Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹೆತ್ತ ತಾಯಿಯನ್ನೇ 3ನೇ ಮಹಡಿಯಿಂದ ತಳ್ಳಿ ಕೊಂದ ಮಗ
ಕರ್ನಾಟಕ

ಹೆತ್ತ ತಾಯಿಯನ್ನೇ 3ನೇ ಮಹಡಿಯಿಂದ ತಳ್ಳಿ ಕೊಂದ ಮಗ

Share
2 Min Read
SHARE

ತನ್ನ 75 ವರ್ಷದ ವೃದ್ಧ ಮತ್ತು ಪಾರ್ಶ್ವವಾಯು ಪೀಡಿತ ತಾಯಿಯನ್ನು ತನ್ನ ಮಗನೇ ಅವರು ವಾಸಿಸುತ್ತಿದ್ದ ಬಾಡಿಗೆ ಮನೆಯ ಕಟ್ಟಡದ 3ನೇ ಮಹಡಿಯಿಂದ ಕೆಳಗೆ ತಳ್ಳಿದ್ದು, ಆಕೆ ತಕ್ಷಣವೇ ಸಾವನ್ನಪ್ಪಿದ ಘಟನೆ ಬೆಂಗಳೂರಿನ RR ನಗರದಲ್ಲಿ ನಡೆದಿದೆ.RR ನಗರದ BMEL ಲೇಔಟ್ ನ 3 ನೇ ಹಂತದಲ್ಲಿ ಈ ಘಟನೆ ನಡೆದಿದ್ದು, 75ವರ್ಷದ ಸಾವಿತ್ರಮ್ಮ ಸಿ ಎಂಬ ವೃದ್ದ ತಾಯಿಯನ್ನು ಖಾಸಗಿ ಕಂಪನಿ ಉದ್ಯೋಗಿ ಎಂದು ಹೇಳಿಕೊಳ್ಳುವ ವೆಂಕಟೇಶ್ ತನ್ನ ತಾಯಿಯನ್ನು ನೋಡಿಕೊಳ್ಳುವುದು ಮತ್ತು ಅವರ ಚಿಕಿತ್ಸೆಗೆ ಹಣ ಒದಗಿಸುವುದು ಕಷ್ಟವಾಗುತ್ತಿರುವ ಕಾರಣದಿಂದ 3ನೇ ಮಹಡಿಯಿಂದ ತಳ್ಳಿರುವ ಹಿನ್ನಲೆಯಲ್ಲಿ ಕೊಲೆ ಮಾಡಿದ ಆರೋಪದ ಮೇಲೆ ಪೊಲೀಸರು ಬಂಧಿಸಿದ್ದಾರೆ.

ಘಟನೆಯ ವಿವರ

ವೆಂಕಟೇಶ್‌ ಅವರ ಮನೆ ಮಾಲೀಕ ವಿಕ್ರಮ್ ನೆಲ ಮಹಡಿಯಲ್ಲಿ ವಾಸಿಸುತ್ತಿದ್ದು, ಮೇಲಿನ 2 ಮಹಡಿಗಳನ್ನು ಬಾಡಿಗೆಗೆ ನೀಡಲಾಗಿದೆ. ಇದರಲ್ಲಿ ವೆಂಕಟೇಶ್ ಮೊದಲ ಮಹಡಿಯಲ್ಲಿ ವಾಸಿಸುತ್ತಿದ್ದರು. ಅಂದು ವೆಂಕಟೇಶ್ ತನ್ನ ತಾಯಿಯನ್ನು ಎತ್ತಿ ತಾವು ವಾಸಿಸುತ್ತಿದ ಮಹಡಿಗೆ ಹೋಗಿ ಕೆಳಗೆ ಎಸೆದಿದ್ದು, ಮೇಲಿಂದ ಕೆಳಗೆ ಬಿದ್ದ ರಭಸಕ್ಕೆ ಆ ವೃದ್ದೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಬಳಿಕ ವೆಂಕಟೇಶ್ ಮನೆಗೆ ಹಿಂತಿರುಗಿ ಬಾಗಿಲು ಹಾಕಿಕೊಂಡಿದ್ದಾನೆ.

ಘಟನೆ ನಡೆದ ದಿನ ಮಧ್ಯಾಹ್ನ 3 ಗಂಟೆ ಸುಮಾರಿಗೆ ವೆಂಕಟೇಶ್ ಅವರ ಮನೆ ಮಾಲೀಕ ಇ. ವಿಕ್ರಮ್ ಕಟ್ಟಡದ ಹಿಂಭಾಗದಲ್ಲಿ ಗುಡುಗಿನಂತಹ ದೊಡ್ಡ ಶಬ್ದ ಕೇಳಿದಾಗ ಈ ಘಟನೆ ಬೆಳಕಿಗೆ ಬಂದಿದ್ದು, ವಿಕ್ರಮ್ ಹೇಳಿಕೆಯ ಆಧಾರದ ಮೇಲೆ, ಆರ್.ಆರ್.ನಗರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ವೆಂಕಟೇಶ್ ನನ್ನು ಬಂಧಿಸಿದ್ದಾರೆ.

ತಾಯಿಯನ್ನೇ ಮಗ ಕೊಂದಿದ್ದೇಕೆ?

ಪೊಲೀಸರ ತನಿಖೆಯಲ್ಲಿ ಈ ಕುರಿತು ಆರೋಪಿ ವಿವರಿಸಿದ್ದು, ಆತನ ತಂದೆ ಸುಮಾರು 10 ವರ್ಷಗಳ ಹಿಂದೆ ನಿಧನರಾಗಿದ್ದು, ಅಂದಿನಿಂದ ಆತ ತನ್ನ ತಾಯಿಯನ್ನು ನೋಡಿಕೊಳ್ಳುತ್ತಿದ್ದು, ಆಕೆ 5ವರ್ಷಗಳ ಹಿಂದೆ ಪಾರ್ಶ್ವವಾಯುವಿಗೆ ಒಳಗಾಗಿದ್ದಾರೆ. ಇದರಿಂದ ಆಕೆ ಹಾಸಿಗೆ ಹಿಡಿದಿದ್ದು, ಆಕೆಯನ್ನು ನೋಡಿಕೊಳ್ಳಲು ತಾನು ಕೆಲಸ ಬಿಡುವ ಪರಿಸ್ಥಿತಿ ಬಂದಿದ್ದು, ಆಕೆ ಚೇತರಿಸಿಕೊಳ್ಳುವ ಯಾವುದೇ ಲಕ್ಷಣಗಳು ಕಾಣಲಿಲ್ಲ. ಇದರಿಂದಾಗಿ ಪ್ರತಿದಿನ, ಜೀವನವು ದುಃಖಕರವಾಗುತ್ತಿತ್ತು. ಹಾಗಾಗಿ ಹೀಗೆ ಮಾಡಿರುವುದಾಗಿ ತಿಳಿಸಿದ್ದಾರೆ.

TAGGED:Son kills mother by pushing her from 3rd floor
Share This Article
Facebook Twitter Copy Link Print
Previous Article ಲಾಹೋರ್‌ನಲ್ಲಿ ಲಷ್ಕರ್‌ ಸ್ಥಾಪಕ ಸದಸ್ಯ ಅಮೀರ್‌ ಹಮ್ಜಾ ಮೇಲೆ ಗುಂಡಿನ ದಾಳಿ
Next Article ತಲೆದಂಡ ಭೀತಿ: ಸಚಿವ ಜಮೀರ್‌ ತಲ್ಲಣ!

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?