Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಜೈಲು ಕಾಯಲು 550 ಮಾಜಿ ಯೋಧರ ನೇಮಕಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಸರ್ಕಾರ
ಕರ್ನಾಟಕಪ್ರಮುಖ

ರಾಜ್ಯದ ಜೈಲು ಕಾಯಲು 550 ಮಾಜಿ ಯೋಧರ ನೇಮಕಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಸರ್ಕಾರ

Share
3 Min Read
SHARE

ಅಕ್ರಮ ಚಟುವಟಿಕೆಯಿಂದ ಟೀಕೆಗೆ ಗುರಿಯಾಗುವ ನಾಡಿನ ಸೆರೆಮನೆಗಳ ಕಾವಲಿಗೆ ಮಾಜಿ ಯೋಧರನ್ನು ನೇಮಿಸಿಕೊಳ್ಳಲು ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವಾ ಇಲಾಖೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ.

ಮಾಜಿ ಸೈನಿಕರ ನೇಮಿಸುವ ಸಂಬಂಧ ಬಂದೀಖಾನೆ ಇಲಾಖೆ ಸಲ್ಲಿಸಿದ್ದ ಪ್ರಸ್ತಾಪಕ್ಕೆ ರಾಜ್ಯ ಸರ್ಕಾರವು ಹಸಿರು ನಿಶಾನೆ ತೋರಿಸಿದೆ. ಈ ಬೆನ್ನಲ್ಲೇ ಈ ನೇಮಕಾತಿ ಪ್ರಕ್ರಿಯೆ ಕೈಗೆತ್ತಿಕೊಳ್ಳುವ ವಿಚಾರವಾಗಿ ರಾಜ್ಯ ಮಾಜಿ ಸೈನಿಕರ ಕಲ್ಯಾಣ ಸಮಾಜದ ನಿರ್ದೇಶಕರಿಗೆ ಬಂದೀಖಾನೆ ಇಲಾಖೆಯ ಮುಖ್ಯಸ್ಥ ಹಾಗೂ ಡಿಜಿಪಿ ಅಲೋಕ್ ಕುಮಾರ್ ಪತ್ರ ಬರೆದಿದ್ದಾರೆ. ಈ ನೇಮಕಾತಿ ಸಲುವಾಗಿ ವಿಶೇಷ ವಿನಾಯತಿ ಹಾಗೂ ಮಾಸಿಕ 1.87 ಕೋಟಿ ರು. ವೆಚ್ಚಕ್ಕೆ ಸಹ ಸರ್ಕಾರ ಸಮ್ಮತಿಸಿದೆ. ಇದೇ ಮೊದಲ ಬಾರಿಗೆ ಕಾರಾಗೃಹ ಹಾಗೂ ಪೊಲೀಸರ ಹೊರತಾಗಿ ಮಾಜಿ ಸೈನಿಕರು ಜೈಲುಗಳ ಭದ್ರತೆಗೆ ನೇಮಕವಾಗಲಿದ್ದಾರೆ.

ಕೈದಿಗಳಿಗೆ ಡ್ರಗ್ಸ್, ಮೊಬೈಲ್‌ ಹಾಗೂ ಮದ್ಯ ಪೂರೈಕೆ ಸೇರಿದಂತೆ ಕಾರಾಗೃಹಗಳಲ್ಲಿ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪಗಳು ಪದೇ ಪದೇ ಕೇಳಿ ಬರುತ್ತಿವೆ. ಇದಕ್ಕೆ ಪೂರಕವಾಗಿ ವಿಡಿಯೋಗಳು ಹಾಗೂ ಫೋಟೋಗಳು ಸದ್ದು ಮಾಡುತ್ತವೆ. ಜೈಲುಗಳ ಭದ್ರತಾ ವ್ಯವಸ್ಥೆ ಲೋಪವೇ ಅಕ್ರಮ ಚಟುವಟಿಕೆಗಳಿಗೆ ಮೂಲ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ಕಾವಲು ಬಿಗಿಗೊಳಿಸಲು ಮುಂದಾಗಿರುವ ಡಿಜಿಪಿ ಅಲೋಕ್ ಕುಮಾರ್ ಅವರು, ಈಗ ಕಾರಾಗೃಹಗಳ ಭದ್ರತೆಗೆ 550 ಮಾಜಿ ಸೈನಿಕರನ್ನು ಗುತ್ತಿಗೆ ಆಧಾರದಡಿ ನೇಮಕಕ್ಕೆ ನಿರ್ಧರಿಸಿದ್ದಾರೆ. ದೇಶದ ಗಡಿ ಕಾದು ಮರಳಿರುವ ಮಾಜಿ ಯೋಧರು, ಕೆಲವೇ ದಿನಗಳಲ್ಲಿ ಕರುನಾಡಿನ ಸೆರೆಮನೆಗಳ ಕಾವಲಿಗೆ ನಿಲ್ಲಲಿದ್ದಾರೆ. ಈ ಸಂಬಂಧ ಪ್ರತಿ ತಿಂಗಳು 1.87 ಕೋಟಿ ರು. ವೆಚ್ಚಕ್ಕೆ ಸರ್ಕಾರ ಸಹ ಅನುಮೋದನೆ ನೀಡಿದೆ ಎಂದು ತಿಳಿದು ಬಂದಿದೆ.

ಪ್ರಸುತ್ತ ಜೈಲಿನ ಭದ್ರತೆಗೆ ಕಾರಾಗೃಹ ಇಲಾಖೆ ಜತೆ ರಾಜ್ಯ ಕೈಗಾರಿಕಾ ಭದ್ರತಾ ಪಡೆ (ಕೆಎಸ್‌ಐಎಸ್‌ಎಫ್‌)ಯ ಸಿಬ್ಬಂದಿ ಕೂಡ ಕಾರ್ಯನಿರ್ವಹಿಸುತ್ತಿದ್ದಾರೆ. ಈಗ ಮಾಜಿ ಸೈನಿಕರು ಸಹ ಜೈಲುಗಳ ರಕ್ಷಣೆಯಲ್ಲಿ ಹೆಗಲು ಕೊಡಲಿದ್ದಾರೆ.

ತಾತ್ಕಾಲಿಕ ವ್ಯವಸ್ಥೆಯೇ?:

ಕಳೆದ ವರ್ಷ ನವೆಂಬರ್‌ನಲ್ಲಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಕೈದಿಗಳಿಗೆ ವಿಶೇಷ ಆತಿಥ್ಯದ ವಿಡಿಯೋಗಳು ವೈರಲ್ ಆಗಿ ರಾಜ್ಯ ಸರ್ಕಾರ ವಿರುದ್ಧ ಸಾರ್ವಜನಿಕ ವಲಯದಲ್ಲಿ ಕಟುಟೀಕೆಗಳು ವ್ಯಕ್ತವಾಗಿದ್ದವು. ಈ ವಿವಾದ ಬಳಿಕ ಕಾರಾಗೃಹ ಭದ್ರತೆ ಬಿಗಿಗೊಳಿಸಲು ಹೊಸದಾಗಿ 300 ಜೈಲರ್ ಹಾಗೂ ವೀಕ್ಷಕರನ್ನು ನೇಮಿಸಲಾಗುತ್ತದೆ ಸರ್ಕಾರ ಘೋಷಿಸಿತ್ತು. ಆದರೆ ಈ ನೇಮಕಾತಿ ಸಂಬಂಧ ಇದುವರೆಗೆ ಅಧಿಕೃತವಾಗಿ ಪ್ರಕ್ರಿಯೆ ಆರಂಭವಾಗಿಲ್ಲ. ಹೀಗಾಗಿ ಈಗ ಮಾಜಿ ಸೈನಿಕರ ಗುತ್ತಿಗೆ ಆಧಾರದ ಮೇರೆಗೆ ನೇಮಕಕ್ಕೆ ಇಲಾಖೆ ಮುಂದಾಗಿದೆ. ಇದಕ್ಕೆ ನಿಯಮದಲ್ಲಿ ವಿನಾಯಿತಿ ಕೊಟ್ಟಿದೆ.

ಕಾರಾಗೃಹ ಇಲಾಖೆಯಲ್ಲಿ ಖಾಲಿಯಿರುವ ವೀಕ್ಷಕರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ತಾತ್ಕಾಲಿಕವಾಗಿ 550 ಮಾಜಿ ಸೈನಿಕರನ್ನು ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯದನ್ವಯ ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲು ಸರ್ಕಾರ ಅನುಮಿತಿಸಿದೆ. ಅಲ್ಲದೆ ಮಾಜಿ ಸೈನಿಕರ ಸೇವೆಯನ್ನು ಕರ್ನಾಟಕ ಮಾಜಿ ಸೈನಿಕರ ಕಲ್ಯಾಣ ಸಮಾಜದಿಂದ ನೇರವಾಗಿ ಪಡೆಯಲು ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಅಧಿನಿಯದನ್ವಯ-1999ರ ಕಲಂ 4(ಜಿ)ರಡಿ ವಿನಾಯತಿಯನ್ನು ಬಂದೀಖಾನೆ ಇಲಾಖೆಗೆ ಸರ್ಕಾರ ನೀಡಿದೆ.

ಗುತ್ತಿಗೆ ಷರತ್ತುಗಳೇನು?

ವಯಮೋತಿ-45 ವರ್ಷಗಳಿಗಿಂತ ಕಡಿಮೆ ಇರಬೇಕು.

ದೈಹಿಕ ಸಾಮರ್ಥ್ಯ- 3 ಕಿ.ಮೀ ಅಂತರವನ್ನು 20 ನಿಮಿಷದೊಳಗೆ ಪೂರ್ಣಗೊಳಿಸಬೇಕು.

ದೇಹದಾರ್ಢ್ಯತೆB ಶೇಪ್‌ ಒನ್‌ ದೇಹದಾರ್ಢ್ಯತೆ ಹೊಂದಿರಬೇಕು

ವೈಯಕ್ತಿಕ ಹಿನ್ನಲೆ ಯಾವುದೇ ನ್ಯಾಯಿಕ (ಕ್ರಿಮಿನಲ್‌) ಪ್ರಕರಣಗಳು ಇರಬಾರದು.

ಯಾವ್ಯಾವ ಜೈಲಿಗೆ?

ಪರಪ್ಪನ ಅಗ್ರಹಾರ ಬೆಂಗಳೂರು-250, ಬೆಳಗಾವಿ ಹಿಂಡಲಗಾ-30, ಬಳ್ಳಾರಿ-35, ಧಾರವಾಡ-10, ಕಲಬುರಗಿ-55, ಮೈಸೂರು-45, ಶಿವಮೊಗ್ಗ-30, ಬೀದರ-15, ಮಂಗಳೂರು-20, ಮಂಡ್ಯ, ರಾಮನಗರ, ತುಮಕೂರು, ಉಡುಪಿ, ಹಾಸನ ಹಾಗೂ ಮಡಿಕೇರಿ ತಲಾ 10 ಸೇರಿದಂತೆ ಒಟ್ಟು 550 ಹುದ್ದೆಗಳು ಮಂಜೂರಾಗಿವೆ.

ಕೇವಲ 3.5 ಲಕ್ಷ ಗಳಿಸಿದ ಮೋಹನ್​​ಲಾಲ್​ ಸಿನಿಮಾ

TAGGED:Government gives green signal to appoint 550 ex-servicemen to guard state parks
Share This Article
Facebook Twitter Copy Link Print
Previous Article ಕೇವಲ 3.5 ಲಕ್ಷ ಗಳಿಸಿದ ಮೋಹನ್​​ಲಾಲ್​ ಸಿನಿಮಾ
Next Article ₹9 ಸಂಬಳ ಹೆಚ್ಚಳದ ಬಗ್ಗೆ ದೆಹಲಿ ಟೆಕ್ಕಿ ಹೇಳಿದ್ದೇನು?; ಪೋಸ್ಟ್ ವೈರಲ್.!

Popular Posts

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

You Might Also Like

ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?