newsics.com
ಬೆಂಗಳೂರು: ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸುಮಾರು 13,262 ಕೋಟಿ ರೂ. ವೆಚ್ಚದ 11 ಎಲಿವೇಟೆಡ್ ಕಾರಿಡಾರ್ ನಿರ್ಮಾಣ ಸೇರಿದಂತೆ ಹಲವು ಐತಿಹಾಸಿಕ ನಿರ್ಣಯಗಳಿಗೆ ಅನುಮೋದನೆ ನೀಡಲಾಗಿದೆ.
ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲಿ 75.6 ಕಿ.ಮೀ ಉದ್ದದ 11 ಕಾರಿಡಾರ್ ನಿರ್ಮಾಣಕ್ಕೆ ಅಸ್ತು ಎನ್ನಲಾಗಿದೆ. ಐಓಸಿ ಜಂಕ್ಷನ್ನಲ್ಲಿ ಎಲಿವೇಟೆಡ್ ರೋಟರಿ ಫ್ಲೈಓವರ್ ಮತ್ತು ಬೈಯಪ್ಪನಹಳ್ಳಿಯಲ್ಲಿ ಹೆಚ್ಚುವರಿ 2-ಲೇನ್ ROB ನಿರ್ಮಾಣಕ್ಕೆ 436.44 ಕೋಟಿ ರೂ. ಮೀಸಲಿಡಲಾಗಿದೆ.
ಜಲಮಂಡಳಿಯ 5 ಸಂಸ್ಕರಣಾ ಘಟಕಗಳಲ್ಲಿ ತ್ಯಾಜ್ಯದಿಂದ ಬಯೋಗ್ಯಾಸ್ ಉತ್ಪಾದಿಸುವ ಯೋಜನೆಗೆ ಪಿಪಿಪಿ ಮಾದರಿಯಲ್ಲಿ ಒಪ್ಪಿಗೆ ನೀಡಲಾಗಿದೆ.
ವಿಶ್ವವಿದ್ಯಾಲಯಗಳಲ್ಲಿ ನಡೆಯುವ ತಾರತಮ್ಯ ಮತ್ತು ಅನ್ಯಾಯವನ್ನು ತಡೆಯಲು ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ‘ಕರ್ನಾಟಕ ರೋಹಿತ್ ವೇಮುಲ ವಿಧೇಯಕ’ ಮಂಡನೆಗೆ ಸಂಪುಟ ಅನುಮೋದನೆ ನೀಡಿದ್ದು, ವಿದ್ಯಾರ್ಥಿಗಳ ಘನತೆಯ ಹಕ್ಕನ್ನು ಎತ್ತಿಹಿಡಿಯಲು ಈ ಕಾಯ್ದೆ ಸಹಕಾರಿಯಾಗಲಿದೆ.
ಆಸ್ತಿ ತೆರಿಗೆ ವಿನಾಯಿತಿ: ರಾಜಭವನ, ಕಂಠೀರವ ಕ್ರೀಡಾಂಗಣ ಸೇರಿದಂತೆ ಪ್ರಮುಖ ಸರ್ಕಾರಿ ಕಟ್ಟಡಗಳಿಗೆ ಆಸ್ತಿ ತೆರಿಗೆಯಿಂದ ವಿನಾಯಿತಿ ನೀಡಲಾಗಿದೆ.
ಕೆಕೆಆರ್ಟಿಸಿ ಹೊಸ ಭವನ: ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮದ ಕೇಂದ್ರ ಕಚೇರಿ ನಿರ್ಮಾಣಕ್ಕೆ 20 ಕೋಟಿ ರೂ. ಮಂಜೂರು ಮಾಡಲಾಗಿದೆ.
ಕಾರವಾರ ವಿಮಾನ ನಿಲ್ದಾಣ: ವಿಮಾನ ನಿಲ್ದಾಣ ಅಭಿವೃದ್ಧಿ ಜವಾಬ್ದಾರಿಯನ್ನು ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ (AAI) ವಹಿಸಲಾಗಿದೆ.
ಉದ್ಯೋಗ ಭರ್ತಿ: ರಾಜ್ಯದಲ್ಲಿ ಖಾಲಿ ಇರುವ 56,000 ಹುದ್ದೆಗಳ ಭರ್ತಿಗೆ ಹಂತ ಹಂತವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸರ್ಕಾರ ಭರವಸೆ ನೀಡಿದೆ.
https://www.newsics.com/2026/04/17/private-bus-car-head-on-collision-6-people-died-on-the-spot/