Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡ್ರಿಂಕ್ & ಡ್ರೈವ್‌ ಚೆಕಪ್‌ನಲ್ಲಿ ಸಿಕ್ಕಿಬಿದ್ದ ತಮಿಳುನಾಡು ಡ್ರೈವರ್; ಲಾರಿಯಲ್ಲೇ ನೇಣಿಗೆ ಶರಣು!
ಕರ್ನಾಟಕಪ್ರಮುಖ

ಡ್ರಿಂಕ್ & ಡ್ರೈವ್‌ ಚೆಕಪ್‌ನಲ್ಲಿ ಸಿಕ್ಕಿಬಿದ್ದ ತಮಿಳುನಾಡು ಡ್ರೈವರ್; ಲಾರಿಯಲ್ಲೇ ನೇಣಿಗೆ ಶರಣು!

Share
2 Min Read
SHARE

ಲಾರಿ ಚಾಲಕನೊಬ್ಬ ಪೊಲೀಸ್ ಠಾಣೆಗೆ ಎಳೆದೊಯ್ದ ಲಾರಿಯಲ್ಲೇ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಜೆಪಿ ನಗರದಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ನಡೆದಿದೆ.

ಏನಿದು ಘಟನೆ?

ಮೃತ ಚಾಲಕನನ್ನು ಷಣ್ಮುಗ ಎಂದು ಗುರುತಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ನಿನ್ನೆ ರಾತ್ರಿ ಜೆಪಿ ನಗರ ಪೊಲೀಸರು ಸಂಚಾರ ನಿಯಮ ಉಲ್ಲಂಘನೆ ಹಾಗೂ ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ವಿಶೇಷ ತಪಾಸಣೆ (Drink and Drive Checking) ನಡೆಸುತ್ತಿದ್ದರು. ಈ ವೇಳೆ ಲಾರಿ ಚಾಲಕ ಷಣ್ಮುಗ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿರುವುದು ಪೊಲೀಸರ ಗಮನಕ್ಕೆ ಬಂದಿದೆ. ಕೂಡಲೇ ಆತನನ್ನು ತಡೆದ ಪೊಲೀಸರು ಬ್ರೀತ್ ಅನಲೈಸರ್ ಮೂಲಕ ತಪಾಸಣೆ ನಡೆಸಿದಾಗ ಮದ್ಯಪಾನ ಮಾಡಿರುವುದು ದೃಢಪಟ್ಟಿದೆ. ಇದಾದ ನಂತರ ಪೊಲೀಸರು ನಿಯಮದಂತೆ ಷಣ್ಮುಗನಿಗೆ ಭಾರೀ ಮೊತ್ತದ ದಂಡ (Fine) ವಿಧಿಸಿದ್ದಾರೆ. ಅಲ್ಲದೆ, ಮದ್ಯದ ಅಮಲಿನಲ್ಲಿದ್ದ ಚಾಲಕನಿಗೆ ವಾಹನ ಚಲಾಯಿಸಲು ಬಿಡದ ಪೊಲೀಸರು, ಲಾರಿಯನ್ನು ವಶಕ್ಕೆ ಪಡೆದು ಜೆಪಿ ನಗರ ಪೊಲೀಸ್ ಠಾಣೆಯ ಸಮೀಪವೇ ತಂದು ನಿಲ್ಲಿಸಿದ್ದರು.

ಪೊಲೀಸರು ಲಾರಿಯನ್ನು ಠಾಣೆಯ ಹತ್ತಿರ ನಿಲ್ಲಿಸಿ ಹೋದ ನಂತರ, ಚಾಲಕ ಷಣ್ಮುಗ ತೀವ್ರ ಮಾನಸಿಕ ಅಸಮಾಧಾನಕ್ಕೆ ಒಳಗಾಗಿದ್ದ ಎನ್ನಲಾಗಿದೆ. ಮದ್ಯಪಾನದ ಅಮಲು ಹಾಗೂ ಪೊಲೀಸರು ದಂಡ ಹಾಕಿದ ವಿಚಾರದಿಂದ ನೊಂದ ಆತ, ತಡರಾತ್ರಿ ಲಾರಿಯಲ್ಲಿ ನೇಣು ಬಿಗಿದುಕೊಂಡು ಆತ್ಮ*ಹತ್ಯೆ ಮಾಡಿಕೊಂಡಿದ್ದಾನೆ. ಇಂದು ಬೆಳಿಗ್ಗೆ ಈ ವಿಷಯ ಬೆಳಕಿಗೆ ಬಂದಿದ್ದು, ಲಾರಿಯೊಳಗೆ ಚಾಲಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಆಗಮಿಸಿದ ಜೆಪಿ ನಗರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ಪ್ರಯೋಗಾಲಯದ (FSL) ತಜ್ಞರು ಭೇಟಿ ನೀಡಿ ಸಾಕ್ಷ್ಯಗಳನ್ನು ಸಂಗ್ರಹಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಮದ್ಯಪಾನ ಮಾಡಿದ್ದರಿಂದ ಉಂಟಾದ ಭಯ ಅಥವಾ ದಂಡ ಪಾವತಿಸಲು ಹಣವಿಲ್ಲದ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿರಬಹುದು ಎಂಬ ಸಂಶಯ ವ್ಯಕ್ತವಾಗಿದೆ. ಈಗಾಗಲೇ ಜೆಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ. ‘ಚಾಲಕ ಷಣ್ಮುಗ ಮದ್ಯಪಾನ ಮಾಡಿದ್ದ ಎನ್ನುವುದು ಪರೀಕ್ಷೆಯಲ್ಲಿ ದೃಢಪಟ್ಟಿತ್ತು. ನಿಯಮದಂತೆ ಕ್ರಮ ಕೈಗೊಳ್ಳಲಾಗಿತ್ತು. ಆದರೆ ಆತ ಈ ರೀತಿ ಆತ್ಮ*ಹತ್ಯೆ ಮಾಡಿಕೊಳ್ಳುತ್ತಾನೆ ಎಂದು ನಿರೀಕ್ಷಿಸಿರಲಿಲ್ಲ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Share This Article
Facebook Twitter Copy Link Print
Previous Article ಚಿನ್ನ – ಬೆಳ್ಳಿ ಪ್ರಿಯರಿಗೆ ಗುಡ್‌ನ್ಯೂಸ್
Next Article ಸ್ಟೇಟಸ್‌ಗಾಗಿ ಹೊಸ ಕಾರ್ ತಗೋತಿದ್ದೀರಾ? ಈ 5 ತಪ್ಪುಗಳನ್ನು ಮಾತ್ರ ಮಾಡ್ಬೇಡಿ!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?