Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪತ್ನಿಗೆ ನಿದ್ರೆ ಮಾತ್ರೆ ನೀಡಿ ಎದುರು ಮನೆಯವಳ ಜೊತೆ ಚಕ್ಕಂದ ಆಡ್ತಿದ್ದ ಶಿಕ್ಷಕ
ಕರ್ನಾಟಕ

ಪತ್ನಿಗೆ ನಿದ್ರೆ ಮಾತ್ರೆ ನೀಡಿ ಎದುರು ಮನೆಯವಳ ಜೊತೆ ಚಕ್ಕಂದ ಆಡ್ತಿದ್ದ ಶಿಕ್ಷಕ

Share
2 Min Read
SHARE

ಗೃಹಿಣಿಯೊಬ್ಬಳಿಗೆ ಪತಿಯ ಅಕ್ರಮ ಸಂಬಂಧ ಮತ್ತು ಸವತಿ ಕಾಟ ದೊಡ್ಡ ಶಾಪವಾಗಿ ಪರಿಣಮಿಸಿದೆ. ಪತ್ನಿಗೆ ನಿದ್ರೆ ಮಾತ್ರೆ ನೀಡಿ ಮನೆಗೆ ಪರಸ್ತ್ರೀಯನ್ನು ಕರೆತರುತ್ತಿದ್ದ ಪತಿರಾಯನ ಕೃತ್ಯ ಈಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ಹುಬ್ಬಳ್ಳಿಯ ವಿಜಯನಗರ ನಿವಾಸಿ ಕಾಂಚನ ಎಂಬುವವರು ಪತಿಯಿಂದ ವಂಚನೆಗೊಳಗಾದ ದುರ್ದೈವಿ. ಮೂಲತಃ ಬಿಜಾಪುರದವರಾದ ಮಾಲಿಂಗಪ್ಪ ರ್ಯಾಗಿ ಎಂಬುವವರ ಜೊತೆ ಕಾಂಚನ ಅವರ ವಿವಾಹ 2016ರಲ್ಲಿ ಅದ್ಧೂರಿಯಾಗಿ ನಡೆದಿತ್ತು. ಈ ದಂಪತಿಗೆ ಮೂರು ವರ್ಷದ ಪುಟ್ಟ ಮಗುವೂ ಇದೆ. ವೃತ್ತಿಯಲ್ಲಿ ಶಿಕ್ಷಕನಾಗಿದ್ದಾನೆ ಮಾಲಿಂಗಪ್ಪ. ಆದರೆ ಕಳೆದ ಕೆಲವು ವರ್ಷಗಳಿಂದ ಈತ ಬೇರೊಬ್ಬ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ವಾಟ್ಸಾಪ್ ಮೆಸೇಜ್‌ನಿಂದ ರಹಸ್ಯ ಬಯಲು

ಪತಿಯ ವಾಟ್ಸಾಪ್ ಸಂದೇಶಗಳನ್ನು ಆಕಸ್ಮಿಕವಾಗಿ ಗಮನಿಸಿದ ಕಾಂಚನ ಅವರಿಗೆ ಪತಿಯ ಅಕ್ರಮ ಸಂಬಂಧದ ವಿಷಯ ತಿಳಿದಿದೆ. ‘ಚಿನ್ನು, I Love You’ ಎಂಬ ಮೆಸೇಜ್‌ಗಳು ಮತ್ತು ಅನೇಕ ಸಂಭಾಷಣೆಗಳು ಕಾಂಚನ ಕಣ್ಣಿಗೆ ಬಿದ್ದವು. ಪತಿಯನ್ನು ಪ್ರಶ್ನಿಸಿದಾಗ ಕಾಂಚನ ಅವರಿಗೆ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಲು ಮಾಲಿಂಗಪ್ಪ ಶುರು ಮಾಡಿದ ಎನ್ನಲಾಗಿದೆ.

ನಿದ್ರೆ ಮಾತ್ರೆಯ ಆಘಾತಕಾರಿ ಬಳಕೆ

ಅಷ್ಟೇ ಅಲ್ಲದೆ, ಪತಿ ಮಾಲಿಂಗಪ್ಪ ಪ್ರತಿನಿತ್ಯ ಪತ್ನಿಗೆ ನಿದ್ರೆ ಮಾತ್ರೆ ನೀಡಿ, ಆಕೆ ಗಾಢ ನಿದ್ರೆಗೆ ಜಾರಿದ ನಂತರ ಪರಸ್ತ್ರೀಯನ್ನು ಮನೆಗೆ ಕರೆತರುತ್ತಿದ್ದ ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಒಮ್ಮೊಮ್ಮೆ ಸಂತ್ರಸ್ತೆ ಎಚ್ಚರವಾದಾಗ, ‘ನೀವು ಕನಸು ಕಂಡಿದ್ದೀರಾ, ಏನೂ ಆಗಿಲ್ಲ’ ಎಂದು ಪತಿ ಮರಳಿ ನಿದ್ರೆ ಮಾತ್ರೆ ಕೊಡುತ್ತಿದ್ದ ಎಂದು ಕಾಂಚನ ಪೊಲೀಸರಿಗೆ ದೂರಿನಲ್ಲಿ ತಿಳಿಸಿದ್ದಾರೆ.

ಆತ್ಮಹತ್ಯೆಗೂ ಯತ್ನಿಸಿದ ಕಾಂಚನ

ಪತಿಯ ಈ ನಡೆ ಹಾಗೂ ಸತತ ಕಿರುಕುಳದಿಂದ ಬೇಸತ್ತ ಕಾಂಚನ ಈ ಹಿಂದೆ ಆತ್ಮಹತ್ಯೆಗೂ ಯತ್ನಿಸಿದ್ದರು. ಆದರೆ ಪತಿ ಮಾತ್ರ ತನ್ನ ಹಾದಿ ಬದಲಿಸಲಿಲ್ಲ. ಬದಲಾಗಿ ಈಗ ಹೆಂಡತಿಯೇ ಬೇಡ ಎಂದು ಆಕೆಯನ್ನು ತವರು ಮನೆಗೆ ಬಿಟ್ಟು ಹೋಗಿದ್ದಾನೆ.

ಪೊಲೀಸ್ ಠಾಣೆಗೆ ಮೊರೆ

ಇದರಿಂದ ನೊಂದ ಕಾಂಚನ ಅವರು ಹುಬ್ಬಳ್ಳಿಯ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಭಾರತೀಯ ನ್ಯಾಯ ಸಂಹಿತೆಯ (BNS) ಸಂಬಂಧಪಟ್ಟ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿ ಮಾಲಿಂಗಪ್ಪನನ್ನು ವಿಚಾರಣೆಗೆ ಕರೆಸಿದ್ದಾರೆ. ಆದರೆ, ಪೊಲೀಸರು ಕೇವಲ ಕೌನ್ಸಿಲಿಂಗ್ ನೆಪದಲ್ಲಿ ಕಾಲಹರಣ ಮಾಡುತ್ತಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ. ‘ನನಗೆ ನ್ಯಾಯ ಬೇಕು, ಇಂತಹ ಪತಿಗೆ ತಕ್ಕ ಶಿಕ್ಷೆಯಾಗಬೇಕು. ನಾನು ಇನ್ನು ಮುಂದೆ ಅವನೊಂದಿಗೆ ಬದುಕಲಾರೆ. ಆದರೆ ಇನ್ನೂ ಯಾರೂ ಈ ರೀತಿ ವಂಚನೆಗೆ ಒಳಗಾಗಬಾರದು’ ಎಂದು ಕಾಂಚನ ಕಣ್ಣೀರು ಹಾಕುತ್ತಾ ಅಳಲು ತೋಡಿಕೊಂಡಿದ್ದಾರೆ.

 

ನಾಪತ್ತೆಯಾದ ಕೇರಳ ಬಾಲಕಿ ಕೇಸಿಗೆ ಟ್ವಿಸ್ಟ್;  ಬಾಲಕಿ ತಾಯಿ ಹೇಳಿದ್ದೇನು?

TAGGED:Teacher who gave sleeping pills to his wife and played chess with the woman across the street
Share This Article
Facebook Twitter Copy Link Print
Previous Article ನಾಪತ್ತೆಯಾದ ಕೇರಳ ಬಾಲಕಿ ಕೇಸಿಗೆ ಟ್ವಿಸ್ಟ್;  ಬಾಲಕಿ ತಾಯಿ ಹೇಳಿದ್ದೇನು?
Next Article ಈ ಬಾರಿ ಪಿಯುಸಿಗಿಲ್ಲ 3ನೇ ಪರೀಕ್ಷೆ, ಏಪ್ರಿಲ್ 30ರಿಂದ 2ನೇ ಪರೀಕ್ಷೆ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?