https://youtube.com/shorts/AWyQA9JMFI4?si=6teca9JBs0VZQurx
newsics.com
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವನ್ಯಜೀವಿ-ಮಾನವ ಸಂಘರ್ಷ ಮುಂದುವರಿದಿದ್ದು, ಬುಧವಾರ ಬೆಳ್ಳಂಬೆಳಗ್ಗೆ ಬೆಳೆಗಾರರೊಬ್ಬರು ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ.
ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲ ಹೋಬಳಿಯ ಕಾಯಿಮಾನಿ ನಿವಾಸಿ ಮೂಕಳಮಾಡ ರತ್ತು ಎಂಬವರೇ ಕಾಡಾನೆ ದಾಳಿಗೆ ಸಿಲುಕಿ ಪ್ರಾಣ ತೆತ್ತವರು
ಬುಧವಾರ ಬೆಳಗ್ಗೆ ಕುಚಿ-ಕಾಯಿಮಾನಿ ನಡುವೆ ಇರುವ ತಮ್ಮ ತೋಟಕ್ಕೆ ನಡೆದುಕೊಂಡು ಬರುತ್ತಿದ್ದಾಗ ಕಾಡಾನೆ ಅವರ ಮೇಲೆ ತೀವ್ರ ಸ್ವರೂಪದ ದಾಳಿ ನಡೆಸಿ ತುಳಿದು ಸಾಯಿಸಿದೆ. ಮೃತದೇಹವನ್ನು ಕುಟ್ಟ ಸರಕಾರಿ ಆಸ್ಪತ್ರೆಯಲ್ಲಿಡಲಾಗಿದೆ.
ಶ್ರೀಮಂಗಲ ಹೋಬಳಿಯ ಕುರ್ಚಿ ಕಾಯಿಮಾನಿ ಭಾಗದಲ್ಲಿ ಸುಮಾರು 8-10 ಕಾಡಾನೆಗಳಿರುವ ಗುಂಪು ಓಡಾಡುತ್ತಿರುವುದಾಗಿ ಸ್ಥಳೀಯರು ತಿಳಿಸಿದ್ದು, ಸಾರ್ವಜನಿಕರು ಭಯಭೀತರಾಗಿದ್ದಾರೆ. ಘಟನೆಯ ಮತ್ತಷ್ಟು ವಿವರ ಇನ್ನಷ್ಟೇ ಲಭ್ಯವಾಗಬೇಕಾಗಿದೆ.