https://youtube.com/shorts/9OUTrzsAEaE?si=-GbS-QxOxuzBuJvH
newsics.com
ಚಿಕ್ಕಮಗಳೂರು : ಕಾಫಿನಾಡಿನ ಪ್ರಸಿದ್ಧ ಪ್ರವಾಸಿ ತಾಣವಾದ ದತ್ತಪೀಠದ ತಪ್ಪಲಿನ ಮಾಣಿಕ್ಯಾಧಾರ ಜಲಪಾತದ ಬಳಿ ಪ್ರವಾಸಕ್ಕೆ ಬಂದಿದ್ದ 15 ವರ್ಷದ ಬಾಲಕಿಯೊಬ್ಬಳು ನಾಪತ್ತೆಯಾಗಿದ್ದು, ಒಂದು ದಿನ ಕಳೆದರೂ ಆಕೆಯ ಸುಳಿವು ಪತ್ತೆಯಾಗಿಲ್ಲ.
ಕೇರಳದ ಪಾಲಕ್ಕಾಡ್ ಜಿಲ್ಲೆಯ ಶ್ರೀನಂದ (15) ನಾಪತ್ತೆಯಾದ ಬಾಲಕಿ. ಶಾಲಾ ರಜೆ ಹಿನ್ನೆಲೆಯಲ್ಲಿ ಕುಟುಂಬದೊಂದಿಗೆ ಕರ್ನಾಟಕ ಪ್ರವಾಸಕ್ಕೆ ಬಂದಿದ್ದ ಈಕೆ, ಉತ್ತರ ಕರ್ನಾಟಕವನ್ನು ಸುತ್ತಿ ಚಿಕ್ಕಮಗಳೂರಿಗೆ ಬಂದಿದ್ದಳು. ಏಪ್ರಿಲ್ 7 ರಂದು ಮಾಣಿಕ್ಯಾಧಾರ ಜಲಪಾತದ ಬಳಿ ಮೆಟ್ಟಿಲುಗಳನ್ನು ಇಳಿಯುತ್ತಿದ್ದಾಗ ಕುಟುಂಬದವರು ಮುಂದೆ ಹೋಗಿದ್ದರು. ಈ ವೇಳೆ ಹಿಂದಿದ್ದ ಬಾಲಕಿ ಕ್ಷಣಾರ್ಧದಲ್ಲಿ ಮಾಯವಾಗಿದ್ದಾಳೆ.
ವಿಷಯ ತಿಳಿಯುತ್ತಿದ್ದಂತೆಯೇ ಅರಣ್ಯ ಇಲಾಖೆ, ಪೊಲೀಸ್ ಮತ್ತು ಅಗ್ನಿಶಾಮಕ ದಳದ 30ಕ್ಕೂ ಹೆಚ್ಚು ಸಿಬ್ಬಂದಿ ಮಧ್ಯರಾತ್ರಿಯವರೆಗೆ ಹುಡುಕಾಟ ನಡೆಸಿದ್ದಾರೆ..ಸುಮಾರು 60ಕ್ಕೂ ಹೆಚ್ಚು ಸಿಬ್ಬಂದಿ 5 ತಂಡಗಳಾಗಿ ವಿಂಗಡಿಸಿಕೊಂಡು ಥರ್ಮಲ್ ಡ್ರೋನ್ ಬಳಸಿ ದಟ್ಟ ಕಾನನದಲ್ಲಿ ಹುಡುಕಾಟ ನಡೆಸುತ್ತಿದ್ದಾರೆ.
https://www.newsics.com/2026/04/09/three-of-a-family-die-after-drowning-in-bhutanala-lake/