಶನದ ವಿಡಿಯೋ ಕ್ಲಿಪ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವರ್ಷ ಬಾಗಲಕೋಟೆ ಜಿಲ್ಲೆಯ ಬಾದಾಮಿ ಬನಶಂಕರಿ ಜಾತ್ರೆಯಲ್ಲಿ ತಮ್ಮ ನಾಟಕ ಕಂಪನಿ (ಗುರು ಖಾಸ್ಗತೇಶ್ವರ ನಾಟಕ ಸಂಘ) 1 ಕೋಟಿ ರೂ.ಗಳವರೆಗೆ ಸಂಪಾದನೆ ಮಾಡಿದೆ ಎಂದು ಭರತ್ ತಾಳಿಕೋಟಿ ಹೇಳಿಕೊಂಡಿದ್ದಾರೆ.
ಟಾಕಿಂಗ್ ಪ್ಯಾರೋಟ್ಸ್ (Talking parrots kannada) ಯುಟ್ಯೂಬ್ ಚಾನೆಲ್‌ಗೆ ಸಂದರ್ಶನ ನೀಡಿರುವ ಭರತ್ ತಾಳಿಕೋಟಿ, ವೃತ್ತಿ ಮತ್ತು ಖಾಸಗಿ ಬದುಕಿನ ಕುರಿತ ಹಲವು ವಿಷಯಗಳನ್ನು ಅಭಿಮಾನಿಗಳೊಂದಿಗೆ ಮುಕ್ತವಾಗಿ ಹಂಚಿಕೊಂಡಿದ್ದಾರೆ. ರಂಗಭೂಮಿಯಲ್ಲಿ ಸಿನಿಮಾ ಮತ್ತು ಸೀರಿಯಲ್‌ಗಿಂತ ಹೆಚ್ಚು ಸಂಭಾವನೆ ಸಿಗುತ್ತದೆ. ಆದ್ರೆ ಸ್ಟಾರ್ ಕಲಾವಿದರಿಗೆ ಹೆಚ್ಚು ಸಮಯ ನಾಟಕಗಳಿಗೆ ನೀಡಲು ಆಗಲ್ಲ. ನಾವು ಮಾತ್ರ ತಿಂಗಳುಗಟ್ಟಲೇ ನಾಟಕ ಮಾಡುತ್ತಿರುತ್ತೇವೆ ಎಂದರು.
ತಂದೆ ರಾಜು ತಾಳಿಕೋಟಿ ಅವರು ಮುಸ್ಲಿಮರಾಗಿದ್ರೂ, ಭರತ್ ಅವರ ಅಪ್ಪಟ ರಾಘವೇಂದ್ರ ಸ್ವಾಮಿಗಳ ಭಕ್ತರು. ವರ್ಷಕ್ಕೆ ಎರಡೂ ಬಾರಿಯಾದ್ರೂ ಮಂತ್ರಾಲಯಕ್ಕೆ ತೆರಳಿ ರಾಯರ ದರ್ಶನ ಪಡೆಯುತ್ತಾರೆ. ಮನೆಯಲ್ಲಿ ರಂಜಾನ್ ಮತ್ತು ದೀಪಾವಳಿಯನ್ನು ಅದ್ಧೂರಿಯಾಗಿ ಆಚರಿಸುತ್ತಾರೆ.
ಉತ್ತರ ಕರ್ನಾಟಕ ಭಾಗದಲ್ಲಿ ನಾಟಕದ ಕ್ರೇಜ್ ಮಾತ್ರ ಇನ್ನು ಕಡಿಮೆಯಾಗಿಲ್ಲ. ಸಿನಿಮಾ ಟಿಕೆಟ್ 100 ರೂಪಾಯಿ ಇದ್ರೆ ನಮ್ಮ 150 ರೂಪಾಯಿ ಆಗಿರುತ್ತದೆ. ಕೆಲವೊಮ್ಮೆ ಸ್ಟಾರ್ ಕಲಾವಿದರು ಬಂದಾಗ ಟಿಕೆಟ್ ಬೆಲೆ ಹೆಚ್ಚು ಮಾಡಿರುತ್ತೇವೆ. ಇಂದು ಸಿನಿಮಾಗಳು ಒಂದು ವಾರ ಥಿಯೇಟರ್‌ನಲ್ಲಿ ಉಳಿಯೋದು ಕಷ್ಟದ ಪರಿಸ್ಥಿತಿ ಬಂದಿದೆ.
ನಮ್ಮ ನಾಟಕಗಳು ದಿನಕ್ಕೆ ನಾಲ್ಕು ಶೋ ಲೆಕ್ಕದಲ್ಲಿ 30 ದಿನಗಳವರೆಗೆ ಪ್ರದರ್ಶನ ಕಾಣುತ್ತವೆ. ಇತ್ತೀಚಿಗೆ ಹೆಚ್ಚಿನ ಕಲಾವಿದರು ಸಿನಿಮಾ ಮತ್ತು ಕಿರುತೆರೆಯತ್ತ ಆಕರ್ಷಿತರಾಗುತ್ತಿರುವ ಕಾರಣ ರಂಗಭೂಮಿಗೆ ಹೊಸಬರ ಆಗಮನ ಕಡಿಮೆಯಾಗಿದೆ. ರಂಗಭೂಮಿ ಹಿಂದೆಯೂ ಇತ್ತು, ಇಂದಿಗೂ ಇದೆ, ಮುಂದೆಯೂ ಇರುತ್ತದೆ ಎಂದು ಭರತ್ ವಿಶ್ವಾಸ ವ್ಯಕ್ತಪಡಿಸುತ್ತಾರೆ.
ಈ ಹಿಂದೆ ಬಾದಾಮಿ ಜಾತ್ರೆಯಲ್ಲಿ ಎರಡು ನಾಟಕ ಕಂಪನಿ ಬಂದ್ರೆ, ಏಳೆಂಟು ಸಿನಿಮಾ ಟೆಂಟ್‌ಗಳು ಬರುತ್ತಿದ್ದವು. ಇಂದು ಕಾಲ ಬದಲಾಗಿದ್ದು, ಸಿನಿಮಾ ಟೆಂಟ್‌ಗಳು ಹೋಗಿ 8 ರಿಂದ 10 ನಾಟಕ ಕಂಪನಿಗಳು ಕಾಣಸಿಗುತ್ತವೆ. ಈ ಬಾರಿ ಜಾತ್ರೆಯಲ್ಲಿ ಕಾಮಿಡಿ ಕಿಲಾಡಿ ಹರೀಶ್ ಹಿರಿಯೂರ, ಪ್ರಿಯಾ ಹಿರಿಯೂರು, ನಯನಾ, ಸೋದರ ದಾವಲ್ ಸೇರಿದಂತೆ ನಮ್ಮದೇ ಆದ ಒಂದು ತಂಡವನ್ನು ಕಟ್ಟಿಕೊಂಡು ನಾಟಕ ಮಾಡಿ ಯಶಸ್ವಿಯಾಗಿದ್ದೇವೆ. 30 ದಿನದಲ್ಲಿ 1 ಕೋಟಿಗೂ ಹೆಚ್ಚು ಸಂಪಾದನೆಯಾಗಿದ್ದು, ಇಡೀ ಕುಳಿತುಕೊಂಡು ತಿನ್ನಬಹುದು ಎಂದು ರಂಗಭೂಮಿ ಬಗ್ಗೆ ಭರತ್ ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ.

ಇಂದು ರಂಗಭೂಮಿ ಕಲಾವಿದರ ಕೊರತೆಯನ್ನು ಎದುರಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ ಭರತ್ ತಾಳಿಕೋಟಿ, ನಮ್ಮ ತಂದೆಯವರಿಗೆ ನಾವು ಆರ್ಟಿಸ್ಟ್ ಆಗೋದು ಇಷ್ಟವಿರಲಿಲ್ಲ. ಈಗ ನಮಗೂ ಅದೇ ಯೋಚನೆಗಳಿವೆ. ಹೊಸ ಕಲಾವಿದರು ಸೀರಿಯಲ್‌, ಸಿನಿಮಾ ಅಂತ ಹೋಗ್ತಾರೆ. ಆದ್ರೆ ನಾವು ಅಲ್ಲಿಗಿಂತ ಹೆಚ್ಚು ಸಂಭಾವನೆಯನ್ನು ನೀಡುತ್ತೇವೆ. ಈಗಾಗಲೇ ತಮ್ಮದೇ ಅಭಿಮಾನಿ ಬಳಗ ಸೃಷ್ಟಿಸಿಕೊಂಡಿರುವ ನಯನಾ, ಹರೀಶ್ ಅಂತವರು ಬಂದಾಗ ವೀಕ್ಷಕರು ಜೋರಾಗಿ ಕೂಗಿ ಚಪ್ಪಾಳೆ ಮೂಲಕ ಮೆಚ್ಚುಗೆ ಸೂಚಿಸುತ್ತಾರೆ ಎಂದು ಭರತ್ ಹೇಳಿಕೊಂಡರು.

ರೈಲಿನ ಟಾಯ್ಲೆಟ್ ಬಳಿ ಮಲಗಿದ್ದ ಯೋಧರನ್ನು ನೋಡಿ ಟಿಸಿ ಮಾಡಿದ್ದೇನು?; ವೈರಲ್ ವಿಡಿಯೋ ನೋಡಿ

TAGGED:1 crore was earned in 30 days at the Badami fair: What did Raju Talikoti's son say?
Share This Article
Facebook Twitter Copy Link Print
Previous Article ರೈಲಿನ ಟಾಯ್ಲೆಟ್ ಬಳಿ ಮಲಗಿದ್ದ ಯೋಧರನ್ನು ನೋಡಿ ಟಿಸಿ ಮಾಡಿದ್ದೇನು?; ವೈರಲ್ ವಿಡಿಯೋ ನೋಡಿ
Next Article ರೈಲಿನ ಶೌಚಾಲಯದಲ್ಲಿ ನವಜಾತ ಶಿಶುವನ್ನು ಬಿಟ್ಟು ಹೋದ ಪಾಪಿಗಳು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?