Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸ್ಕೂಟಿಗೆ ಡಿಕ್ಕಿ: ದಂಪತಿಯನ್ನು 5 ಕಿಮೀ ಎಳೆದೊಯ್ದ ಮಿನಿ ಟ್ರಕ್, ಪತ್ನಿ ಸಾವು
ದೇಶಪ್ರಮುಖ

ಸ್ಕೂಟಿಗೆ ಡಿಕ್ಕಿ: ದಂಪತಿಯನ್ನು 5 ಕಿಮೀ ಎಳೆದೊಯ್ದ ಮಿನಿ ಟ್ರಕ್, ಪತ್ನಿ ಸಾವು

Share
1 Min Read
SHARE

 

newsics.com

ಹೈದರಾಬಾದ್(ತೆಲಂಗಾಣ): ಮಿನಿ ಟ್ರಕ್ ಚಾಲಕನ ನಿರ್ಲಕ್ಷ್ಯದಿಂದ ನಗರದಲ್ಲಿ ಶನಿವಾರ ರಾತ್ರಿ ಭೀಕರ ಅಪಘಾತ ಸಂಭವಿಸಿದೆ. ದಂಪತಿ ಸಂಚರಿಸುತ್ತಿದ್ದ ಸ್ಕೂಟಿಗೆ ಟ್ರಕ್ ಡಿಕ್ಕಿ ಹೊಡೆದು, 5 ಕಿ.ಮೀವರೆಗೆ ಎಳೆದುಕೊಂಡು ಹೋಗಿದೆ. ಪತ್ನಿ ಮೃತಪಟ್ಟಿದ್ದು, ಪತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

ಹೈದರಾಬಾದ್​ನ ಮಾಧಾಪುರ್ ಮಿತಿಯ ಮೈಂಡ್ ಸ್ಪೇಸ್‌ನಲ್ಲಿ ಘಟನೆ ನಡೆದಿದೆ. ಕೇರಳದ ಅಬ್ದುಲ್ ಬಾಸಿತ್ (26) ಗಂಭೀರವಾಗಿ ಗಾಯಗೊಂಡಿದ್ದು, ಇವರ ಪತ್ನಿ ಆಯೇಷಾ (22) ಮೃತಪಟ್ಟಿದ್ದಾರೆ.

ಮಿನಿ ಟ್ರಕ್ ವೇಗವಾಗಿ ಬಂದು ದಂಪತಿ ಸವಾರಿ ಮಾಡುತ್ತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದಿದೆ. ಟ್ರಕ್ ಕೆಳಗೆ ದಂಪತಿ ಸಿಲುಕಿಕೊಂಡಿದ್ದರೂ ಚಾಲಕ ಗಮನಿಸದೇ 5 ಕಿ.ಮೀವರೆಗೆ ಅಂದರೆ ಜುಬಿಲಿ ಹಿಲ್ಸ್‌ವರೆಗೆ ಎಳೆದುಕೊಂಡು ಹೋಗಿದ್ದಾನೆ.

ವಾಹನದ ಕೆಳಗೆ ಸಿಲುಕಿದ್ದ ದಂಪತಿಯನ್ನು ಗಮನಿಸಿದ ಕೆಲವು ಯುವಕರು, ಮಿನಿ ಟ್ರಕ್ ಚೇಸ್ ಮಾಡಿ ನಿಲ್ಲಿಸಿದ್ದಾರೆ. ತಕ್ಷಣವೇ ಚಾಲಕ ವಾಹನ ನಿಲ್ಲಿಸಿ ಪರಾರಿಯಾಗಿದ್ದಾನೆ. ಆದರೆ ಸಹಾಯಕ ಸಿಕ್ಕಿಬಿದ್ದಿದ್ದು, ಆತನನ್ನು ಸ್ಥಳೀಯರು ಥಳಿಸಿದ್ದಾರೆ.

ತಕ್ಷಣವೇ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ದಂಪತಿಯನ್ನು ಎಐಜಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಅಲ್ಲಿ ವೈದ್ಯರು ಮಹಿಳೆ ಮೃತಪಟ್ಟಿದ್ದಾಗಿ ಘೋಷಿಸಿದ್ದಾರೆ. ಮಿನಿಟ್ರಕ್ ಅಡಿಯಲ್ಲಿ ಬಿದ್ದ ನಂತರ ಪಕ್ಕಕ್ಕೆ ಸರಿದ ಪತಿ ಸಾವಿನಿಂದ ಪಾರಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ.

ಎರಡು ವರ್ಷದ ಹಿಂದೆ ವಿವಾಹ:

ಅಬ್ದುಲ್ ಬಾಸಿತ್ ಮತ್ತು ಆಯೇಷಾ ಎರಡು ವರ್ಷಗಳ ಹಿಂದೆ ತಮ್ಮ ಸ್ವಂತ ಊರಿನಲ್ಲಿ ವಿವಾಹವಾಗಿದ್ದರು. ಜೀವನೋಪಾಯಕ್ಕಾಗಿ ಹೈದರಾಬಾದ್‌ಗೆ ಬಂದು ಮಹೇಶ್ವರಂನಲ್ಲಿ ವಾಸಿಸುತ್ತಿದ್ದರು. ಅಬ್ದುಲ್ ಬಾಸಿತ್ ಮಲಬಾರ್ ಫ್ಯಾಕ್ಟರಿಯಲ್ಲಿ ರಫ್ತು ಇನ್‌ಚಾರ್ಜ್ ಆಗಿ ಕೆಲಸ ಮಾಡುತ್ತಾ ಜೀವನ ಸಾಗಿಸುತ್ತಿದ್ದರು. ನಿನ್ನೆ ರಾತ್ರಿ, ಕುಕಟ್​ಪಲ್ಲಿಯಲ್ಲಿ ಸಿನಿಮಾ ನೋಡಿ ಸ್ಕೂಟಿಯಲ್ಲಿ ಹಿಂತಿರುಗುತ್ತಿದ್ದರು ಎಂದು ತಿಳಿದು ಬಂದಿದೆ.

ಮೃತರ ತಂದೆಯ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಪರಾರಿಯಾಗಿರುವ ಚಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಅತಿವೇಗ ಮತ್ತು ಚಾಲಕನ ನಿರ್ಲಕ್ಷ್ಯದಿಂದಾಗಿ ಮಹಿಳೆ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ಕುಟುಂಬ ಸದಸ್ಯರು ಒತ್ತಾಯಿಸಿದ್ದಾರೆ.

ಪ್ರಶಾಂತ್‌ ನೀಲ್‌ ಹಾಗೂ ಜೂ.ಎನ್‌ಟಿಆರ್‌ ಕಾಂಬಿನೇಶನ್‌ನ ‘ಡ್ರ್ಯಾಗನ್‌’ ಚಿತ್ರದ ಕತೆ ಲೀಕ್‌!

 

ಶಿವರಾಜ್ ಕುಮಾರ್ ಜತೆ ಸಂಬಂಧ ಕಟ್ಟಿದ ಪೋಸ್ಟ್; ಸುಳ್ಳು ಸುದ್ದಿ ವಿರುದ್ಧ ಸುಧಾರಾಣಿ ಗರಂ

TAGGED:Scooty collision: Couple dragged 5 km by mini truckwife dies
Share This Article
Facebook Twitter Copy Link Print
Previous Article ಶಿವರಾಜ್ ಕುಮಾರ್ ಜತೆ ಸಂಬಂಧ ಕಟ್ಟಿದ ಪೋಸ್ಟ್; ಸುಳ್ಳು ಸುದ್ದಿ ವಿರುದ್ಧ ಸುಧಾರಾಣಿ ಗರಂ
Next Article ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಬ್ಲ್ಯಾಕ್ ಮೇಲ್: 19 ಲಕ್ಷ ರೂಪಾಯಿ ಕಳೆದುಕೊಂಡ ಸಂತ್ರಸ್ತೆ

Popular Posts

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read
ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?