newsics.com
ಬೆಂಗಳೂರು: ಕಳೆದ ಮೂರ್ನಾಲ್ಕು ತಿಂಗಳ ಗ್ಯಾರಂಟಿ ಯೋಜನೆಗಳ ನಗದು ಹಣ ಬಿಡುಗಡೆ ಮಾಡದೇ ತಡೆ ಹಿಡಿಯಲಾಗಿದ್ದು, ಇದೀಗ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ, ಏಕಕಾಲಕ್ಕೆ ಗ್ಯಾರಂಟಿ ಯೋಜನೆ ಹಣವನ್ನು ಬಿಡುಗಡೆ ಮಾಡುವ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದೆ ಎಂಬ ಆರೋಪ ಕೇಳಿಬಂದಿದೆ.
ಕೇಂದ್ರ ಚುನಾವಣಾ ಆಯೋಗದ ಕಾರ್ಯದರ್ಶಿ ಪವನ್ ದಿವಾನ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಈ ಕುರಿತು ಪತ್ರ ಬರೆದಿದ್ದು, ವಿವರಣೆ ಕೇಳಿದ್ದಾರೆ.ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಸಂದರ್ಭದಲ್ಲಿ ಆಯೋಗದ ಪೂರ್ವಾನುಮತಿ ಇಲ್ಲದೆ ಯಾವುದೇ ಕಲ್ಯಾಣ ಯೋಜನೆಗಳ ಹಣವನ್ನು ಬಿಡುಗಡೆ ಮಾಡುವಂತಿಲ್ಲ” ಎಂದು ಆಯೋಗವು ತನ್ನ ಪತ್ರದಲ್ಲಿ ಸ್ಪಷ್ಟಪಡಿಸಿದೆ.
ಈ ಎರಡು ಜಿಲ್ಲೆಗಳಲ್ಲಿ ಐದು ಗ್ಯಾರಂಟಿ ಯೋಜನೆಗಳಿಗೆ ಹಣ ಬಿಡುಗಡೆ ಮಾಡಿದ ಅಧಿಕಾರಿಯ ಹೆಸರನ್ನು ತಕ್ಷಣ ಹಂಚಿಕೊಳ್ಳಬೇಕು. ಆಯೋಗದ ಅನುಮತಿ ಇಲ್ಲದೆ ಇನ್ನು ಮುಂದೆ ಯಾವುದೇ ಹಣ ಮಂಜೂರಾತಿ ಅಥವಾ ವಿತರಣೆ ಮಾಡಬಾರದು ಎಂದು ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.