Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮೈಸೂರು ಜಿಲ್ಲಾಧಿಕಾರಿ ಬಂಧನಕ್ಕೆ ಕೋರ್ಟ್‌ನಿಂದ ವಾರಂಟ್ ಜಾರಿ
ಕರ್ನಾಟಕದೇಶಪ್ರಮುಖ

ಮೈಸೂರು ಜಿಲ್ಲಾಧಿಕಾರಿ ಬಂಧನಕ್ಕೆ ಕೋರ್ಟ್‌ನಿಂದ ವಾರಂಟ್ ಜಾರಿ

Share
2 Min Read
SHARE

 

newsics.com

ಮೈಸೂರು: ಭೂ ವ್ಯಾಜ್ಯದ ಸಂಬಂಧ ಮೈಸೂರಿನ ಒಂದನೇ ಅಪರ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ ನ್ಯಾಯಾಲಯದಿಂದ ಹೊರಡಿಸಿದ್ದ ಆದೇಶವನ್ನು ಪಾಲನೆ ಮಾಡದ ಹಿನ್ನೆಲೆಯಲ್ಲಿ ಮೈಸೂರಿನ ಜಿಲ್ಲಾಧಿಕಾರಿಗಳ ಬಂಧನಕ್ಕೆ ವಾರಂಟ್​​ ಜಾರಿ ಮಾಡಲಾಗಿದೆ.

ಜಿಲ್ಲಾಡಳಿತ ಸ್ವಾಧೀನ ಪಡಿಸಿಕೊಂಡಿದ್ದ ಕುಂಬಾರ ಕೊಪ್ಪಲಿನ ನಿವಾಸಿ ಜಯರಾಮು ಅವರ ಜಮೀನು ಸಂಬಂಧ ಕೋರ್ಟ್ ಆದೇಶ ಮಾಡಿತ್ತು. ಈ ಆದೇಶವನ್ನು ಜಿಲ್ಲಾಧಿಕಾರಿಗಳು ಪಾಲನೆ ಮಾಡಿಲ್ಲ ಎಂದು ಜಯರಾಮು ಅವರು ಮತ್ತೆ ಕೋರ್ಟ್ ಮೊರೆ ಹೋಗಿದ್ದರು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು, ಡಿಸಿ ಅವರ ಬಂಧನಕ್ಕೆ ವಾರಂಟ್​ ಜಾರಿ ಮಾಡಿದ್ದಾರೆ.

ಏನಿದು ಪ್ರಕರಣ? ನಗರದ ಕುಂಬಾರ ಕೊಪ್ಪಲಿನ ಸೀತಾರಾಮೇಗೌಡ ಅವರಿಗೆ ಸೇರಿದ್ದ ಹೆಬ್ಬಾಳು ಗ್ರಾಮದ ಸರ್ವೇ ನಂ.155, 159/1 ವ್ಯಾಪ್ತಿಯಲ್ಲಿ ಐದು ಎಕರೆ ಪ್ರದೇಶವನ್ನು 1980 ಸಮಯದಲ್ಲಿ ನಗರ ಭೂ ಮಿತಿ ಕಾಯಿದೆಯಡಿ ಜಿಲ್ಲಾಡಳಿತ ಸ್ವಾಧೀನ ಪಡಿಸಿಕೊಂಡಿತ್ತು. ಇದನ್ನು ಪ್ರಶ್ನಿಸಿ ಸೀತಾರಾಮೇಗೌಡ ಅವರ ಮಗ ಚೆಲುವೇಗೌಡ ಮತ್ತು ಮೊಮ್ಮಗ ಜಯರಾಮು ಮೈಸೂರಿನ ಒಂದನೇ ಅಪರ ಸಿವಿಲ್ ನ್ಯಾಯಾಲಯದ ಮೊರೆ ಹೋಗಿದ್ದರು. ಕೋರ್ಟ್​ನಲ್ಲಿ ಅರ್ಜಿದಾರರ ಪರವಾಗಿ ಆದೇಶ ಬಂದಿತ್ತು.

ಈ ಹಿನ್ನೆಲೆಯಲ್ಲಿ ಜಿಲ್ಲಾ ಆಡಳಿತವು ಮೈಸೂರಿನ ಹಿರಿಯ ಸಿವಿಲ್ ನ್ಯಾಯಾಲಯದ ಮೊರೆ ಹೋಗಿತ್ತು. ಹಿರಿಯ ಸಿವಿಲ್ ನ್ಯಾಯಾಲಯ ವಿಚಾರಣೆ ನಡೆಸಿ, ಕೆಳ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿತ್ತು. ಬಳಿಕ ಭೂ ಮಾಲೀಕರು ತಮ್ಮ ಪರವಾಗಿ ಕೋರ್ಟ್​ನಲ್ಲಿ ಬಂದ ಆದೇಶವನ್ನು ಜಾರಿಗೊಳಿಸುವ ಮೂಲಕ ಜಮೀನನ್ನು ತಮ್ಮ ಸುಪರ್ದಿಗೆ ನೀಡಬೇಕು ಎಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಆದರೆ, ಈವರೆಗೆ ಜಿಲ್ಲಾಡಳಿತ ಯಾವುದೇ ಕ್ರಮ ವಹಿಸಿರಲಿಲ್ಲ. ಪರಿಣಾಮವಾಗಿ ಭೂ ಮಾಲೀಕರು, ಕೋರ್ಟ್ ಆದೇಶವನ್ನು ಅನುಷ್ಠಾನಗೊಳಿಸಲು ಸೂಚನೆ ನೀಡಬೇಕು ಎಂದು ಮತ್ತೆ ಕೋರ್ಟ್ ಮೊರೆ ಹೋಗಿದ್ದರು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಧೀಶರು, ಆದೇಶವನ್ನು ಪಾಲನೆ ಮಾಡದ ಜಿಲ್ಲಾಧಿಕಾರಿಗಳ ಬಂಧನಕ್ಕೆ ವಾರೆಂಟ್ ಜಾರಿಗೊಳಿಸಿ, ವಿಚಾರಣೆಯನ್ನು ಏ.24 ಮುಂದೂಡಿದ್ದಾರೆ ಎಂದು ಜಯರಾಮು ಪರ ವಕೀಲ ನಾಗರಾಜು ಮಾಹಿತಿ ನೀಡಿದರು.

ಜಿಲ್ಲಾಧಿಕಾರಿಯ ಸ್ಪಷ್ಟನೆ ಏನು?: ಕೋರ್ಟ್ ಹೊರಡಿಸಿರುವ ವಾರೆಂಟ್ ಪ್ರತಿ ಸಿಕ್ಕಿಲ್ಲ. ಪ್ರತಿ ಸಿಕ್ಕ ನಂತರ ಪರಿಶೀಲನೆ ನಡೆಸಿ ಮುಂದಿನ ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ್ ರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ.

15 ದಿನಗಳ ಕಾಲ ರೂಮಲ್ಲಿ ಒಂಟಿಯಾಗಿ ತಾಯಿಗಾಗಿ ಕಾದ 6 ವರ್ಷದ ಬಾಲಕ!

ಮೂರನೇ ಮಗುವೂ ಹೆಣ್ಣಾಗುತ್ತೆ ಎಂದು ಗರ್ಭಿಣಿ ಹೆಂಡತಿ, ಮಕ್ಕಳನ್ನು ನೀರಲ್ಲಿ ಮುಳುಗಿಸಿ ಕೊಂದ ಪಾಪಿ

ಗುಜರಾತ್‌ಗೆ ಬರುತ್ತಿದ್ದ ಇರಾನಿನ ತೈಲ ಟ್ಯಾಂಕರ್ ಕೊನೆಯ ಕ್ಷಣದಲ್ಲಿ ಚೀನಾಕ್ಕೆ ತಿರುಗಿದ್ದೇಕೆ?

TAGGED:Court issues arrest warrant for Mysore District Collector
Share This Article
Facebook Twitter Copy Link Print
Previous Article ಗುಜರಾತ್‌ಗೆ ಬರುತ್ತಿದ್ದ ಇರಾನಿನ ತೈಲ ಟ್ಯಾಂಕರ್ ಕೊನೆಯ ಕ್ಷಣದಲ್ಲಿ ಚೀನಾಕ್ಕೆ ತಿರುಗಿದ್ದೇಕೆ?
Next Article ಅಮೆರಿಕದ F-35 ಯುದ್ಧ ವಿಮಾನ ಹೊಡೆದುರುಳಿಸಿದ ಇರಾನ್

Popular Posts

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Relationship ಒಬ್ಬ ವ್ಯಕ್ತಿಗೆ ಎಷ್ಟು ಸಲ ರಿಯಲ್ ಲವ್ ಆಗುತ್ತೆ?ಅಧ್ಯಯನ ಹೇಳಿದ ಅಚ್ಚರಿಯ ಸತ್ಯ ಇಲ್ಲಿದೆ

2 Min Read

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read

ಸಿಎಂ ಡಿಕೆ ಶಿವಕುಮಾರ್ ತಲೆನೋವಾದ ಖಾತೆ ಕ್ಯಾತೆ : ರಾಜೀನಾಮೆ ಕೊಟ್ಟೇ ಸಿದ್ದ ಎಂದ ರಾಮಲಿಂಗಾರೆಡ್ಡಿ

1 Min Read

You Might Also Like

ಕರ್ನಾಟಕಪ್ರಮುಖ

ಡಿಕೆ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ – ಯಾರಿಗೆ ಯಾವ ಖಾತೆ?

1 Min Read
ಕರ್ನಾಟಕಪ್ರಮುಖ

U.T. Khader ಸರ್ಕಾರಿ ಆಸ್ಪತ್ರೆಗೆ ಯು.ಟಿ ಖಾದರ್​ ಭೇಟಿ : ನೆಲದ ಮೇಲೆ ಕೂತ ಗರ್ಭಿಣಿ ಕಂಡು ಗರಂ

1 Min Read
ಕರ್ನಾಟಕಪ್ರಮುಖ

DK Shivakumar ಸಾರ್ವಜನಿಕರ ದೂರು ಆಲಿಸಲು ಪ್ರತ್ಯೇಕ ಸಚಿವಾಲಯ ಆರಂಭ : ದೇಶದಲ್ಲೇ ಮೊದಲು!

1 Min Read
ದೇಶಪ್ರಮುಖ

ಟಿಸಿಎಸ್‌ ಬಳಿಕ ವಿಪ್ರೋದಲ್ಲಿ ಮತಾಂತರ ಜಾಲ? ಮಾಜಿ ಉದ್ಯೋಗಿ ಹೇಳಿದ ಶಾಕಿಂಗ್‌ ರಹಸ್ಯವೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?